Don't Miss!
- News ಕನಕಪುರಕ್ಕೆ ಕಾಲಿಡಲು ಭಯ; ಕೋರ್ಟ್ಗೆ ಯತ್ನಾಳ್ ಹೇಳಿಕೆ!
- Finance ತನ್ನ 4 ವರ್ಷದ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಇನ್ಫೋಸಿಸ್ ಷೇರುಗಳನ್ನು ಉಡುಗೊರೆಯಾಗಿ ನೀಡಿದ ನಾರಾಯಣ ಮೂರ್ತಿ
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Automobiles Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸಾಹೇಬ' ಚಿತ್ರದ ಬಗ್ಗೆ ಅಚ್ಚರಿಯ ಸಂಗತಿ ಬಿಚ್ಚಿಟ್ಟ ಶಾನ್ವಿ ಶ್ರೀವಾತ್ಸವ
ಕನ್ನಡ ಚಿತ್ರರಂಗದ 'ಕನಸುಗಾರ' ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ಹಾಗೂ 'ಮಾಸ್ಟರ್ ಪೀಸ್' ಖ್ಯಾತಿಯ ನಟಿ ಶಾನ್ವಿ ಶ್ರೀವಾತ್ಸವ ಕಾಣಿಸಿಕೊಂಡಿರುವ 'ಸಾಹೇಬ' ಚಿತ್ರದ ಶೂಟಿಂಗ್ ಬೆಂಗಳೂರಿನ ಸುತ್ತ-ಮುತ್ತ ಭರ್ಜರಿಯಾಗಿ ನಡೆದಿದ್ದು, ಈಗಾಗಲೇ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದೆ.
ಇದೀಗ ಎರಡನೇ ಹಂತದ ಚಿತ್ರೀಕರಣಕ್ಕಾಗಿ ಜೂನ್ 5 ರಿಂದ ಇಟಲಿಗೆ ಹಾರಲಿರುವ ಚಿತ್ರತಂಡ ಸದ್ಯದಲ್ಲೇ ಹಾಡುಗಳ ಚಿತ್ರೀಕರಣ ನಡೆಸಲಿದೆ. ಇನ್ನು ಈ ಚಿತ್ರದಲ್ಲಿ ನಟಿಸಲು ಅವಕಾಶ ಸಿಕ್ಕಿದ ಬಗ್ಗೆ ನಟಿ ಶಾನ್ವಿ ಶ್ರೀವಾತ್ಸವ ಅವರು ಸಂತಸ ವ್ಯಕ್ತಪಡಿಸಿದ್ದಾರೆ.[ಕುದುರೆ ಸವಾರಿಗೆ ತರಬೇತಿ ಪಡೆಯುತ್ತಿದ್ದಾರೆ 'ಕ್ರೇಜಿಸ್ಟಾರ್' ಪುತ್ರ]
'ನಾನು ಸಾಹೇಬ ಚಿತ್ರದ ಪ್ರತೀ ಶಾಟ್ ಗೂ ಖುಷಿಪಡುತ್ತೇನೆ. ಏಕೆಂದರೆ ಈ ಚಿತ್ರದಲ್ಲಿ ಮಾನವ ಸಂಬಂಧಗಳ ಭಾವನೆಗಳಿವೆ ಹಾಗೂ ಈ ಕಥೆ ನನಗೆ ತುಂಬಾ ಚೆನ್ನಾಗಿ ಹೊಂದಿಕೊಳ್ಳುತ್ತದೆ' ಎಂದು ನಟಿ ಶಾನ್ವಿ ನುಡಿಯುತ್ತಾರೆ.
ಅಂದಹಾಗೆ ಚಿತ್ರದ ಸ್ಕ್ರಿಪ್ಟ್ ಕೂಡ ಓದದೆ ಸಹಿ ಮಾಡಿದ ಮೊದಲ ಸಿನಿಮಾ ಇದು ಎನ್ನುವ ನಟಿ ಶಾನ್ವಿ, 'ನನ್ನ ಪಾತ್ರದ ಬಗ್ಗೆ ನಿರ್ದೇಶಕ ಭರತ್ ಅವರು ಕೇವಲ 10 ನಿಮಿಷ ಹೇಳಿದ ತಕ್ಷಣ ಈ ಸಿನಿಮಾವನ್ನು ಒಪ್ಪಿಕೊಂಡೆ'.[ಮನೋರಂಜನ್ 'ಸಾಹೇಬ'ನಿಗೆ 'ಮಾಸ್ಟರ್ ಪೀಸ್' ಶಾನ್ವಿ ಸಾಥ್]
'ಈ ನಿರ್ಧಾರ ಯಾಕೆ ತೆಗೆದುಕೊಂಡೆ ಎಂದು ಇಂದಿಗೂ ಗೊತ್ತಿಲ್ಲ. ಆದರೆ ಈಗ ಆ ನಿರ್ಧಾರದಿಂದ ಸಂತಸವಾಗುತ್ತಿದೆ. ಇದು ನನ್ನ ವೃತ್ತಿ ಜೀವನದಲ್ಲಿ ಒಂದು ವಿಭಿನ್ನ ಸಿನಿಮಾ ಆಗಲಿದೆ' ಎಂದಿದ್ದಾರೆ ನಟಿ ಶಾನ್ವಿ ಶ್ರೀವಾತ್ಸವ್.
ಇನ್ನು ಮನೋರಂಜನ್ ಬಗ್ಗೆ ನಟಿ ಶಾನ್ವಿ ಅವರು 'ನಟ ಮನೋರಂಜನ್ ಅವರ ಹಾವ-ಭಾವ ಥೇಟ್ ಅವರ ತಂದೆ ರವಿಚಂದ್ರನ್ ತರಾನೇ ಇದ್ದು, ಅವರು ಕುದುರೆ ಓಡಿಸುವುದಾಗಲೀ ಹಾಗೂ ಭಾವನೆ ವ್ಯಕ್ತಪಡಿಸುವಾಗ ಅವರ ತಂದೆಯಂತೆ ಶಕ್ತಿಯುತ ನಟನೆ ನೀಡುತ್ತಾರೆ' ಎಂದು ನುಡಿದಿದ್ದಾರೆ.[ಮನೋರಂಜನ್ ರವಿಚಂದ್ರನ್ ಚೊಚ್ಚಲ ಚಿತ್ರದ ಚಿತ್ರೀಕರಣ ಫಿಕ್ಸ್.!]
ನಿರ್ಮಾಪಕರಾದ ಜಯಣ್ಣ-ಭೋಗೇಂದ್ರ ಬಂಡವಾಳ ಹೂಡುತ್ತಿರುವ ಈ ಚಿತ್ರದಲ್ಲಿ ಕಾಮಿಡಿ ನಟ ಬುಲೆಟ್ ಪ್ರಕಾಶ್, ಹಿರಿಯ ನಟಿ ಜೂಲಿ ಲಕ್ಷ್ಮಿ ಸೇರಿದಂತೆ ಹಲವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.