Don't Miss!
- Finance ಆಕ್ಸಿಸ್ ಬ್ಯಾಂಕ್ಗೆ ಭರ್ಜರಿ ಲಾಟರಿ, 7,129 ಕೋಟಿ ನಿವ್ವಳ ಲಾಭ!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಕ್ತದಲ್ಲಿ ಪತ್ರ ಬರೆದ ಕಾಮಿಡಿ ಕಿಂಗ್ ಶರಣ್
ಇದು ಸಿನಿಮಾ ಕಥೆಯಲ್ಲ, ಬದ್ಲಾಗಿ ನಿಜವಾಗ್ಲೂ ನಡೆದ ಘಟನೆ. ಚಂದನವನದ ಕಾಮಿಡಿ ಕಿಂಗ್ ಶರಣ್ ಅವರು ತಮ್ಮ ರಕ್ತದಲ್ಲಿ ಪತ್ರ ಬರೆದರಂತೆ. ಹೌದು ಉತ್ತರ ಕರ್ನಾಟಕದಲ್ಲಿ ನಡೆಯುತ್ತಿರುವ ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆಯ ಹೋರಾಟದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ನಟ ಶರಣ್ ತಮ್ಮ ರಕ್ತದಲ್ಲಿ ಮನವಿ ಪತ್ರ ಬರೆದಿದ್ದಾರೆ.
ಬೆಳಗ್ಗಿನ ಹೊತ್ತು ಸುಮಾರು 10 ಘಂಟೆಯಿಂದ ಸಂಜೆ 5 ಘಂಟೆಯವರೆಗೆ ನವಲಗುಂದದಲ್ಲಿ ಹೋರಾಟಗಾರರೊಂದಿಗೆ ಧರಣಿ ಕುಳಿತಿದ್ದ ನಟ ಶರಣ್ ಅವರು ತಾವು ಉಪವಾಸ ಸತ್ಯಾಗ್ರಹ ಕೈಗೊಂಡು, ನಂತರ ತಮ್ಮ ರಕ್ತದಲ್ಲಿ ಮನವಿ ಪತ್ರ ಬರೆದು ಅಲ್ಲಿನ ತಹಶೀಲ್ದಾರರಿಗೆ ನೀಡುವ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಮನವಿ ಮಾಡಿದ್ದಾರೆ.[ಕಳಸಾ-ಬಂಡೂರಿಗೆ ಸ್ಯಾಂಡಲ್ ವುಡ್ ಕಿಚ್ಚು ; ಯಾರು ಏನು ಹೇಳಿದರು?]
ಈ ಮೊದಲು ಸ್ಯಾಂಡಲ್ ವುಡ್ ನ ಎಲ್ಲಾ ತಾರೆಯರು ಕಳಸಾ-ಬಂಡೂರಿ ಹೋರಾಟದಲ್ಲಿ ಭಾಗವಹಿಸಿದ್ದು, ನಟಿ ಪೂಜಾ ಗಾಂಧಿ ಅವರು ಈ ಯೋಜನೆಯ ಬಗ್ಗೆ ಸಾಕ್ಷ್ಯಚಿತ್ರವನ್ನು ಕೂಡ ನಿರ್ಮಾಣ ಮಾಡಿದ್ದಾರೆ.[ನರೇಂದ್ರ ಮೋದಿಗೆ ಕರ್ನಾಟಕದ ಕೂಗು ಕೇಳಿಸಲಿ: ಚಿತ್ರರಂಗ ]
ಜೊತೆಗೆ ಕಾಮಿಡಿ ಕಿಂಗ್ ಶರಣ್ ಅವರು ಈ ಮೊದಲು ಕೂಡ ಈ ಹೋರಾಟದಲ್ಲಿ ಭಾಗವಹಿಸಿದ್ದು, ಇದೀಗ ಮತ್ತೊಮ್ಮೆ ಧರಣಿ ಕುಳಿತು, ರಕ್ತದಲ್ಲಿ ಪ್ರಧಾನಿ ಮೋದಿ ಅವರಿಗೆ ಮನವಿ ಪತ್ರ ಬರೆಯುವ ಮೂಲಕ ಅಲ್ಲಿನ ಜನರ ಬಗ್ಗೆ ತಮ್ಮ ತಳಮಳ ವ್ಯಕ್ತಪಡಿಸಿದ್ದಾರೆ.