Don't Miss!
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- News Lok Sabha Elections 2024: ಬೆಂಗಳೂರಿನಲ್ಲಿ ಮತದಾನದ ದಿನ ಏನಿರುತ್ತೆ...ಏನಿರಲ್ಲ..?
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡು ಹುಚ್ಚಾಟ ನಡೆಸಿದ ವೆಂಕಟ್.!
ಹುಚ್ಚ ವೆಂಕಟ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ. ಕೇವಲ ಯೂಟ್ಯೂಬ್ ಸ್ಟಾರ್ ಆಗಿದ್ದ ಹುಚ್ಚ ವೆಂಕಟ್ ಗೆ ಯಾವ ದೊಡ್ಡ ಸ್ಟಾರ್ ಗೂ ಸಿಗದ ಪಬ್ಲಿಸಿಟಿ ಸಿಕ್ಕಿದ್ದು, ವೆಂಕಟ್ ಅವರು ರಾತ್ರಿ ಬೆಳಗಾಗುವುದರೊಳಗೆ ಸ್ಟಾರ್ ಆಗಿದ್ದರು.
ಇದೀಗ ಅದೇ ಯೂಟ್ಯೂಬ್ ಸ್ಟಾರ್ ಹುಚ್ಚ ವೆಂಕಟ್ ಜೈಲಿನ ಹೊರಗಡೆ ಅವಾಂತರ ಮಾಡಿದ್ದು ಸಾಲದು ಅಂತ ಜೈಲಿನ ಒಳಗೂ ರಂಪಾಟ ಮಾಡಿ ಪೊಲೀಸರಿಗೂ ತಲೆ ಬಿಸಿಯಾಗುವಂತೆ ಮಾಡಿದ್ದಾರೆ.[ಅಂಬೇಡ್ಕರ್ 'ಎಕ್ಕಡ' ಅಂದಿದ್ದ ಹುಚ್ಚ ವೆಂಕಟನ ಬಂಧನ]
ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಜೈಲು ಸೇರಿರುವ ನಟ-ನಿರ್ದೇಶಕ ಹುಚ್ಚ ವೆಂಕಟ್ ಅವರಿಗೆ ನ್ಯಾಯಾಲಯದಲ್ಲಿ ಜಾಮೀನು ನೀಡಲು ತನಗೆ ಯಾರು ಶ್ಯೂರಿಟಿ ನೀಡುತ್ತಿಲ್ಲ ಎಂದು ಆಕ್ರೋಶಗೊಂಡು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಗೋಡೆ, ಸರಳುಗಳಿಗೆ ತಲೆ ಚಚ್ಚಿಕೊಂಡು ರಂಪಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.
ನನಗೆ ವಿಶ್ವದಾದ್ಯಂತ ಹಾಗೂ ಜೈಲಿನಲ್ಲೂ ಅಭಿಮಾನಿಗಳಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದ ಹುಚ್ಚ ವೆಂಕಟ್ ಗೆ ಯಾರು ಶ್ಯೂರಿಟಿ ಕೊಡಲು ಮುಂದೆ ಬರುತ್ತಿಲ್ಲ ಎಂದು ಅಸಮಾಧಾನಗೊಂಡು, ಈ ರೀತಿಯಾಗಿ ವರ್ತಿಸಿದ್ದಾರೆ ಎಂದು ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.[ಹುಚ್ಚ ವೆಂಕಟ್ ಜೈಲು ಪಾಲು, ಡಿ.4ರ ತನಕ ನ್ಯಾಯಾಂಗ ಬಂಧನ]
ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಕೂಡ ನ್ಯಾಯಾಲಯಕ್ಕೆ ತನ್ನ ಪರವಾಗಿ ಯಾರು ಶ್ಯೂರಿಟಿ ನೀಡಲು ಮುಂದೆ ಬಾರದೇ ಇದ್ದಿದ್ದರಿಂದ ಆಕ್ರೋಶಗೊಂಡಿದ್ದ ಹುಚ್ಚ ವೆಂಕಟ್ ಆದಿತ್ಯವಾರ ಸಂಜೆಯಿಂದಲೇ ಕಿರುಚಾಡುತ್ತಿದ್ದರಂತೆ. ಆದರೆ ಸೋಮವಾರ (ನವೆಂಬರ್ 30) ಬೆಳಗ್ಗೆ ಅವರ ಕೋಪ ಮಿತಿಮೀರಿ ಜೈಲಿನ ಗೋಡೆ, ಕಂಬಿಗೆ ತಲೆ ಚಚ್ಚಿಕೊಂಡು ತೀವ್ರ ಗಾಯ ಮಾಡಿಕೊಂಡಿದ್ದಾರೆ.
ತಲೆ ಚಚ್ಚಿಕೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದ್ದು, ಹುಚ್ಚ ವೆಂಕಟ್ ಅವರನ್ನು ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ನಂತರ ಮತ್ತೆ ಜೈಲಿಗೆ ಕಳುಹಿಸಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.[ಯಾರೀ ಹುಚ್ಚ ವೆಂಕಟ್? ನಿಮಗೆ ಗೊತ್ತಿಲ್ಲದ ಸತ್ಯ ಸಂಗತಿ]
ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಜ್ಞಾನ ಭಾರತಿ ಪೊಲೀಸರ ಮುಂದೆ ಶರಣಾಗಿದ್ದ ಹುಚ್ಚ ವೆಂಕಟ್ ಅವರನ್ನು ಬಳಿಕ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು.
ತದನಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಿತ್ತು. ಆದರೆ ಶ್ಯೂರಿಟಿ ನೀಡಲು ಯಾರು ಮುಂದಾಗದೇ ಇರುವ ನಿಟ್ಟಿನಲ್ಲಿ ಹುಚ್ಚ ವೆಂಕಟ್ ಅವರಿಗೆ ಇನ್ನು ಬಿಡುಗಡೆ ಭಾಗ್ಯ ದೊರಕಿಲ್ಲ.