Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮನಸು ಮಲ್ಲಿಗೆ' ನೋಡಿದ ಯಶ್ ಹೇಳಿದ್ದೇನು?
ಎಸ್.ನಾರಾಯಣ್ ನಿರ್ದೇಶನದ 'ಮನಸು ಮಲ್ಲಿಗೆ' ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಗಳಿಸಿಕೊಂಡಿದೆ. ಪ್ರೇಕ್ಷಕರು ಮೆಚ್ಚಿಕೊಂಡ 'ಮನಸು ಮಲ್ಲಿಗೆ'ಯನ್ನ ಇತ್ತೀಚೆಗಷ್ಟೇ ರಾಕಿಂಗ್ ಸ್ಟಾರ್ ಯಶ್ ಕೂಡ ನೋಡಿ ಇಷ್ಟಪಟ್ಟಿದ್ದಾರೆ.[ಟ್ರೈಲರ್: ಕನ್ನಡದ 'ಪ್ರೇಮಕಾವ್ಯ' ಆಗುವ ಸೂಚನೆ ಕೊಟ್ಟ 'ಮನಸು ಮಲ್ಲಿಗೆ' ]
ಯಶ್ ಹೇಳಿದ್ದೇನು?
''ಸಿನಿಮಾ ತುಂಬಾ ನೈಜವಾಗಿ ಮೂಡಿ ಬಂದಿದೆ. ಚಿತ್ರದ ಕ್ಲೈಮ್ಯಾಕ್ಸ್ ಪರಿಣಾಮಕಾರಿಯಾಗಿದೆ. ಇಬ್ಬರು ತುಂಬಾ ಚೆನ್ನಾಗಿ ಅಭಿನಯ ಮಾಡಿದ್ದಾರೆ. ಇಬ್ಬರಲ್ಲೂ ಆ ಮುಗ್ದತೆ ಇದೆ. ರಿಂಕು ರಾಜ್ ಗುರು ಈಗಾಗಲೇ ಮರಾಠಿಯಲ್ಲಿ ಅಭಿನಯಿಸಿ ಗುರುತಿಸಿಕೊಂಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ಅವರು ಒಂದೊಳ್ಳೆ ಸಿನಿಮಾ ಕೊಟ್ಟಿದ್ದಾರೆ. ಎಸ್.ನಾರಾಯಣ್ ಅವರು 'ಚೆಲುವಿನ ಚಿತ್ತಾರ'ದ ನಂತರ ಅಂತಹದ್ದೇ ಮತ್ತೊಂದು ಸಿನಿಮಾ ಮಾಡಿದ್ದಾರೆ'' ಎಂದು 'ಮನಸು ಮಲ್ಲಿಗೆ' ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅಂದ್ಹಾಗೆ, 'ಮನಸು ಮಲ್ಲಿಗೆ' ಮರಾಠಿಯ ಸೈರಾಟ್ ಚಿತ್ರದ ರೀಮೇಕ್. ಕಲಾ ಸಾಮ್ರಾಟ್ ಎಸ್.ನಾರಾಯಣ್ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ಇನ್ನು ಮೂಲ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ರಿಂಕು ರಾಜ್ ಗುರು ಕನ್ನಡದಲ್ಲೂ ನಾಯಕಿಯಾಗಿ ಕಾಣಿಸಿಕೊಂಡಿದ್ರೆ, ಬಹುಭಾಷಾ ನಟ ಸತ್ಯ ಪ್ರಕಾಶ್ ಅವರು ಮಗ ನಿಶಾಂತ್ ಈ ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆಗೆ ಕಾಲಿಟ್ಟಿದ್ದಾರೆ.