Don't Miss!
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- News Bengaluru Heat Wave: ಮಳೆಯ ನಡುವೆ ಮತ್ತೆ ದಾಖಲೆಯ ಗರಿಷ್ಠ ತಾಪಮಾನ: ಶಾಖದ ಅಲೆ ಮುನ್ಸೂಚನೆ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆ ಶಿವರಾಮು ಪುತ್ರಿ ಕೈಹಿಡಿಯುತ್ತಿರುವ ನಟ ಪ್ರದೀಪ್
ಕನ್ನಡ ನಟ ಪ್ರದೀಪ್ ಗೆ ಕಂಕಣಬಲ ಕೂಡಿಬಂದಿದೆ. 'ಜಾಲಿ ಡೇಸ್', 'ಪರೋಲ್' ಚಿತ್ರಗಳಲ್ಲಿ ಅಭಿನಯಿಸಿರುವ ಪ್ರದೀಪ್ ಈಗ 'ರಂಗನ್ ಸ್ಟೈಲ್' ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕ ನಟನಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.
ಕನ್ನಡ ಚಿತ್ರ ನಟ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮು (60) ಅವರ ಪುತ್ರಿ ಇಂಚರಾ ಅವರ ಕೈಹಿಡಿಯುತ್ತಿದ್ದಾರೆ ಪ್ರದೀಪ್. ಶಿವರಾಮು ಅವರು ಹಲವಾರು ಸಾಮಾಜಿಕ ಕಾರ್ಯಗಳ ಜೊತೆಗೆ ಚಿತ್ರ ನಿರ್ಮಾಪರಾಗಿಯೂ ಗುರುತಿಸಿಕೊಂಡವರು.
ಇನ್ನೊಂದು ವಿಶೇಷ ಎಂದರೆ ಪ್ರದೀಪ್ ಅಭಿನಯದ 'ರಂಗನ್ ಸ್ಟೈಲ್' ಚಿತ್ರವೂ ಡಿಸೆಂಬರ್ ನಲ್ಲೇ ಬಿಡುಗಡೆಯಾಗುತ್ತಿರುವುದು. ಪ್ರದೀಪ್ ಅವರ ಪಾಲಿಗೆ ಡಬಲ್ ಸಂಭ್ರಮ. 'ರಂಗನ್ ಸ್ಟೈಲ್' ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಅತಿಥಿ ಪಾತ್ರ ಪೋಷಿಸಿದ್ದಾರೆ.
ದಾಂಪತ್ಯ ಜೀವನಕ್ಕೆ ಅಡಿಯಿಡುತ್ತಿರುವ ಪ್ರದೀಪ್ ಅವರಿಗೆ ಸುದೀಪ್ ಅವರು ಕಿವಿಮಾತನ್ನೂ ಹೇಳಿದ್ದಾರೆ, ಮದುವೆ ಬಳಿಕ ಹೆಂಡತಿಯನ್ನು ಚೆನ್ನಾಗಿ ನೋಡಿಕೋ. ನಮ್ಮಂತೆ ಬಹಳಷ್ಟು ಜನ ತಪ್ಪುಗಳನ್ನು ಮಾಡುತ್ತಿರುತ್ತೇವೆ. ಆದರೆ ನೀನು ಮಾತ್ರ ಆ ರೀತಿ ಮಾಡಬೇಡ. ಪ್ರೀತಿ ಪ್ರೇಮದಲ್ಲಿ ಕಡಿಮೆ ಆಗದಂತೆ ನೋಡಿಕೋ ಎಂದಿದ್ದಾರೆ.
ಗುರುಕಿರಣ್ ಅವರ ಸಂಗೀತ ಇರುವ 'ರಂಗನ್ ಸ್ಟೈಲ್' ಚಿತ್ರಕ್ಕೆ ಮಂಗಳೂರಿನ ಪ್ರಶಾಂತ್ ಎಸ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಮಂಜು ಸಂಭಾಷಣೆ ಬರೆದಿದ್ದಾರೆ. ಸಿನಿಟೆಕ್ ಸೂರಿ ಕ್ಯಾಮೆರಾ ಹಿಡಿಯುತ್ತಿದ್ದಾರೆ.
ಚಿತ್ರದಲ್ಲಿ ಸಾಧುಕೋಕಿಲ, ಶರತ್ ಲೋಹಿತಾಶ್ವ ಮತ್ತಿತರರು ಇದ್ದಾರೆ. ಕಾರ್ಕಳದ ಖ್ಯಾತ ಯುವ ಉದ್ಯಮಿಗಳಾದ ಅಜಿತ್ ಕಾಮತ್, ಬೋಳ ಶ್ರೀನಿವಾಸ ಕಾಮತ್ ಮತ್ತು ಬೋಳ ಶ್ರೀಪತಿ ಕಾಮತ್ ಅವರು ತಮ್ಮ ಆರೆಂಜ್ ಸಿನಿಮಾಸ್ ಬ್ಯಾನರ್ನಡಿ ನಿರ್ಮಿಸುತ್ತಿದ್ದಾರೆ.