Don't Miss!
- News ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ನಾಯಕನೇ ಇಲ್ಲ: ಪ್ರಧಾನಿ ಮೋದಿ!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗೋವಿಂದ'ನ ಗೂಗ್ಲಿಗೆ ತೆಲುಗು ಪ್ರೇಕ್ಷಕರು ಔಟ್
ಗೋವಿಂದಾಯ ನಮಃ ಹಾಗೂ ಗೂಗ್ಲಿ ಚಿತ್ರಗಳ ನಿರ್ದೇಶಕ ಪವನ್ ಒಡೆಯರ್ ತೆಲುಗು ಬಾಕ್ಸ್ ಆಫೀಸ್ ನಲ್ಲೂ ಗೆದ್ದು ಬಂದಿದ್ದಾರೆ. ಕನ್ನಡದಲ್ಲಿ ಭರ್ಜರಿ ಯಶಸ್ಸು ಸಾಧಿಸಿದ ಗೋವಿಂದಾಯ ನಮಃ ಚಿತ್ರ ತೆಲುಗಿನಲ್ಲಿ 'ಪೋಟುಗಾಡು' ಎಂಬ ಹೆಸರಿನಲ್ಲಿ ರೀಮೇಕ್ ಆಗಿದೆ.
ಮೋಹನ್ ಬಾಬು ಅವರ ಪುತ್ರ ಮಂಚು ಮನೋಜ್ ಮುಖ್ಯಭೂಮಿಕೆಯಲ್ಲಿರುವ 'ಪೋಟುಗಾಡು' ಚಿತ್ರ ಬಾಕ್ಸ್ ಆಫೀಸಲ್ಲಿ ಗೆದ್ದಿದೆ. ಈ ಚಿತ್ರಕ್ಕೆ ತೆಲುಗು ಮಾಧ್ಯಮಗಳಲ್ಲಿ ಅಷ್ಟೇನು ಮೆಚ್ಚುಗೆ ವ್ಯಕ್ತವಾಗಿರಲಿಲ್ಲ. ಆದರೆ ಬಕ್ಸ್ ಆಫೀಸಲ್ಲಿ ಮಾತ್ರ ಸದ್ದು ಮಾಡಿದೆ. [ಗೋವಿಂದಾಯ ನಮಃ ಚಿತ್ರ ವಿಮರ್ಶೆ]
ಮಂಚು ಮನೋಜ್ ಜೊತೆಗೆ ಈ ಚಿತ್ರದಲ್ಲಿ ಸಾಕ್ಷಿ ಚೌದರಿ, ಸಿಮ್ರಾನ್ ಕೌರ್ ಮುಂಡಿ, ರೇಚಲ್ ವೇಸ್, ಅನುಪ್ರಿಯಾ ಮುಖ್ಯಭೂಮಿಕೆಯಲ್ಲಿದ್ದಾರೆ. ಇದು ತೆಲುಗು ಚಿತ್ರವಾದರೂ ಬಿಜಾಪುರ, ಬೆಂಗಳೂರುನಲ್ಲಿ ಬಹುತೇಕ ಭಾಗವನ್ನು ಚಿತ್ರೀಕರಿಸಿರುವುದು ವಿಶೇಷ.
ರಾಮೋಜಿ ಫಿಲಂ ಸಿಟಿಯಲ್ಲೂ ಚಿತ್ರೀಕರಿಸಲಾಗಿದೆ. ಕೆಲವು ಸನ್ನಿವೇಶಗಳನ್ನು ಜೋಗ್ ಫಾಲ್ಸ್ ನಲ್ಲಿ ಚಿತ್ರೀಕರಿಸಲು ಪ್ಲಾನ್ ಮಾಡಲಾಗಿತ್ತು. ಆದರೆ ಅಲ್ಲಿ ಸಾಕಷ್ಟು ಹಸಿರು ಇಲ್ಲದ ಕಾರಣ ಶೂಟಿಂಗ್ ಕ್ಯಾನ್ಸಲ್ ಮಾಡಲಾಗಿತ್ತು. ಕಡೆಗೆ ಚಿತ್ರದ ಆತ್ಮಹತ್ಯೆ ದೃಶ್ಯಗಳನ್ನು ನಂದಿ ಬೆಟ್ಟದಲ್ಲಿ ಚಿತ್ರೀಕರಿಸಿಕೊಂಡೆವು ಎನ್ನುತ್ತಾರೆ ಪವನ್. (ಏಜೆನ್ಸೀಸ್)