Don't Miss!
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರಗಳು: ಅದ್ದೂರಿಯಾಗಿ ನೆರವೇರಿದ 'ಶಿವಲಿಂಗ' ಶತಕ ಸಂಭ್ರಮಾಚರಣೆ
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಪಿ.ವಾಸು ಅವರ ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ 'ಶಿವಲಿಂಗ' ಸಿನಿಮಾ 100 ದಿನಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಿನ್ನೆ (ಜೂನ್ 19) ಅದ್ದೂರಿ ಸಮಾರಂಭವನ್ನು ಏರ್ಪಾಡು ಮಾಡಲಾಗಿತ್ತು.
ಈ ಸಂಭ್ರಮದ ಸಮಾರಂಭಕ್ಕೆ ಟಾಲಿವುಡ್ ನ ಖ್ಯಾತ ನಟ ಬಾಲಕೃಷ್ಣ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು ವಿಶೇಷವಾಗಿತ್ತು. ತೆಲುಗು ನಟ ಬಾಲಕೃಷ್ಣ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆ ಎಲ್ಲರೂ ಶಿಳ್ಳೆ ಚಪ್ಪಾಳೆ ತಟ್ಟುವ ಮೂಲಕ ಬಹಳ ಸಂಭ್ರಮದಿಂದಲೇ ಸ್ವಾಗತಿಸಿದರು.[ಜಗ್ಗೇಶ್, ಕಿಚ್ಚ, ಶಿವಣ್ಣಗೆ ಯಾರನ್ನ ಕಂಡ್ರೆ 'ಆಗಲ್ಲಾಂತ' ನಿಮಗ್ಗೊತ್ತಾ?]
ಇನ್ನು ಒಂದೇ ವೇದಿಕೆಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ತೆಲುಗು ನಟ ಬಾಲಕೃಷ್ಣ ಮತ್ತು ರೆಬೆಲ್ ಸ್ಟಾರ್ ಅಂಬರೀಶ್ ಅವರ ಸಮಾಗಮ ಇಡೀ ಕಾರ್ಯಕ್ರಮಕ್ಕೆ ವಿಶಿಷ್ಟ ಮೆರುಗು ತಂದಿತ್ತು.
ಟಾಲಿವುಡ್ ನಟ ಬಾಲಕೃಷ್ಣ ಅವರು ಈ ಮೊದಲು ರೆಬೆಲ್ ಸ್ಟಾರ್ ಅಂಬರೀಶ್ ಅವರ 60ನೇ ಹುಟ್ಟುಹಬ್ಬ ಸಮಾರಂಭಕ್ಕೆ ಆಗಮಿಸಿದ ಬಳಿಕ ಸ್ಯಾಂಡಲ್ ವುಡ್ ನ ಯಾವುದೇ ಸಭೆ-ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.[ಅದ್ದೂರಿಯಾಗಿ ಜರುಗಲಿದೆ 'ಶಿವಲಿಂಗ' ಶತದಿನೋತ್ಸವ ಸಮಾರಂಭ]
ಇದೀಗ ಶಿವಣ್ಣ ಅವರ 'ಶಿವಲಿಂಗ' 100ರ ಸಂಭ್ರಮದ ಸಮಾರಂಭಕ್ಕೆ ಬಾಲಕೃಷ್ಣ ಅವರು ತಮ್ಮ 100ನೇ ಸಿನಿಮಾ 'ಗೌತಮಿಪುತ್ರ ಶಾತಕರ್ಣಿ'ಯ ಗೆಟಪ್ ನಲ್ಲಿಯೇ ಆಗಮಿಸಿ ಎಲ್ಲರ ಗಮನ ಸೆಳೆದರು.
ಈ ಸುಂದರ ಸಮಾರಂಭದಲ್ಲಿ 'ಶಿವಲಿಂಗ' ಚಿತ್ರಕ್ಕೆ ದುಡಿದ ಸಹ ಕಲಾವಿದರು ಮತ್ತು ತಂತ್ರಜ್ಞರನ್ನು ಸನ್ಮಾನ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಯಿತು. ನಟ ಬಾಲಕೃಷ್ಣ ಮತ್ತು ಅಂಬರೀಶ್ ಅವರು ಎಲ್ಲರಿಗೂ ಗೌರವ ಸಲ್ಲಿಸಿದರು.
ತದನಂತರ ವಿಶೇಷವಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ಭರ್ತಿ 30 ವರ್ಷ ಆದ ಸಂಭ್ರಮದಲ್ಲಿ ಶಿವರಾಜ್ ಕುಮಾರ್ ದಂಪತಿಗಳಿಗೆ ಕಿರೀಟ ತೊಡಿಸಿ, ಶಾಲು ಹೊದೆಸಿ, ಹಾರ ಹಾಕಿ, ಫಲಪುಷ್ಪದೊಂದಿಗೆ ಸ್ಮರಣಿಕೆಯನ್ನು ನೀಡಿ ಸನ್ಮಾನ ಮಾಡಲಾಯಿತು.[ಶಿವಣ್ಣ30 ವಿಶೇಷ: ಶಿವಣ್ಣ ಅವರ 20 ಉತ್ತಮ ಚಿತ್ರಗಳ List]
ಈ ವಿಶೇಷ ಕಾರ್ಯಕ್ರಮಕ್ಕೆ ನಿರ್ದೇಶಕ ಪಿ.ವಾಸು ಹಾಗೂ ಅವರ ಮಗ ನಟ ಶಕ್ತಿ, ನಟಿ ವೇದಿಕಾ, ನಿರ್ಮಾಪಕ ಕೆ.ಎ ಸುರೇಶ್, ವಿಜಯ ರಾಘವೇಂದ್ರ, ನಟಿ ವಿನಯ ಪ್ರಸಾದ್, ವೈಶಾಲಿ ಕಾಸರವಳ್ಳಿ ಮುಂತಾದವರು ಹಾಜರಿರುವ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ರಂಗು ತುಂಬಿದರು. (ಸಮಾರಂಭದ ಫೋಟೋ ಗ್ಯಾಲರಿ ನೋಡಿ ಕೆಳಗಿನ ಸ್ಲೈಡುಗಳಲ್ಲಿ)..