Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಗೊಳ್ಳಿ ರಾಯಣ್ಣ ಅಬ್ಬರಕ್ಕೆ ಶಾರೂಖ್ ಚಿತ್ರ ತಲ್ಲಣ
ಬಿಡುಗಡೆಯಾದ ಮೊದಲ ದಿನದಂದು ಶಾರೂಖ್ ಚಿತ್ರ ಸ್ವಲ್ಪ ಮಟ್ಟಿನ ಮುನ್ನಡೆ ಸಾಧಿಸಿದರೂ ಒಂದೇ ದಿನದಲ್ಲಿ ಸಂಗೊಳ್ಳಿ ರಾಯಣ್ಣ ಚಿತ್ರ ಮತ್ತೆ ಪ್ರೇಕ್ಷಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಜಬ್ ತಕ್ ಹೇ ಜಾನ್ ಚಿತ್ರ ಉತ್ತರ ಕರ್ನಾಟಕ ಭಾಗದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡುವಲ್ಲಿ ಹಿನ್ನಡೆ ಅನುಭವಿಸಿದೆ.
ನವೆಂಬರ್ 13ರಂದು ಬಿಡುಗಡೆಯಾಗಿದ್ದ ಶಾರೂಖ್ ಚಿತ್ರಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರು ಪ್ರಾಂತ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಹಿಂದಿ ಚಿತ್ರಗಳಿಗೆ ಉತ್ತಮ ಮಾರುಕಟ್ಟೆ ಎಂದೇ ಬಿಂಬಿತವಾಗಿರುವ ಉತ್ತರ ಕರ್ನಾಟಕ ಭಾಗದಲ್ಲಿ ಚಿತ್ರ ಅಷ್ಟೇನೂ ಸದ್ದು ಮಾಡುತ್ತಿಲ್ಲ. ಕಾರಣ.. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ.
ಹುಬ್ಬಳ್ಳಿ, ಬಿಜಾಪುರ, ಗೋಕಾಕ್, ಬೆಳಗಾವಿ, ಹಾವೇರಿ, ದಾವಣಗೆರೆ ಮುಂತಾದ ನಗರಗಳಲ್ಲಿ ಸಂಗೊಳ್ಳಿ ರಾಯಣ್ಣ ಚಿತ್ರದ ಮುಂದೆ ಜಬ್ ತಕ್ ಹೇ ಜಾನ್ ಚಿತ್ರದ ಕಲೆಕ್ಷನ್ ಎರಡನೇ ಸ್ಥಾನಕ್ಕೆ ನಿಂತಿದೆ.
ಕಳೆದವಾರವಂತೂ ದೀಪಾವಳಿ ಹಬ್ಬದ ಸಾಲುಸಾಲು ರಜೆಯನ್ನು ಈ ಭಾಗದ ಜನರು ಸಂಗೊಳ್ಳಿ ರಾಯಣ್ಣ ಚಿತ್ರ ವೀಕ್ಷಿಸುವ ಮೂಲಕ ಆಚರಿಸಿಕೊಂಡಿದ್ದಾರೆ. ಬಹಳಷ್ಟು ಚಿತ್ರ ಅಭಿಮಾನಿಗಳು ಥಿಯೇಟರ್ ಕಡೆ ಬಂದ ಪರಿಣಾಮ ಪ್ರದರ್ಶನದ ಸಂಖ್ಯೆಯನ್ನು ಹೆಚ್ಚುಗೊಳಿಸಲಾಗಿತ್ತು.
ಆದರೆ ಶಿವಮೊಗ್ಗ, ಭದ್ರಾವತಿ, ತುಮಕೂರು , ಚಿಕ್ಕಮಗಳೂರಿನಲ್ಲಿ ದರ್ಶನ್ ಅಭಿನಯದ ಸಂಗೊಳ್ಳಿ ರಾಯಣ್ಣ ಚಿತ್ರದ ತುಂಬಿದ ಪ್ರದರ್ಶನಕ್ಕೆ ಜಬ್ ತಕ್ ಹೇ ಜಾನ್ ಚಿತ್ರ ಬ್ರೇಕ್ ಹಾಕಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದ ಗ್ಯಾಲರಿಗೆ ಇಲ್ಲಿ ಕ್ಲಿಕ್ಕಿಸಿ