Don't Miss!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲ್ಲರಿಗೂ ಧನ್ಯವಾದಗಳು: ಗೀತಾ ಮತ್ತು ಶಿವರಾಜಕುಮಾರ್
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಜೇಷ್ಠ ಪುತ್ರಿ ಡಾ.ನಿರುಪಮಾ ಅವರ ವಿವಾಹವು ಡಾ.ದಿಲೀಪ್ ಅವರ ಜೊತೆ ಕಳೆದ ಸೋಮವಾರ (ಆಗಸ್ಟ್ 31) ದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ವೈಭವದಿಂದ ನೆರವೇರಿದೆ.
ಇದೀಗ ನಟ ಶಿವರಾಜ್ ಕುಮಾರ್ ಅವರು ತಮ್ಮ ಮುದ್ದು ಮಗಳ ಮದುವೆಯ ಸಂಭ್ರಮವನ್ನು ಎಲ್ಲಾ ಅಭಿಮಾನಿ ಬಳಗಕ್ಕೆ ಹಾಗೂ ಪ್ರೇಕ್ಷಕರಿಗೆ ತಲುಪಿಸಿದ್ದಕ್ಕಾಗಿ ಎಲ್ಲಾ ಮಾಧ್ಯಮ ಬಂಧುಗಳಿಗೆ ಶನಿವಾರ (ಸೆಪ್ಟೆಂಬರ್ 5) ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದ್ದಾರೆ.[ಶಿವಣ್ಣ ಮಗಳ ಮದುವೆಯಲ್ಲಿ ಸುದೀಪ್-ಪುನೀತ್ ಮಾಡಿದ್ದೇನು? ]
ಹೀಗಾಗಿ ನಟ ಶಿವರಾಜ್ ಕುಮಾರ್ ಅವರು ವಿಶೇಷವಾಗಿ ಮಾಧ್ಯಮದವರಿಗೆಂದೇ ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಶನಿವಾರ (ಸೆಪ್ಟೆಂಬರ್ 5) ದಂದು ಸ್ಪೆಷಲ್ ಗೆಟ್-ಟುಗೆದರ್ ಪಾರ್ಟಿ ಆರೆಂಜ್ ಮಾಡಿದ್ದರು.[ಶಿವಣ್ಣ ಮಗಳ ಮದುವೆಯ 'ರಾಜ' ವೈಭೋಗ]
ಈ ಸಂದರ್ಭದಲ್ಲಿ ಮಾತನಾಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮಗಳ ಮದುವೆಯ ಸಂಭ್ರಮವನ್ನು ಅದ್ಧೂರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಿದ್ದಕ್ಕಾಗಿ ಹಾಗೂ ಮದುವೆ ಸಾಂಗವಾಗಿ ನೆರವೇರಿದ್ದಕ್ಕಾಗಿ ಮಾದ್ಯಮ ವರ್ಗದವರಿಗೆ ಧನ್ಯವಾದ ತಿಳಿಸಿದ್ದಾರೆ.[ಮುತ್ತಣ್ಣನ ಮಗಳ ಮದುವೆಗೆ ಕುಮಾರನಿಗಿಲ್ಲ ಆಹ್ವಾನ ]
ಈ ವಿಶೇಷ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್, ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಗೀತಾ ಶಿವರಾಜ್ ಕುಮಾರ್ ಅವರ ಸೋದರ ಮಧು ಬಂಗಾರಪ್ಪ, ಕೆ.ಪಿ ಶ್ರೀಕಾಂತ್ ಮುಂತಾದವರು ಭಾಗವಹಿಸಿದ್ದರು.