Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಿತ್ರರಂಗದ ಹಿರಿಯ ನಟ ಸಂಕೇತ್ ಕಾಶಿ ನಿಧನ
ಕನ್ನಡದ ಹಿರಿಯ ನಟ ಸಂಕೇತ್ ಕಾಶಿ ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು (ಆಗಸ್ಟ್ 6) ನಿಧನ ಹೊಂದಿದ್ದಾರೆ. 'ಉಲ್ಟಾಪಲ್ಟಾ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಖ್ಯಾತಿ ಗಳಿಸಿದ ನಟ ಸಂಕೇತ್ ಕಾಶಿ ಅವರು ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.
ಈ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆ ಮೂಡಲಪಾಳ್ಯಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 3.30ಕ್ಕೆ ನಿಧನ ಹೊಂದಿದ್ದಾರೆ.
'ಉಲ್ಪಾಪಲ್ಟಾ' ಸೇರಿದಂತೆ 'ನಮ್ಮೂರ ಮಂದಾರ ಹೂವೇ', 'ಜೋಗಿ', 'ಉಪ್ಪಿದಾದಾ ಎಂಬಿಬಿಎಸ್', 'ಜಂಗ್ಲಿ', 'ಕಿರಾತಕ' ಸೇರಿದಂತೆ ಸುಮಾರು 115ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರು ಹೆಚ್ಚಾಗಿ ಕಾಲೇಜು ಪ್ರಿನ್ಸಿಪಾಲ್ ಹಾಗು ಹಾಸ್ಯ ನಟನ ಪಾತ್ರಗಳಲ್ಲಿ ಮಿಂಚುತ್ತಿದ್ದರು.
ಇನ್ನೊಂದು ವಿಶೇಷ ಏನಪ್ಪಾ ಅಂದ್ರೆ ಕೆಲವು ಸಿನಿಮಾಗಳಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಕೈಯಿಂದ ಜಾಸ್ತಿ ಕೆನ್ನೆಗೆ ಹೊಡೆಸಿಕೊಂಡವರು ಎಂದರೆ ಅದು ನಟ ಸಂಕೇತ್ ಕಾಶಿ ಎಂದೇ ಹೇಳಬಹುದು. ಸಾಕಷ್ಟು ಸಿನಿಮಾಗಳಲ್ಲಿ 'ಕುಡುಕನ' ಪಾತ್ರ ಮಾಡುತ್ತಾ ಕಾಮಿಡಿ ಮಾಡುತ್ತಿದ್ದ ಸಂಕೇತ್ ಕಾಶಿ ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.