Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ ನಟನಾಗುವ ಬದಲು, ಕ್ರಿಕೆಟರ್ ಆಗ್ತಾರೆ ಅಂದುಕೊಂಡಿದ್ದೆ ಎಂದವರು ಯಾರು?
ಚಂದನವನದಲ್ಲಿ ಹ್ಯಾಟ್ರಿಕ್ ಹೀರೋ ಅಂತಾನೇ ಖ್ಯಾತಿ ಗಳಿಸಿರುವ ನಟ ಶಿವರಾಜ್ ಕುಮಾರ್ ಅವರು ನಟರಾಗುತ್ತಾರೆ ಅಂತ ನಾನು ಅಂದುಕೊಂಡಿರಲಿಲ್ಲ ಬದಲಾಗಿ ಅವರೊಬ್ಬ ಕ್ರಿಕೆಟರ್ ಆಗಬಹುದು ಅಂದುಕೊಂಡಿದ್ದೆ. ಎಂದು ನಿರ್ಮಾಪಕ-ಚಲನಚಿತ್ರ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ಅವರು ನುಡಿದಿದ್ದಾರೆ.
ನವೆಂಬರ್ 2 ರಂದು ಬೆಂಗಳೂರಿನ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆದ ಕಿಲ್ಲಿಂಗ್ ವೀರಪ್ಪನ್ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಸಾರಾ ಗೋವಿಂದು ಅವರನ್ನು 'ಕಿಲ್ಲಿಂಗ್ ವೀರಪ್ಪನ್' ಚಿತ್ರತಂಡ ಅಭಿನಂದಿಸಿದರು.['ಕಿಲ್ಲಿಂಗ್ ವೀರಪ್ಪನ್' ಆಡಿಯೋ ಲಾಂಚ್ ಮಾಡಲಿರುವ ಪವರ್ ಸ್ಟಾರ್]
ಈ ಸಂದರ್ಭದಲ್ಲಿ ಮಾತನಾಡಿದ ಅವರು "ಶಿವಣ್ಣ ಅವರು ನಟರಾಗುವ ಬದಲು, ಕ್ರಿಕೆಟ್ ಆಟಗಾರರಾಗುತ್ತಾರೆ ಎಂದು ನಾನು ತಿಳಿದಿದ್ದೆ, ಅವರು ಸಣ್ಣ ಹುಡುಗನಾಗಿದ್ದಾಗ ಇಲ್ಲಿ ಕ್ರಿಕೆಟ್ ಆಡಲು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದದ್ದು, ಇನ್ನೂ ನನಗೆ ನೆನಪಿದೆ'.
'ಬ್ಯಾಟ್ ಮತ್ತು ಬಾಲ್ ನ ಆಟ ಎಂದರೆ ಅವರಿಗೆ ಹುಚ್ಚು. ಅವರು ವಾಪಸ್ ಚೆನ್ನೈಗೆ ಹೋಗುವಾಗ ಮರೆಯದೆ ತೆಗೆದುಕೊಂಡು ಹೋಗುತ್ತಿದ್ದ ಒಂದೇ ಒಂದು ವಸ್ತು ಎಂದರೆ ಅದು ಕ್ರಿಕೆಟ್ ಸೆಟ್'. ಎಂದು ಸಾರಾ ಗೋವಿಂದು ಅವರು ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.[ನವೆಂಬರ್ 2 ರಂದು 'ಕಿಲ್ಲಿಂಗ್ ವೀರಪ್ಪನ್' ಆಡಿಯೋ ಲಾಂಚ್]
ನಿರ್ಮಾಪಕ-ಚಲನಚಿತ್ರ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ಅವರನ್ನು ಅಭಿನಂದಿಸಿದ ಶಿವಣ್ಣ ಅವರು, 'ಕನ್ನಡ ಸಿನಿಮಾಗಳನ್ನು ಚಲನಚಿತ್ರ ಮಂಡಳಿ ಉತ್ತೇಜಿಸಬೇಕು ಎಂಬುದಷ್ಟೇ ನನ್ನ ಅಭಿಲಾಷೆ' ಎಂದು ಹೇಳಿದ್ದಾರೆ.
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಆಕ್ಷನ್-ಕಟ್ ಹೇಳಿರುವ 'ಕಿಲ್ಲಿಂಗ್ ವೀರಪ್ಪನ್' ಚಿತ್ರದ ಆಡಿಯೋ ಬಿಡುಗಡೆಯ ಅದ್ದೂರಿ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್, ನಟ-ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಸಂಚಾರಿ ವಿಜಯ್, ರಾಮ್ ಗೋಪಾಲ್ ವರ್ಮಾ, ಪುನೀತ್ ರಾಜ್ ಕುಮಾರ್, ಮತ್ತು ಲಹರಿವೇಲು ಮುಂತಾದ ಚಿತ್ರರಂಗದ ಖ್ಯಾತ ಗಣ್ಯರು ಪಾಲ್ಗೊಂಡಿದ್ದರು.