Don't Miss!
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಚಿತ್ರ 'ಕರುಣಾ-ನಿಧಿ'. ಇದು ಯಾರ ಕಥೆ..?
ಕನ್ನಡ ನಟ ಮೋಹನ್ ನಟಿಸಿ, ನಿರ್ಮಿಸಿ, ನಿರ್ದೇಶಿಸಿದ್ದ 'ಮಳೆ ನಿಲ್ಲುವವರೆಗೆ' ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಅಬ್ಬರ ಸೃಷ್ಟಿಸಲಿಲ್ಲ. ಆದರೂ ಚಿಂತೆ ಇಲ್ಲ. ನಟ ಮೋಹನ್ ಹೊಸ ಸಿನಿಮಾ ಮಾಡುವ ಮನಸ್ಸು ಮಾಡಿದ್ದಾರೆ.
ಹಾಗೆ ಮೋಹನ್ ಕಾಣಿಸಿಕೊಳ್ಳುತ್ತಿರುವ ಹೊಸ ಚಿತ್ರದ ಹೆಸರು 'ಕರುಣಾ-ನಿಧಿ'. ಹೆಸರು ಕೇಳಿದ ಕೂಡಲೆ ಇದು ತಮಿಳುನಾಡು ಮಾಜಿ ಮುಖ್ಯಮಂತ್ರಿಯ ಜೀವನಚರಿತ್ರೆ ಆಧರಿಸಿದ ಸಿನಿಮಾನಾ ಅಂತ ಪ್ರಶ್ನೆ ಕೇಳ್ಬೇಡಿ.
ತಮಿಳುನಾಡು ಮಾಜಿ ಸಿ.ಎಂ ಕರುಣಾನಿಧಿಗೂ, 'ಕರುಣಾ-ನಿಧಿ' ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಕರುಣಾ ಮತ್ತು ನಿಧಿ ಅನ್ನುವ ಇಬ್ಬರು ವ್ಯಕ್ತಿಗಳ ನಡುವಿನ ಕಥೆ 'ಕರುಣಾ-ನಿಧಿ'. [ನಿರ್ದೇಶಕ, ಬರಹಗಾರ ಎಜಿ ಶೇಷಾದ್ರಿ ಸಂದರ್ಶನ]
ಅಂದ್ಹಾಗೆ, ಮೋಹನ್ ಇಲ್ಲಿ ಬರೀ ನಟನಾಗಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡ ಕಿರುತೆರೆಯ ಪ್ರಸಿದ್ಧ ಬರಹಗಾರ ಹಾಗು ನಿರ್ದೇಶಕ ಎ.ಜಿ.ಶೇಷಾದ್ರಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.
ಶೀರ್ಷಿಕೆ ಮಾತ್ರದಿಂದಲೇ ಸೌಂಡ್ ಮಾಡುವುದಕ್ಕೆ ಶುರುಮಾಡಿರುವ 'ಕರುಣಾ-ನಿಧಿ' ಚಿತ್ರದ ಬಗ್ಗೆ ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಇಷ್ಟು. ಹೆಚ್ಚಿನ ಮಾಹಿತಿಗೆ 'ಫಿಲ್ಮಿಬೀಟ್ ಕನ್ನಡ' ಓದುತ್ತಿರಿ.