Don't Miss!
- News ಹಿರಿಯೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಪಲ್ಟಿ: NHAIನ ಆ ಒಂದು ಯಡವಟ್ಟಿನ ವಿರುದ್ಧ ಭುಗಿಲೆದ್ದ ಆಕ್ರೋಶ
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಾಸ್ತಿಗುಡಿ' ವಿಲನ್ ಉದಯ್ ಬದುಕಿದ್ದರೇ 29ನೇ ಹುಟ್ಟುಹಬ್ಬ
'ಮಾಸ್ತಿಗುಡಿ' ಚಿತ್ರದ ದುರಂತದಲ್ಲಿ ಸಾವುಗೀಡಾಗಿದ್ದ ಉದಯ್ ಗೆ ಇಂದು (ಜನವರಿ 16) ಹುಟ್ಟುಹಬ್ಬ. ಕನ್ನಡದ ಉದಯೋನ್ಮುಖ ಖಳನಟನಾಗಿದ್ದ ಉದಯ್ ಇಂದು ನಮ್ಮೊಂದಿಗೆ ಇದ್ದಿದ್ದರೇ, 29ನೇ ಬರ್ತ್ ಡೇಯನ್ನ ಆಚರಣೆ ಮಾಡಿಕೊಳ್ಳುತ್ತಿದ್ದರು.
ಆದ್ರೆ, ವಿಧಿಯಾಟಕ್ಕೆ ಬಲಿಯಾದ ಯುವ ಪ್ರತಿಭೆ ಉದಯ್, 'ಮಾಸ್ತಿಗುಡಿ' ಚಿತ್ರದ ಚಿತ್ರೀಕರಣದ ವೇಳೆ ದುರಂತ ಸಾವುಗೀಡಾಗಿ ಇಹಲೋಕವನ್ನ ತ್ಯಜಿಸಿದ್ದರು.['ಮಾಸ್ತಿ ಗುಡಿ' ಖಳನಟರ ದುರಂತ ಸಾವು: ದುರ್ಘಟನೆಯ ಸಂಪೂರ್ಣ ವಿವರ]
ಉದಯ್ ತುಂಬಾ ಕಷ್ಟಪಟ್ಟು ಚಿತ್ರರಂಗ ಪ್ರವೇಶ ಮಾಡಿದ್ದರು. ಆರಂಭದಲ್ಲಿ ಕೇವಲ ಫೈಟರ್ ಆಗಿದ್ದ ಉದಯ್, ನಂತರ ಚಿಕ್ಕ ಚಿಕ್ಕ ಪಾತ್ರಗಳನ್ನ ಮಾಡುತ್ತಿದ್ದರು. ಆಗ ಉದಯ್ ಅವರ ಪ್ರತಿಭೆಯನ್ನ ಗುರುತಿಸಿದ ದುನಿಯಾ ವಿಜಯ್ 'ಜಯಮ್ಮನ ಮಗ' ಚಿತ್ರದಲ್ಲಿ ಮುಖ್ಯ ಖಳನಾಟನಾಗಿ ಅವಕಾಶ ನೀಡಿದರು. ಆಗಲೇ ನೋಡಿ ಉದಯ್ ಜೀವನದಲ್ಲಿ ಗೆಲುವಿನ ಉದಯವಾಗಿದ್ದು.[ನಿಮಗೆಲ್ಲಾ ಗೊತ್ತಿಲ್ಲದ 'ಮಾಸ್ತಿ ಗುಡಿ' ವಿಲನ್ ಉದಯ್ ಅಸಲಿ ಕಹಾನಿ]
ಉದಯ್ ಇದುವರೆಗೂ, ದುನಿಯಾ ವಿಜಯ್ ರವರ 'ಯುಗ', ದರ್ಶನ್ ಅಭಿನಯದ 'ಇಂದ್ರ', ಪುನೀತ್ ಅಭಿನಯದ 'ವಂಶಿ', ಶಿವಣ್ಣನ 'ಮಾದೇಶ' ಸೇರಿದಂತೆ ಹಲವು ಸಿನಿಮಾಗಳಲ್ಲಿ ಸ್ಟಂಟ್ ಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. 'ಜಯಮ್ಮನ ಮಗ', 'ರಾಟೇ', 'ಡಾರ್ಲಿಂಗ್', 'ಅಂಬರೀಶ್', 'ಐರಾವತ', 'ವಿಜಯಾಧಿತ್ಯ', 'ಡೇಂಜರ್ ಝೂನ್', 'ದೊಡ್ಮನೆ ಹುಡ್ಗ' ದಂತಹ ದೊಡ್ಡ ಚಿತ್ರಗಳಲ್ಲಿ ಉದಯ್ ಖಳನಾಯಕನಾಗಿ ತಮ್ಮ ಖದರ್ ತೋರಿಸಿದ್ದಾರೆ.
ಉದಯ್ ಸಾಯುವುದಕ್ಕೂ ಮುಂಚೆ, ದುನಿಯಾ ವಿಜಯ್ ಅಭಿನಯದ 'ಮಾಸ್ತಿಗುಡಿ' ಚಿತ್ರದಲ್ಲಿ ಖಳನಟನಾಗಿ ಅಭಿನಯಿಸುತ್ತಿದ್ದರು. ಈ ಚಿತ್ರಕ್ಕಾಗಿ ತಿಂಗಳುಗಳ ಕಾಲ ತಯಾರಿ ನಡೆಸಿದ್ದರು. ಆದ್ರೆ, ದುರಾದೃಷ್ಟವಶಾತ್ ನವೆಂಬರ್ 8 ರಂದು ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ವೇಳೆ ಚಾಪರ್ ನಿಂದ ಕೆರೆಗೆ ಹಾರಿ ಉದಯ್ ಹಾಗೂ ಅನಿಲ್ ಇಬ್ಬರು ನೀರು ಪಾಲಾಗಿದ್ದರು.['ಮಾಸ್ತಿ ಗುಡಿ' ಶೂಟಿಂಗ್ ವೇಳೆ ಕೆರೆಗೆ ಹಾರಿದ ಖಳನಾಯಕ ಅನಿಲ್, ಉದಯ್ ಸಾವು]