Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ಪತ್ನಿ ಸೇರಿ 11 ಮಂದಿ ವಿರುದ್ಧ ಎಫ್.ಐ.ಆರ್ ದಾಖಲು
ನಟ ದುನಿಯಾ ವಿಜಯ್ ಪತ್ನಿ ನಾಗರತ್ನ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. [ದುನಿಯಾ ವಿಜಯ್ ವಿರುದ್ಧ 'ಗೂಂಡಾಗಿರಿ' ಆರೋಪ.!?]
ನಾಗರತ್ನ ಹಾಗೂ ಕುಟುಂಬದವರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿರುವುದರಿಂದ ಆನೇಕಲ್ ಪೊಲೀಸರು ಎಫ್.ಐ.ಆರ್ ದಾಖಲಿಸಿಕೊಂಡಿದ್ದಾರೆ.
ಘಟನೆ ಹಿನ್ನಲೆ
ದುನಿಯಾ ವಿಜಯ್ ಪತ್ನಿ ನಾಗರತ್ನ ಸಹೋದರ ಕೃಷ್ಣಮೂರ್ತಿಗೆ ಮೀನಾಕ್ಷಿ ಎಂಬುವರ ಜೊತೆ ವಿವಾಹವಾಗಿತ್ತು. ನಾಗರತ್ನ ಹಾಗೂ ಕುಟುಂಬಸ್ಥರು ಮೀನಾಕ್ಷಿ ರವರಿಗೆ ವರದಕ್ಷಿಣೆ ಕಿರುಕಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. [ಮೌನ ಮುರಿದ ದುನಿಯಾ ವಿಜಯ್ ಪತ್ನಿ ನಾಗರತ್ನ]
ಆಸ್ಪತ್ರೆಯಲ್ಲಿ ದಾಖಲಾಗಿರುವ ಮೀನಾಕ್ಷಿ
ನಾಗರತ್ನ ಅವರ ತಂದೆ, ತಾಯಿ ಹಾಗೂ ಸಹೋದರಿ ಸೇರಿ ಮೀನಾಕ್ಷಿ ರವರಿಗೆ ವಿಷ ಕೊಟ್ಟು, ಕತ್ತು ಹಿಸುಕಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಖಾಸಗಿ ಸುದ್ದಿ ವಾಹಿನಿಗಳು ವರದಿ ಮಾಡಿದೆ. ವಿಷ ಆಹಾರ ಸೇವನೆಯಿಂದ ತೀವ್ರ ಅಸ್ವಸ್ಥರಾಗಿರುವ ಮೀನಾಕ್ಷಿ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. [ದುನಿಯಾ ವಿಜಿ-ನಾಗರತ್ನ ಸಂಧಾನಕ್ಕೆ 6 ಸೂತ್ರಗಳು]
ಪ್ರಕರಣ ದಾಖಲಾಗಿದೆ
ಮೀನಾಕ್ಷಿ ಪೋಷಕರಿಂದ ಆನೇಕಲ್ ಪೊಲೀಸ್ ಠಾಣೆಯಲ್ಲಿ ನಾಗರತ್ನ ಕುಟುಂಬದವರ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. [ವೈಮನಸು ಮರೆತು ಒಂದಾದ ವಿಜಯ್ - ನಾಗರತ್ನ]
ಎಫ್.ಐ.ಆರ್ ದಾಖಲು
ಪ್ರಕರಣಕ್ಕೆ ಸಂಬಂಧಪಟ್ಟಂತೆ ದುನಿಯಾ ವಿಜಯ್ ಪತ್ನಿ ನಾಗರತ್ನ ಸೇರಿದಂತೆ ಒಟ್ಟು 11 ಮಂದಿ ಕುಟುಂಬಸ್ಥರ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಇತ್ತ ಮೀನಾಕ್ಷಿ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.