Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ರಾಜ್ಯೋತ್ಸವ ಪ್ರಯುಕ್ತ ರವಿಚಂದ್ರನ್ 'ಅಪೂರ್ವ' ಕೊಡುಗೆ
ಕನಸುಗಾರ ರವಿಚಂದ್ರನ್ ರವರ ಹೊಸ ಕನಸು 'ಅಪೂರ್ವ'. ವರ್ಷದಿಂದ ಸಖತ್ ಸ್ಟೈಲಿಶ್ ಆಗಿ ರೆಡಿಯಾಗಿರುವ 'ಅಪೂರ್ವ' ಸಿನಿಮಾ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತೆರೆ ಕಾಣಲಿದೆ.
ಹಾಗ್ನೋಡಿದ್ರೆ, ಕ್ರೇಜಿ ಸ್ಟಾರ್ ರವಿಚಂದ್ರನ್ ನಟಿಸಿ, ನಿರ್ದೇಶಿಸಿರುವ 'ಅಪೂರ್ವ' ಏಪ್ರಿಲ್ ತಿಂಗಳಲ್ಲೇ ರಿಲೀಸ್ ಆಗಬೇಕಿತ್ತು. ಆದ್ರೆ, ತಾಂತ್ರಿಕ ಕಾರಣಗಳಿಂದ ಚಿತ್ರದ ಬಿಡುಗಡೆ ಪೋಸ್ಟ್ ಪೋನ್ ಆಗಿದೆ.
ಹ್ಹಾ, ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರವಿಚಂದ್ರನ್ 'ಅಪೂರ್ವ' ಬಿಡುಗಡೆ ಮಾಡುತ್ತಿರುವುದಕ್ಕೂ ಒಂದು ಕಾರಣ ಇದೆ. 'ಅಪೂರ್ವ' ಚಿತ್ರದ ಸಂಕಲನದಲ್ಲಿ ರವಿಚಂದ್ರನ್ ಹೊಸ ಪ್ರಯೋಗ ಮಾಡಿದ್ದಾರೆ. ಚಲನಚಿತ್ರ ಇತಿಹಾಸದಲ್ಲೇ ಇದು ನೂತನ ಪ್ರಯೋಗವಾಗಿದ್ದು, 'ಅಪೂರ್ವ' ಕನ್ನಡ ಚಿತ್ರರಂಗದ ಮಟ್ಟಿಗೆ ಹೊಸ ಮೈಲಿಗಲ್ಲು ಆಗಲಿದೆ ಅನ್ನುವ ವಿಶ್ವಾಸ ರವಿಚಂದ್ರನ್ ರವರಿಗಿದೆ. ಇದೇ ಕಾರಣಕ್ಕೆ ಕನ್ನಡ ರಾಜ್ಯೋತ್ಸವದಂದು 'ಅಪೂರ್ವ' ಬಿಡುಗಡೆ ಮಾಡುವುದಕ್ಕೆ ಹೊರಟಿದ್ದಾರೆ ಕ್ರೇಜಿ ಸ್ಟಾರ್. [ಚಕಿತಗೊಳಿಸುವ ರವಿಚಂದ್ರನ್ 'ಅಪೂರ್ವ' ಸಂಗತಿಗಳು]
ಆದ್ರೆ, ನವೆಂಬರ್ 1 ನೇ ತಾರೀಖು ಭಾನುವಾರ. ರವಿವಾರದಂದು ಇದುವರೆಗೂ ಯಾರೂ ಸಿನಿಮಾ ಬಿಡುಗಡೆ ಮಾಡಿಲ್ಲ. ಹೀಗಾಗಿ, ಆಕ್ಟೋಬರ್ 30ನೇ ತಾರೀಖು 'ಅಪೂರ್ವ' ಬಿಡುಗಡೆ ಮಾಡುವ ಪ್ಲಾನ್ ಮಾಡಿದ್ದಾರೆ ರವಿಚಂದ್ರನ್.
19ರ ಹರೆಯದ ಹುಡುಗಿ ಮತ್ತು 61ರ ಮುದುಕನ ನಡುವಿನ ಅಪರೂಪದ ಪ್ರೇಮ ಕಥೆ 'ಅಪೂರ್ವ'. ಒಂದೇ ಲಿಫ್ಟ್ ನಲ್ಲಿ ಚಿತ್ರದ ಬಹುತೇಕ ಚಿತ್ರೀಕರಣ ನಡೆದಿದ್ದು, 'ಅಪೂರ್ವ' ಮೂಲಕ ದಾಖಲೆಗಳನ್ನ ಸೃಷ್ಟಿಸುವುದಕ್ಕೆ ರವಿಚಂದ್ರನ್ ಉತ್ಸುಕರಾಗಿದ್ದಾರೆ.