twitter
    For Quick Alerts
    ALLOW NOTIFICATIONS  
    For Daily Alerts

    ನಿರ್ಮಾಪಕ ಬಷೀದ್ ಗೆ ಷರತ್ತುಬದ್ಧ ಜಾಮೀನು

    By Rajendra
    |

    ಕನ್ನಡ ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ ಕೆ.ಬಷೀದ್ ಅವರಿಗೆ ಜಾಮೀನು ಮಂಜೂರಾಗಿದೆ. 'ಬೆಂಕಿ ಬಿರುಗಾಳಿ' ಚಿತ್ರದ ಕೆಲವು ದೃಶ್ಯಗಳನ್ನು ತಿರುಚಿ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಿದ ಆರೋಪವನ್ನು ಅವರು ಎದುರಿಸುತ್ತಿದ್ದಾರೆ. ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ಅವರಿಗೆ 8ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

    ಜಾಮೀನಿಗೆ ವಿಧಿಸಿರುವ ಷರತ್ತುಗಳು ಹೀಗಿವೆ. ಪೊಲೀಸರ ಅನುಮತಿ ಪಡೆಯದೆ ಅವರು ನಗರದಿಂದ ಹೊರಹೋಗುವಂತಿಲ್ಲ. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ಸಾಕ್ಷಿಗಳನ್ನು ನಾಶಪಡಿಸುವಂತಿಲ್ಲ. ರು.1 ಲಕ್ಷ ಮೊತ್ತದ ಬಾಂಡ್ ಪಡೆದು ಅವರಿಗೆ ಜಾಮೀನು ನೀಡಲಾಗಿದೆ.

    'ಬೆಂಕಿ ಬಿರುಗಾಳಿ' ಚಿತ್ರದ ದೃಶ್ಯಗಳನ್ನು ತಿರುಚಿ ಅವನ್ನು ಯೂಟ್ಯೂಬ್ ಗೆ ಹಾಕಿ ತಮ್ಮ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟಿ ರಿಷಿಕಾ ಸಿಂಗ್ ಏ.28ರಂದು ಸಂಜಯನಗರ ಪೊಲೀಸರಿಗೆ ದೂರು ನೀಡಿದ್ದರು.

    ಅದಾದ ಬಳಿಕ ಬಷೀದ್ ತಲೆಮರೆಸಿಕೊಂಡಿದ್ದರು. ಬುಧವಾರ (ಮೇ.15) ಅವರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದಾರೆ. ಬಷೀದ್ ವಿರುದ್ಧ ಪ್ರಾಣ ಬೆದರಿಕೆ, ಮಹಿಳೆಯ ಗೌರವಕ್ಕೆ ಧಕ್ಕೆ, ಮಾಹಿತಿ ತಂತ್ರಜ್ಞಾನದ ದುರುಪಯೋಗ ಪ್ರಕರಣಗಳು ದಾಖಲಾಗಿವೆ. (ಏಜೆನ್ಸೀಸ್)

    English summary
    Kannada film Producer SK Basheed gets conditional bail. Actress Rishika Singh lodged a complaint on with Sanjaynagar police, accusing director-producer Basheed of threatening her and uploading explicit scenes of her on the Internet. 
 
    Friday, May 17, 2013, 12:30
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X