Don't Miss!
- News India weather: ಈ ಭಾಗಗಳಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ ಮ್ಯಾನೇಜರ್ ಆಗಿ ದ್ವಾರಕೀಶ್ ಪುತ್ರ
ಅವರು ಮ್ಯಾನೇಜರ್ ಆಗುತ್ತಿರುವುದು ಯಾವುದೋ ಬ್ಯಾಂಕಿಗೋ, ಇನ್ಯಾವುದೋ ಸಂಸ್ಥೆಗೋ ಅಲ್ಲ. ಅಭಿನಯ ಚಕ್ರವರ್ತಿ ಬಿರುದಾಂಕಿತ ನಟ ಕಿಚ್ಚ ಸುದೀಪ್ ಅವರಿಗೆ ಪರ್ಸನಲ್ ಮ್ಯಾನೇಜರ್ ಆಗಿ ನೇಮಕವಾಗಿದ್ದಾರೆ.
ಇನ್ನು ಮುಂದೆ ಸುದೀಪ್ ಅವರ ಎಲ್ಲಾ ವ್ಯವಹಾರಗಳನ್ನು ಯೋಗೀಶ್ ಅವರೇ ನೋಡಿಕೊಳ್ಳಲಿದ್ದಾರೆ. ಅದು ಡೇಟ್ಸ್ ಹೊಂದಾಣಿಕೆ ಇರಬಹುದು, ಸಂಭಾವನೆ ವಿಚಾರ ಆಗಿರಬಹುದು, ಕಥೆಯನ್ನು ಓಕೆ ಮಾಡುವುದು ಹೀಗೆ ಸುದೀಪ್ ಅವರ ಮುಕ್ಕಾಲು ಭಾಗದ ಜವಾಬ್ದಾರಿಯನ್ನು ಹೊರಲಿದ್ದಾರೆ.
ಯೋಗೀಶ್ ನಿರ್ಮಾಣದ ಪ್ರಿಯಾಮಣಿ ಅಭಿನಯದ 'ಚಾರುಲತಾ' ಚಿತ್ರ ಅದ್ಯಾಕೋ ಏನೋ ನಿರೀಕ್ಷಿಸಿದ ಮಟ್ಟದಲ್ಲಿ ಯಶಸ್ವಿಯಾಗಲಿಲ್ಲ. ಸಯಾಮಿಗಳ ಕಥೆಯನ್ನು ಒಳಗೊಂಡಿದ್ದ ಈ ಚಿತ್ರ ಸದ್ದಿಲ್ಲದಂತೆ ಮಕಾಡೆ ಮಲಗಿದ್ದೊಂದು ದುರಂತ.
ದ್ವಾರಕೀಶ್ ಅವರ 50 ವರ್ಷಗಳ ಸಿನಿ ಜೀವನದಲ್ಲಿ 'ಚಾರುಲತಾ' ಚಿತ್ರ ಭಾರಿ ನಿರಾಸೆ ಮೂಡಿಸಿತು. ಈ ಚಿತ್ರದ ನಿರ್ಮಾಣ ಜವಾಬ್ದಾರಿಯನ್ನು ಯೋಗೀಶ್ ಹೊತ್ತಿದ್ದರು. ಚಿತ್ರ ಯಾಕೋ ಏನೋ ಎಲ್ಲರ ನಿರೀಕ್ಷೆಯನ್ನೂ ಉಲ್ಟಾಪಲ್ಟಾ ಮಾಡಿತು.
ಯೋಗೀಶ್ ಅವರು ಸುದೀಪ್ ಮುಖ್ಯಭೂಮಿಕೆಯಲ್ಲಿದ್ದ 'ವಿಷ್ಣುವರ್ಧನ' ಚಿತ್ರವನ್ನು ನಿರ್ಮಿಸಿದ್ದರು. ಆ ಚಿತ್ರ ಬಾಕ್ಸಾಫೀಸಲ್ಲಿ ಸದ್ದು ಮಾಡಿದ್ದು ಗೊತ್ತೇ ಇದೆ. ಯೋಗೀಶ್ ಅವರ ಕಾರ್ಯಕ್ಷಮತೆಯನ್ನು ಹತ್ತಿರದಿಂದ ಕಂಡಿದ್ದ ಸುದೀಪ್ ಈಗ ಅವರನ್ನು ಮ್ಯಾನೇಜರ್ ಆಗಿ ನೇಮಕ ಮಾಡಿಕೊಂಡಿದ್ದಾರೆ. (ಏಜೆನ್ಸೀಸ್)