Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುರಿವ ಮಳೆಯಲ್ಲಿ ಚಾಲೆಂಜಿಂಗ್ ಸ್ಟಾರ್ ಭಾರಿ ಫೈಟ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಚಿತ್ರಗಳಲ್ಲಿ ಹಾಡುಗಳು, ಪಂಚಿಂಗ್ ಡೈಲಾಗ್ ಗಳು ಎಷ್ಟು ಮುಖ್ಯವೋ ಫೈಟ್ ಗಳಿಗೂ ಅಷ್ಟೇ ಪ್ರಾಮುಖ್ಯತೆ ಇರುತ್ತದೆ. ಭಾರಿ ಬಜೆಟ್ ನಲ್ಲಿ ಡಿ.ಸುರೇಶ್ ಗೌಡ ಹಾಗೂ ಪಿ.ಎಸ್. ಶ್ರೀನಿವಾಸಮೂರ್ತಿ ನಿರ್ಮಿಸುತ್ತಿರುವ ಬೃಂದಾವನ ಚಿತ್ರದ ಸಾಹಸ ಸನ್ನಿವೇಶಗಳನ್ನು ಗಜೇಂದ್ರಗಡದಲ್ಲಿ ಚಿತ್ರೀಕರಿಸಲಾಗುತ್ತಿದೆ.
ಶ್ರೀ ಸೀತಾಭೈರವೇಶ್ವರ ಪ್ರೊಡಕ್ಷನ್ ಪ್ರೈ. ಲಿ.ಲಾಂಛನದಡಿಯಲ್ಲಿ ನಿರ್ಮಿಸುತ್ತಿರುವ ಈ ಚಿತ್ರ ದರ್ಶನ್ ಅವರ ಮತ್ತೊಂದು ಅದ್ದೂರಿ ಚಿತ್ರ. ಮೈಸೂರಿನ ಲಲಿತಮಹಲ್, ಚಾಮುಂಡಿಬೆಟ್ಟ ಹಾಗೂ ಸುತ್ತಮುತ್ತ ಹಲವಾರು ಸನ್ನಿವೇಶಗಳನ್ನು ಚಿತ್ರೀಕರಿಸಿಕೊಳ್ಳಲಾಯಿತು.
ಹೊಡೆದಾಟದ ಸನ್ನಿವೇಶಗಳನ್ನು ಏಳು ಕ್ಯಾಮರಾ, ಜಿಮ್ಮಿ ಜಿಪ್, ಬಳಸಿ ಚಿತ್ರಿಸಿಕೊಳ್ಳಲಾಯಿತು. ಚಿತ್ರದ ದ್ವಿತೀಯ ಹಂತದ ಚಿತ್ರೀಕರಣವು ಜುಲೈ ಹದಿನೈದರವರೆವಿಗೂ ಮುಂದುವರೆಯಲಿದೆ ಎಂದು ನಿರ್ಮಾಪಕ ಪಿ.ಎಸ್. ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.
ಚಿತ್ರಕ್ಕೆ ಕೆ.ವಿ. ರಾಜು ಸಂಭಾಷಣೆ, ಹರಿಕೃಷ್ಣ ಸಂಗೀತ, ಕವಿರಾಜ್ ನಾಗೇಂದ್ರ ಪ್ರಸಾದ್ ಸಾಹಿತ್ಯ, ರಮೇಶ್ ಬಾಬು ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ರವಿವರ್ಮ ಸಾಹಸ, ಗಣೇಶ್ (ಹೈದರಾಬಾದ್) ನೃತ್ಯ, ಲಿಂಗರಾಜು ನಿರ್ದೇಶನ ಸಹಕಾರ, ಸುಂದರರಾಜ್ ನಿರ್ಮಾಣ ಮೇಲ್ವಿಚಾರಣೆ, ಗಗನ್ ಮೂರ್ತಿ ನಿರ್ಮಾಣ ನಿರ್ವಹಣೆಯಿದೆ. ಚಿತ್ರದ ಚಿತ್ರಕಥೆ ಮತ್ತು ನಿರ್ದೇಶನ ಕೆ. ಮಾದೇಶ್.
ತಾರಾಗಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಕಾರ್ತಿಕಾ ನಾಯರ್, ಮಿಲನಾ, ಗೀತಾ, ಶರತ್ ಬಾಬು, ಸಾಯಿಕುಮಾರ್, ನಿರೋಷಾ, ಜೈಜಗದೀಶ್, ಸಂಗೀತಾ, ಸಾಧು ಕೋಕಿಲ, ಮೋಹನ್ ಜುನೇಜಾ, ದೊಡ್ಡಣ್ಣ, ಕಿಲ್ಲರ್ ವೆಂಕಟೇಶ್, ಶೋಭಾ, ಜಾನ್ ಕೋಕೈನ್, ಅಜಯ್ ಹೈದರಾಬಾದ್, ಪ್ರಕಾಶ್ ಹೆಗ್ಗೋಡು, ಕುರಿ ಪ್ರತಾಪ, ವೀಣಾ ಸುಂದರ್, ಕಿಲ್ಲರ್ ವೆಂಕಟೇಶ್ ಮುಂತಾದವರು ಇದ್ದಾರೆ. (ಒನ್ಇಂಡಿಯಾ ಕನ್ನಡ)