Don't Miss!
- Finance ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ವಿಮಾನ ಸೇವೆ ಆರಂಭ, ದಿನಾಂಕ ವಿವರ
- News ವಿ ಸೋಮಣ್ಣಗೆ ಎದುರಾಯ್ತು ಸಂಕಷ್ಟ: ಕೈ ನಾಯಕರ ಸಂಪರ್ಕದಲ್ಲಿರುವ ಮಾಧುಸ್ವಾಮಿ: ಕಾಂಗ್ರೆಸ್ ಸೇರ್ಪಡೆ?
- Automobiles ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Sports IPL 2024: ಮುಂಬೈ ನಾಯಕನಿಗೆ ಪತ್ರಕರ್ತರಿಂದ ಬೌನ್ಸರ್: ಉತ್ತರಿಸದೆ ಮೌನಕ್ಕೆ ಶರಣಾದ ಹಾರ್ದಿಕ್ ಪಾಂಡ್ಯ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನಜಂಗುಳಿಯಲ್ಲಿ ನಡೆಯಲಿದೆ 'ಕನಕ'ನ ಫೋಟೋಶೂಟ್
ದುನಿಯಾ ವಿಜಯ್ ಹಾಗೂ ಆರ್.ಚಂದ್ರು ಕಾಂಬಿನೇಷನ್ ನಲ್ಲಿ 'ಕನಕ' ಚಿತ್ರ ತಯಾರಾಗುತ್ತಿರುವ ಸುದ್ದಿ ನಿಮಗೆ ತಿಳಿದಿದೆ. ಈಗಾಗಲೇ ಮುಹೂರ್ತ ಮುಗಿಸಿರುವ 'ಕನಕ' ಚಿತ್ರತಂಡ, ಸದ್ಯದಲ್ಲೇ ಒಂದು ಸ್ಪೆಷಲ್ ಫೋಟೋಶೂಟ್ ಗೆ ಚಾಲನೆ ನೀಡಲಿದೆ.
ಸಾಮಾನ್ಯವಾಗಿ ಫೋಟೋಶೂಟ್ ನಡೆಯುವುದು ಸ್ಟುಡಿಯೋದಲ್ಲಿ. ಆದ್ರೆ, 'ಕನಕ'ನ ಫೋಟೋಶೂಟ್ ಎಂದಿನಂತೆ ಸ್ಟುಡಿಯೋದಲ್ಲಿ ನಡೆಯುವುದಿಲ್ಲ. ಬದಲಾಗಿ ಜನನಿಬಿಡ ಪ್ರದೇಶಗಳಲ್ಲಿ ನಡೆಯುತ್ತೆ.[ಅಣ್ಣಾವ್ರ ಅಭಿಮಾನಿ 'ಕನಕ' ಸಾಂಗ್ ರೆಕಾರ್ಡಿಂಗ್ ಆರಂಭ]
ಹೇಳಿ ಕೇಳಿ, 'ಕನಕ' ಆಟೋ ಡ್ರೈವರ್. ಅದರಲ್ಲೂ ಡಾ.ರಾಜ್ ಅಭಿಮಾನಿ. ಹೀಗಾಗಿ, ನಗರದ ಕೆಲ ಜನಜಂಗುಳಿ ಇರುವ ಆಟೋ ಸ್ಟ್ಯಾಂಡ್ ಗಳಲ್ಲಿ ಫೋಟೋಶೂಟ್ ನಡೆಸಲು ನಿರ್ದೇಶಕ ಆರ್.ಚಂದ್ರು ತೀರ್ಮಾನಿಸಿದ್ದಾರೆ. ಇದಕ್ಕೆ ಆಟೋ ಡ್ರೈವರ್ 'ಕನಕ' ಪಾತ್ರ ನಿರ್ವಹಿಸುತ್ತಿರುವ ದುನಿಯಾ ವಿಜಯ್ ಕೂಡ ಸಮ್ಮತಿ ಕೊಟ್ಟಿದ್ದಾರೆ.[ದುನಿಯಾ ವಿಜಯ್ ಹುಟ್ಟುಹಬ್ಬ: ಬಡವರಿಗೆ 'ಕನಕ'ನ ಕಾಣಿಕೆ]
ಈಗಾಗಲೇ ಆಟೋ ಡ್ರೈವರ್ ಗಳ ಮಾತಿನ ಶೈಲಿ ಹಾಗೂ ಮ್ಯಾನರಿಸಂಗಳನ್ನ ಸೂಕ್ಷ್ಮವಾಗಿ ಗಮನಿಸಿರುವ ದುನಿಯಾ ವಿಜಯ್ 'ಆಟೋ' ಓಡಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಎಲ್ಲವೂ ಪ್ಲಾನ್ ಪ್ರಕಾರ ನಡೆದರೆ, ಇನ್ನು ಕೆಲವೇ ದಿನಗಳಲ್ಲಿ 'ಕನಕ' ಫೋಟೋಶೂಟ್ ನಡೆಯಲಿದೆ. ಅದಾದ ಬಳಿಕ ಶೂಟಿಂಗ್ ಶುರು....