Don't Miss!
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುದುರೆ ಸವಾರಿಗೆ ತರಬೇತಿ ಪಡೆಯುತ್ತಿದ್ದಾರೆ 'ಕ್ರೇಜಿಸ್ಟಾರ್' ಪುತ್ರ
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ಅವರು ತಮ್ಮ ಹೊಸ 'ಸಾಹೇಬ' ಚಿತ್ರಕ್ಕಾಗಿ ಕುದುರೆ ಸವಾರಿ ಮರು ತರಬೇತಿಯನ್ನು ಪಡೆಯುತ್ತಿದ್ದಾರೆ.
ಫಸ್ಟ್ ಹಾಫ್ ಶೂಟಿಂಗ್ ಮುಗಿಸಿರುವ 'ಸಾಹೇಬ' ಚಿತ್ರತಂಡ ಎರಡನೇ ಭಾಗದ ಶೂಟಿಂಗ್ ನಡೆಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸುಮಾರು 20 ರಿಂದ 25 ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡ ನಟ ಮನೋರಂಜನ್ ಮತ್ತೆ ಸೆಟ್ ಗೆ ಹಾಜರಾಗಿದ್ದಾರೆ.
ಈ ವಿರಾಮದ ದಿನಗಳಲ್ಲಿ ಮನೋರಂಜನ್ ಅವರು ತಾವು ಈ ಹಿಂದೆ ಕಲಿತಿದ್ದ ಕುದುರೆ ಸವಾರಿ ಕೌಶಲ್ಯವನ್ನು ಮತ್ತೆ ನೆನಪು ಮಾಡಿಕೊಂಡಿದ್ದಾರಂತೆ.[ಮನೋರಂಜನ್ ರವಿಚಂದ್ರನ್ ಚೊಚ್ಚಲ ಚಿತ್ರದ ಚಿತ್ರೀಕರಣ ಫಿಕ್ಸ್.!]
'ಈ ವಾರಂತ್ಯ ಎರಡನೇ ಹಂತದ ಚಿತ್ರೀಕರಣದಲ್ಲಿ ಫೈಟ್ ಒಂದಿದೆ. ಅದಕ್ಕಾಗಿ ಕುದುರೆ ಸವಾರಿ ಮಾಡಬೇಕಿದೆ. ಐದು ವರ್ಷದ ಹಿಂದೆಯೇ ಕುದುರೆ ಸವಾರಿ ಕಲಿತಿದ್ದೆ, ಆದರೆ ಈಗ ಅಭ್ಯಾಸ ತಪ್ಪಿತ್ತು. ಅದಕ್ಕೆ ಮತ್ತೆ ಆತ್ಮವಿಶ್ವಾಸ ಗಳಿಸಲು ಮರು ತರಬೇತಿ ಪಡೆದೆ' ಎಂದು ಮನೋರಂಜನ್ ನುಡಿಯುತ್ತಾರೆ.[ರವಿಚಂದ್ರನ್ ಪುತ್ರ ಮನೋರಂಜನ್ 'ರಣಧೀರ' ಸಿನಿಮಾ ನಿಂತ್ಹೋಯ್ತಾ?]
ನಿರ್ದೇಶಕ ಭರತ್ ಆಕ್ಷನ್-ಕಟ್ ಹೇಳುತ್ತಿರುವ ಚಿತ್ರದಲ್ಲಿ 'ಮಾಸ್ಟರ್ ಪೀಸ್' ಖ್ಯಾತಿಯ ನಟಿ ಶಾನ್ವಿ ಶ್ರೀವಾತ್ಸವ ಅವರು ಮನೋರಂಜನ್ ಜೊತೆ ರೋಮ್ಯಾನ್ಸ್ ಮಾಡಲಿದ್ದು, ಇವರೊಂದಿಗೆ ಇದೀಗ ಹೊಸದಾಗಿ ಸಾನಿಕಾ ಎಂಬ ಕನ್ನಡತಿ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.[ಮನೋರಂಜನ್ 'ಸಾಹೇಬ'ನಿಗೆ 'ಮಾಸ್ಟರ್ ಪೀಸ್' ಶಾನ್ವಿ ಸಾಥ್]
ನಿರ್ಮಾಪಕ ಜಯಣ್ಣ-ಭೋಗೇಂದ್ರ ಬಂಡವಾಳ ಹೂಡುತ್ತಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ಅವರು ಆಕ್ಷನ್-ಕಟ್ ಹೇಳುತ್ತಿದ್ದಾರೆ. ಮನೋರಂಜನ್ ಅವರ 'ಸಾಹೇಬ' ಚಿತ್ರದ ಫೊಟೋ ಗ್ಯಾಲರಿ ನೋಡಲು ಸ್ಲೈಡ್ಸ್ ಕ್ಲಿಕ್ಕಿಸಿ...