Don't Miss!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- News Weather Report: ಭೀಕರ ಬಿಸಿಲಿನ ನಡುವೆಯೂ ಏಪ್ರಿಲ್ 3ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಲ್ಲಿಕಟ್ಟು ನಿಷೇಧದ ಬಗ್ಗೆ ಜಗ್ಗೇಶ್ ಹೇಳಿದ್ದೇನು?
ಜಲ್ಲಿಕಟ್ಟು ಆಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದನ್ನ ಖಂಡಿಸಿ ಇಡೀ ತಮಿಳುನಾಡು ಬೀದಿಗಿಳಿದು ಹೋರಾಟ ಮಾಡುತ್ತಿದೆ.
ಸಂಕ್ರಾಂತಿ ಹಬ್ಬದ ವಿಶೇಷವಾಗಿ ಮಧುರೈ ಸೇರಿದಂತೆ ಹಲವು ಪ್ರಾಂತ್ಯಗಳಲ್ಲಿ ಜಲ್ಲಿಕಟ್ಟು ಆಟವನ್ನ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಈಗ ಇಂತಹ ಸಂಪ್ರಾದಯವನ್ನ ನಿಲ್ಲಿಸುವುದು ಸರಿಯಲ್ಲ ಎಂಬ ಕೂಗು ತಮಿಳುನಾಡಿನ ಜನತೆ ಹಾಗೂ ಹಲವು ಕಲಾವಿದರು ವ್ಯಕ್ತಪಡಿಸಿದ್ದಾರೆ.[ಜಲ್ಲಿಕಟ್ಟು ಕ್ರೀಡೆ ಬಗ್ಗೆ ಸುಗ್ರೀವಾಜ್ಞೆ ತನ್ನಿ: ಶಶಿಕಲಾ ಆಗ್ರಹ]
ಇದೀಗ, ಜಲ್ಲಿಕಟ್ಟು ಆಚರಣೆ ವಿರೋಧ ಮಾಡಿರುವುದನ್ನ ಕನ್ನಡದ ನಟ ಜಗ್ಗೇಶ್ ಕೂಡ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್ '' ಜಲ್ಲಿಕಟ್ಟು ತಮಿಳರ ಸನಾತನ ಸ್ವಾಭಿಮಾನದ ಗ್ರಾಮೀಣಕ್ರೀಡೆ. ಎತ್ತುಗಳನ್ನ ತಮ್ಮ ಮಕ್ಕಳಂತೆ ಪ್ರೀತಿಸಿ ಸಾಕುತ್ತಾರೆ. ಸಾನಾತನ ಕ್ರೀಡೆಗೆ ತಡೆಯೊಡ್ಡಿ ತಪ್ಪು ಮಾಡಿತು ನ್ಯಾಯಾಂಗ! ಎಂದು ಟ್ವೀಟ್ ಮಾಡಿದ್ದಾರೆ.
ಅಷ್ಟೇ ಅಲ್ಲ ''ಈ ದೇಶದಲ್ಲಿ"ತಡೆ, ಅನುಮಾನ, ಚರ್ಚೆ, ವಿರೋಧ" ಏನೆ ಇದ್ದರು ಅದು ನಮ್ಮ ಹಿಂದುಗಳ ಆಚರಣೆಗೆ ಮಾತ್ರ! ಮುಂದೆ ಇಂಥ ನಿರ್ಣಯದಿಂದ ಹಿಂದುಗಳು ಅನಾಥರಾಗುವುದು ನಿಶ್ಚಿತ! ದೌರ್ಭಾಗ್ಯ!...'' ಎಂದು ಜಗ್ಗೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.