Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನೀರ್ ದೋಸೆ' ಬೆಡಗಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಇಲ್ಲಿದೆ ಅವಕಾಶ!
'ನೀರ್ ದೋಸೆ' ಬೆಡಗಿ ಹರಿಪ್ರಿಯಾ ಅವರು ತಮ್ಮ ಅಭಿಮಾನಿಗಳಿಗೆ ಓಪನ್ ಇನ್ವಿಟೇಷನ್ ಕೊಟ್ಟಿದ್ದಾರೆ. ಅದೇನಪ್ಪಾ ಅಂದ್ರೆ, ನಟಿ ಹರಿಪ್ರಿಯಾ ಅವರು ತಮ್ಮ ಹುಟ್ಟುಹಬ್ಬವನ್ನು ಇದೇ ಗುರುವಾರ (ಅಕ್ಟೋಬರ್ 29) ದಂದು ಆಚರಿಸಿಕೊಳ್ಳುತ್ತಿದ್ದು, ಆ ದಿನ ತಮ್ಮ ಅಭಿಮಾನಿಗಳಿಗೆ ಶೂಟಿಂಗ್ ಸ್ಪಾಟ್ ನಲ್ಲಿ ತಮ್ಮೊಂದಿಗೆ ಸೆಲ್ಫಿ ತೆಗೆಯುವ ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ.
ನಟಿ ಹರಿಪ್ರಿಯಾ ಅವರು ಈಗಾಗಲೇ 'ನೀರ್ ದೋಸೆ' ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಶೂಟಿಂಗ್ ನಡುವೆಯೂ ಸ್ವಲ್ಪ ಗ್ಯಾಪ್ ನಲ್ಲಿ ಬಿಡುವು ಮಾಡಿಕೊಂಡು ತಮ್ಮ ಪ್ರೀತಿಯ ಅಭಿಮಾನಿಗಳಿಗೆ ಸಮಯ ಕೊಡಲು ಹಾಗೂ ಅವರೊಂದಿಗೆ ಸ್ವಲ್ಪ ಸಮಯ ಕಳೆಯಲು ನಿರ್ಧರಿಸಿದ್ದಾರೆ.[ನೀರ್ ದೋಸೆಗೆ ತುಂಬಿದ ತೊಂಡೆ ಹಣ್ಣಿನಂತಿರುವ ಹರಿಪ್ರಿಯಾ?]
ನಾಳೆ (ಅಕ್ಟೋಬರ್ 29 ರಂದು, ಗುರುವಾರ) 1.30 ರಿಂದ 2.30ರ ವರೆಗೆ ಯಾರೆಲ್ಲಾ 'ಉಗ್ರಂ' ಬೆಡಗಿ ಹರಿಪ್ರಿಯ ಅವರ ಅಭಿಮಾನಿಗಳು ಇದ್ದಾರೋ, ಅವರೆಲ್ಲರೂ 'ನೀರ್ ದೋಸೆ' ಸ್ಪಾಟ್ ಗೆ ಭೇಟಿ ಕೊಟ್ಟು ಬರ್ತ್ ಡೇ ಗರ್ಲ್ ಹರಿಪ್ರಿಯ ಅವರೊಂದಿಗೆ ಸೆಲ್ಫಿ ತೆಗೆಸಿಕೊಳ್ಳಬಹುದು.
'ನೀರ್ ದೋಸೆ' ಚಿತ್ರದ ಶೂಟಿಂಗ್ ಸ್ಪಾಟ್ ಎಲ್ಲಿ, ಏನು, ಎತ್ತ ಅಂತ ಚಿತ್ರತಂಡ ಇಂದು ಸಂಜೆ ಒಳಗಾಗಿ ತಿಳಿಸಲಿದೆ. ಆನಂತರ ಅಭಿಮಾನಿಗಳು ನಾಳೆಯ ದಿನ ಸ್ಥಳಕ್ಕೆ ಭೇಟಿ ಕೊಟ್ಟು ಹರಿಪ್ರಿಯಾ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಬಹುದು.[ಬಿಸಿ ಬಿಸಿ 'ನೀರ್ ದೋಸೆ'ಗೆ ಮಸಾಲೆ ಹಾಕಿದ ಹರಿಪ್ರಿಯಾ]
ನಿರ್ದೇಶಕ ವಿಜಯ್ ಪ್ರಸಾದ್ ಅವರು ಆಕ್ಷನ್-ಕಟ್ ಹೇಳುತ್ತಿರುವ 'ನೀರ್ ದೋಸೆ' ಚಿತ್ರದಲ್ಲಿ ಹರಿಪ್ರಿಯಾ ಅವರು ಮುಖ್ಯ ಪಾತ್ರ ವಹಿಸುತ್ತಿದ್ದಾರೆ. ಈ ಮೊದಲು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅವರು 'ನೀರ್ ದೋಸೆ' ಹುಯ್ಯಲಿದ್ದಾರೆ ಅಂತ ಸುದ್ದಿಯಾಗಿತ್ತಾದರೂ, ರಮ್ಯ ನೋ ಎಂದ ಮೇಲೆ ಕೊನೆಯ ಕ್ಷಣದಲ್ಲಿ ಅದು 'ಉಗ್ರಂ' ಬೆಡಗಿ ಪಾಲಾಗಿದೆ
ಚಿತ್ರದಲ್ಲಿ ನಟಿ ಹರಿಪ್ರಿಯಾ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆಯಲಿದ್ದಾರೆ. ನಟ ಜಗ್ಗೇಶ್ ಅವರು ಕೂಡ 'ನೀರ್ ದೋಸೆ' ಹುಯ್ಯುವಲ್ಲಿ ಮುಖ್ಯ ಪಾತ್ರ ವಹಿಸುತ್ತಿದ್ದಾರೆ.