Don't Miss!
- News ಕ್ವಿಟ್ ಎನ್ಡಿಎ ಮತ್ತು ಸೇವ್ ಇಂಡಿಯಾ: ಪ್ರೊ. ಮಹೇಶ್ಚಂದ್ರಗುರು
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ನಟಿ ಭಾರತಿ ವಿಷ್ಣುವರ್ಧನ್ ಗೆ ಪದ್ಮಶ್ರೀ ಪ್ರಶಸ್ತಿ
'ಅಭಿನಯ ಭಾರ್ಗವ' ದಿವಂಗತ ನಟ ಡಾ.ವಿಷ್ಣುವರ್ಧನ್ ರವರ ಧರ್ಮಪತ್ನಿ ನಟಿ ಭಾರತಿ ವಿಷ್ಣುವರ್ಧನ್ 'ಪದ್ಮಶ್ರೀ' ಗೌರವಕ್ಕೆ ಪಾತ್ರರಾಗಿದ್ದಾರೆ.
ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದ್ದು, ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪುರಸ್ಕಾರವಾದ 'ಪದ್ಮಶ್ರೀ' ಪ್ರಶಸ್ತಿಗೆ ನಟಿ ಭಾರತಿ ವಿಷ್ಣುವರ್ಧನ್ ಭಾಜನರಾಗಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸೇವೆ ಪರಿಗಣಿಸಿ 'ಪದ್ಮಶ್ರೀ' ಪ್ರಶಸ್ತಿಗೆ ನಟಿ ಭಾರತಿ ವಿಷ್ಣುವರ್ಧನ್ ರವರನ್ನು ಭಾರತ ಸರ್ಕಾರ ಆಯ್ಕೆ ಮಾಡಿದೆ.[ಸುಕ್ರಿ ಬೊಮ್ಮಗೌಡ ಸೇರಿದಂತೆ 150 ಸಾಧಕರಿಗೆ ಪದ್ಮಶ್ರೀ ಗೌರವ]
'ಲವ್ ಇನ್ ಬ್ಯಾಂಗಲೋರ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟಿ ಭಾರತಿ ವಿಷ್ಣುವರ್ಧನ್ 'ಸಂಧ್ಯಾ ರಾಗ', 'ಬಂಗಾರದ ಮನುಷ್ಯ', 'ಭಲೇ ಜೋಡಿ', 'ದೂರದ ಬೆಟ್ಟ' ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲೂ ತಮ್ಮದೆ ಆದ ಛಾಪು ಮೂಡಿಸಿ ನಟಿ ಭಾರತಿ ವಿಷ್ಣುವರ್ಧನ್ ಜನಪ್ರಿಯತೆ ಗಳಿಸಿದ್ದಾರೆ.