Don't Miss!
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಲ್ಲಕ್ಕಿ ನಿರ್ದೇಶನದಲ್ಲಿ 'ಶೂರ ಸಿಂಧೂರ ಲಕ್ಷ್ಮಣ'
ಈ ಹಿಂದೆ ಶ್ರೀ ಕ್ಷೇತ್ರ ಕೈವಾರ ತಾತಯ್ಯ, ದೇವನಹಳ್ಳಿ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದ ಪಲ್ಲಕ್ಕಿ ಈಗ ಮತ್ತೊಂದು ಐತಿಹಾಸಿಕ ಚಲನಚಿತ್ರಕ್ಕೆ ಕೈಹಾಕಿದ್ದಾರೆ. ಉತ್ತರ ಕರ್ನಾಟಕದಾದ್ಯಂತ ನಾಟಕದ ಮೂಲಕ ಮನೆ ಮಾತಾದ ಶೂರ ಸಿಂಧೂರ ಲಕ್ಷ್ಮಣ ಸ್ವಾತಂತ್ರ್ಯ ಯೋಧನ ಕಥೆಯನ್ನು ತೆರೆಯ ಮೇಲೆ ತರಲು ಸಿದ್ಧತೆ ನಡೆಸಿದ್ದಾರೆ.
ಬಡ ಜನತೆಯ ಅನ್ನದಾತನಾಗಿ ದೀನ ದಲಿತರನ್ನು ತೆರಿಗೆಯಿಂದ ಮುಕ್ತಗೊಳಿಸಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕೆಚ್ಚೆದೆಯಿಂದ ಹೋರಾಡಿದ ಶೂರ ಸಿಂಧೂರ ಲಕ್ಷ್ಮಣ. ಅವರ ದೇಶ ಪ್ರೇಮವನ್ನು ಸಾರುವ ನೈಜ ಕಥೆ ಇದಾಗಿದ್ದು ಈ ಯೋಧನ ಬಗ್ಗೆ ಇದುವರೆಗೆ ಯಾರೂ ಅರಿಯದ ಇನ್ನೂ ಹಲವಾರು ಸಂಗತಿಗಳನ್ನು ಸಂಗ್ರಹಿಸಿ ಈ ಚಿತ್ರದಲ್ಲಿ ಪಲ್ಲಕ್ಕಿ ಅಳವಡಿಸಿಕೊಳ್ಳಲಿದ್ದಾರೆ. [ಭಗತ್ ಬಗ್ಗೆ ಗೊತ್ತಿಲ್ಲದ ಸಣ್ಣಸಣ್ಣ ಸಂಗತಿಗಳು]
ತಾತಾ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಲಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಹಾಗೂ ನಿರ್ಮಾಣದ ಜವಾಬ್ದಾರಿಯನ್ನು ಪಲ್ಲಕ್ಕಿಯವರೇ ಹೊತ್ತಿದ್ದಾರೆ. ಈಗಾಗಲೇ ಸಾಮಾಜಿಕ ಹಾಗೂ ಪೌರಾಣಿಕ ಚಿತ್ರಗಳನ್ನು ನಿರ್ದೇಶಿಸಿ ಅನುಭವ ಪಡೆದಿರುವ ಪಲ್ಲಕ್ಕಿ ಇದೇ ಮೊದಲ ಬಾರಿಗೆ ಐತಿಹಾಸಿಕ ಚಿತ್ರ ನಿರ್ದೇಶಿಸ ಹೊರಟಿದ್ದಾರೆ.
ಸಿಂಧೂರ ಲಕ್ಷ್ಮಣನ ಕುಟುಂಬವೇ ಇಲ್ಲವಾಗಿದೆ ಎಂದುಕೊಂಡಿದ್ದ ಸಮಯದಲ್ಲಿ ದೇವನಹಳ್ಳಿ ಚಿತ್ರದ ಮುಹೂರ್ತಕ್ಕೆ ಅವರ ಕುಟುಂಬದವರನ್ನು ಕರೆಸಿ ಪತ್ರಕರ್ತರಿಗೆ ಪರಿಚಯಿಸಿದ ಪಲ್ಲಕ್ಕಿ ಈಗ ಅದೇ ಚಿತ್ರವನ್ನು ಮಾಡಲು ಹೊರಟಿದ್ದಾರೆ.
ಆಶಾಡ ಮುಗಿದ ನಂತರ ಚಿತ್ರೀಕರಣ ಪ್ರಾರಂಭವಾಗಲಿರುವ ಈ ಚಿತ್ರದಲ್ಲಿ ಅಲ್ಲಮಪ್ರಭು ಹಾಗೂ ಬಸವಣ್ಣನವರ ವಚನಗಳನ್ನೂ ಸಹ ಬಳಸಿಕೊಳ್ಳಲಾಗುವುದು. ಚಿತ್ರಕ್ಕೆ ಬಿ.ಎಲ್. ವೇಣು ಸಂಭಾಷಣೆ, ಎಂ.ಆರ್. ಸೀನು ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ಸುರೇಶ್ ಅರಸ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ, ಡಾ. ಬರಗೂರು ರಾಮಚಂದ್ರಪ್ಪ, ಡಾ.ಜಿ.ಎನ್. ಮಲ್ಲಿಕಾರ್ಜುನಪ್ಪ, ಡಾ.ದೊಡ್ಡರಂಗೇಗೌಡರ ಸಾಹಿತ್ಯವಿದ್ದು ತಾರಾಬಳಗದ ಆಯ್ಕೆ ನಡೆಯುತ್ತಿದೆ. (ಒನ್ಇಂಡಿಯಾ ಕನ್ನಡ)