Don't Miss!
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- News Summer Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ.. ಇಲ್ಲಿವೆ ಸಲಹೆಗಳು
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬೆಂಗಳೂರು ಅಂಡರ್ ವರ್ಲ್ಡ್' ಗೆ ಕಾಲಿಟ್ಟ 'ಡೆಡ್ಲಿ' ಆದಿತ್ಯ
'ರೆಬೆಲ್' ಚಿತ್ರದ ನಂತರ ಗಾಂಧಿನಗರದಲ್ಲಿ ಕಾಣೆಯಾಗಿದ್ದ 'ಡೆಡ್ಲಿ ಸೋಮ' ಖ್ಯಾತಿಯ ನಟ ಆದಿತ್ಯ ಅವರು ನಿರ್ದೇಶಕ ಪಿ.ಎನ್ ಸತ್ಯ ಅವರ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಈ ಮೊದಲು ಸುದ್ದಿಯಾಗಿತ್ತು.
ಇದೀಗ ಆ ಸುದ್ದಿ ನಿಜವಾಗಿದೆ. ನಟ ಆದಿತ್ಯ ಅವರು ನಿರ್ದೇಶಕ ಪಿ.ಎನ್ ಸತ್ಯ ಅವರ ಜೊತೆ ಹೊಸ ಪ್ರಾಜೆಕ್ಟ್ ಒಂದಕ್ಕೆ ಸಹಿ ಹಾಕಿದ್ದಾರೆ. ಚಿತ್ರಕ್ಕೆ 'ಬೆಂಗಳೂರು ಅಂಡರ್ ವರ್ಲ್ಡ್' ಎಂದು ಹೆಸರಿಡಲಾಗಿದೆ. ಚಿತ್ರದಲ್ಲಿ ಬೆಂಗಳೂರಿನ ಭೂಗತ ಲೋಕವನ್ನು ಎಳೆ-ಎಳೆಯಾಗಿ ಬಿಚ್ಚಿಡಲಾಗಿದೆ.[ಸ್ಯಾಂಡಲ್ ವುಡ್ ಹೀರೋಗಳು ಪರಭಾಷೆಯಲ್ಲಿ ವಿಲನ್ ಗಳು]
ಚಿತ್ರಕ್ಕೆ ನಿರ್ಮಾಪಕರಾದ ಸುಧಾಕರ್ ಮತ್ತು ಆನಂದ್ ಬಂಡವಾಳ ಹೂಡುತ್ತಿದ್ದು, ನಿರ್ದೇಶಕ ಪಿ.ಎನ್ ಸತ್ಯ ಅವರೇ ಕಥೆ-ಚಿತ್ರಕಥೆ-ಸಂಭಾಷಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ಈ ಮೊದಲು ನಿರ್ಮಾಪಕ ಕೆ.ಮಂಜು ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ ಸಿನಿಮಾದಲ್ಲಿ ಆದಿತ್ಯ ಅವರು ವಿಲನ್ ಆಗಿ ಎಂಟ್ರಿ ಕೊಡಲಿದ್ದಾರೆ ಅಂತ ಗಾಸಿಪ್ ಆಗಿತ್ತು. ಆದರೆ ಕೊನೆ ಕ್ಷಣದಲ್ಲಿ ಆದ ಬದಲಾವಣೆಯಿಂದ ಆದಿತ್ಯ ಜಾಗಕ್ಕೆ ತಮಿಳು-ತೆಲುಗು ನಟ ಶ್ಯಾಮ್ ಎಂಟ್ರಿಯಾಗಿದ್ದಾರೆ.[ಯಶ್ ಸಿನಿಮಾದಿಂದ 'ಡೆಡ್ಲಿ' ಆದಿತ್ಯ ಔಟ್ ಆಗಿದ್ದೇಕೆ?]
ಇನ್ನೇನು ಸದ್ಯದಲ್ಲೇ 'ಡೆಡ್ಲಿ' ಆದಿತ್ಯ ಹಾಗೂ ನಿರ್ದೇಶಕ ಪಿ.ಎನ್ ಸತ್ಯ ಅವರ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ 'ಬೆಂಗಳೂರು ಅಂಡರ್ ವರ್ಲ್ಡ್' ಸಿನಿಮಾ ಸೆಟ್ಟೇರಿ ಶೂಟಿಂಗ್ ಆರಂಭಿಸಲಿದೆ.