Don't Miss!
- News Heavy Rain: ಸಕ್ಕರೆ ನಾಡಿನಲ್ಲಿ ವರ್ಷದ ಮೊದಲ ಮಳೆ: ಧರೆಗುರುಳಿದ ಮರ, ಕಮಾನುಗಳು
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Sports PBKS vs MI IPL 2024: ಸೂರ್ಯಕುಮಾರ್ ಶೈನಿಂಗ್; ಪಂಜಾಬ್ಗೆ ಸವಾಲಿನ ಗುರಿ ನೀಡಿದ ಮುಂಬೈ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರಗಳು; ಸತತ ಐದನೇ ಬಾರಿ 'ಅಯ್ಯಪ್ಪ ಸ್ವಾಮಿ' ಆದ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮತ್ತೊಮ್ಮೆ 'ಸ್ವಾಮಿಯೇ ಶರಣಂ ಅಯ್ಯಪ್ಪ' ಎಂದು ಮಾಲೆ ಧರಿಸಿದ್ದಾರೆ. ಅವರ ಜೊತೆ ಸಹೋದರ ದಿನಕರ್ ತೂಗುದೀಪ, ನಿರ್ದೇಶಕ ಎಂ.ಡಿ.ಶ್ರೀಧರ್, ಶಿವಮಣಿ, ನಟ ಧರ್ಮ ಕೀರ್ತಿರಾಜ್ ಕೂಡ ಮಾಲೆ ಧರಿಸಿ, ಶಬರಿಮಲೈ ಯಾತ್ರೆ ಕೈಗೊಂಡಿದ್ದಾರೆ.
ಕಳೆದ ಐದು ವರ್ಷಗಳಿಂದ ದರ್ಶನ್ ಮಾಲೆ ಧರಿಸುತ್ತಿದ್ದಾರೆ. ಅವರಿಗೆ ತಂದೆ ತೂಗುದೀಪ ಶ್ರೀನಿವಾಸ್ ಪ್ರೇರಣೆ.[ಅಣ್ಣಾವ್ರ ಮಕ್ಕಳ ಶಬರಿಮಲೈ ಯಾತ್ರೆ ಆರಂಭ]
ಕನ್ನಡ ಚಿತ್ರರಂಗದ ಖ್ಯಾತ ನಟ ತೂಗುದೀಪ ಶ್ರೀನಿವಾಸ್ ಗೆ ಅಯ್ಯಪ್ಪ ಸ್ವಾಮಿ ಮೇಲೆ ಅಪಾರ ಭಕ್ತಿ. ಅಪ್ಪನಂತೆ ಮಗ ದರ್ಶನ್ ಕೂಡ ಭಯ-ಭಕ್ತಿಯಿಂದ ವ್ರತ ಆಚರಿಸಿ ಸತತ ಐದನೇ ಬಾರಿ ಶಬರಿಗಿರಿಗೆ ತೆರಳಿದ್ದಾರೆ.
ನಿನ್ನೆ ಬೆಳಗ್ಗೆ ಮೊದಲು ರಾಜರಾಜೇಶ್ವರಿ ನಗರದಲ್ಲಿ ಇರುವ ಅವರ ನಿವಾಸದಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಿ, ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಬಂದ ದರ್ಶನ್ ಇರುಮುಡಿ ಕಟ್ಟಿದರು.[ಶಿವಣ್ಣ ಮತ್ತೊಮ್ಮೆ ಸ್ವಾಮಿಯೇ ಶರಣಂ ಅಯ್ಯಪ್ಪ]
ಅಲ್ಲಿಂದ ದರ್ಶನ್ ಜೊತೆ 40 ಜನರ ತಂಡ ಶಬರಿಮಲೈ ಯಾತ್ರೆ ಆರಂಭಿಸಿತು. ಇಂದು ಅಯ್ಯಪ್ಪ ಸ್ವಾಮಿ ದರ್ಶನ ಮಾಡಿದ ಬಳಿಕ 'ದಾಸ' ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. (ಚಿತ್ರಕೃಪೆ - ಡಿ ಕಂಪನಿ)