Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್, ನಾಗರತ್ನ ಸಂಧಾನ ವಿಫಲ
ವಿಜಯ್ ಅವರು ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ (ಮೇ 28) ಅವರ ಕೇಸಿನ ವಿಚಾರಣೆ ನಡೆಯಿತು. ನ್ಯಾಯಾಧೀಶರು ದುನಿಯಾ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ಅವರಿಗೆ ಪ್ರತ್ಯೇಕವಾಗಿ ಕೌನ್ಸೆಲಿಂಗ್ ನಡೆಸಿದರು.
ಆದರೆ ಇಬ್ಬರ ಮನವೊಲಿಸಲು ಸಾಧ್ಯವಾಗಿಲ್ಲ. "ತಮ್ಮ ಪತ್ನಿಯಿಂದ ನನಗೆ ಸಾಕಷ್ಟು ಅವಮಾನವಾಗಿದೆ. ನನ್ನ ಗೌರವ, ಘನತೆಗೆ ಧಕ್ಕೆಯುಂಟಾಗಿದೆ" ಎಂದು ವಿಜಯ್ ಈ ಸಂದರ್ಭದಲ್ಲಿ ತಿಳಿಸಿದರು ಎನ್ನಲಾಗಿದೆ.
ದುನಿಯಾ ವಿಜಯ್ ಪತ್ನಿ ನಾಗರತ್ನ ಅವರು ಮೂರು ಮಕ್ಕಳನ್ನು ಸಾಕಿ ಸಲುಹಬೇಕಾಗಿದೆ. ತಮಗೆ ಜೀವನಾಂಶ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಹಾಗೆಯೇ ಇನ್ನೊಂದು ಅರ್ಜಿಯಲ್ಲಿ ವಿವಾಹ ವಿಚ್ಛೇದನ ಕೊಡುವುದಿಲ್ಲ ಎಂದೂ ತಿಳಿಸಿದ್ದಾರೆ.
ಇಬ್ಬರ ವಾದ ವಿವಾದಗಳನ್ನು ಕೇಳಿದ ನ್ಯಾಯಾಲಯ ವಿಚಾರಣೆಯನ್ನು ಜು.2ಕ್ಕೆ ಮುಂದೂಡಿದೆ. ವಿಜಯ್ ಅವರಿಗೆ ಆಕ್ಷೇಪಣೆ ಸಲ್ಲಿಸುವಂತೆಯೂ ಸೂಚಿಸಲಾಗಿದೆ. ನ್ಯಾಯಾಲಯಕ್ಕೆ ನಾಗರತ್ನ ಅವರು ಆಟೋದಲ್ಲಿ ಬಂದಿದ್ದರು. (ವಿಚ್ಛೇದನಕ್ಕೆ ದುನಿಯಾ ವಿಜಿ ಕೊಟ್ಟ 25 ಕಾರಣಗಳು)
ಇನ್ನು ದುನಿಯಾ ವಿಜಯ್ ಅವರು ತಮ್ಮ ಪರ ವಕೀಲರಾದ ಶಂಕರಪ್ಪ ಅವರ ಜೊತೆ ಬಂದಿದ್ದರು. ಶಂಕರಪ್ಪ ಅವರು ಖ್ಯಾತ ಕ್ರಿಮಿನಲ್ ಲಾಯರ್. ಈ ಹಿಂದೆ ಅವರು ಅಬ್ದುಲ್ ಕರೀಂ ಲಾಲಾ ತೆಲಗಿ ಹಾಗೂ ವಿನಿ ವಿಂಕ್ ಶಾಸ್ತ್ರಿ ಕೇಸ್ ಗಳನ್ನು ಹ್ಯಾಂಡಲ್ ಮಾಡಿದ್ದಾರೆ. ಮತ್ತೊಮ್ಮೆ ಖ್ಯಾತ ವಕೀಲ ಎಂಟಿ ನಾಣಯ್ಯ ಅವರ ಬಳಿ ಜೂನಿಯರ್ ಆಗಿ ಕೆಲಸ ಮಾಡಿದ್ದಾರೆ. (ಏಜೆನ್ಸೀಸ್)