Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ನೇಹಿತರಿಂದಲೇ ಕನ್ನಡ ಚಿತ್ರನಟಿಗೆ ಲೈಂಗಿಕ ಕಿರುಕುಳ.!
ಚಿತ್ರನಟಿಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ದಿನೇ ದಿನೇ ಜಾಸ್ತಿಯಾಗುತ್ತಿವೆ. ಇತ್ತೀಚೆಗಷ್ಟೆ ನಟಿ, ನಿರೂಪಕಿ ಶೀತಲ್ ಶೆಟ್ಟಿಗೆ ಯುವಕನೊಬ್ಬ ಫೇಸ್ ಬುಕ್ ನಲ್ಲಿ ಅಸಹ್ಯಕರ ಸಂದೇಶ ಕಳುಹಿಸಿದ್ದ ಪ್ರಕರಣ ಸುದ್ದಿ ಮಾಡಿತ್ತು. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಕನ್ನಡ ಚಿತ್ರ ನಟಿಯೊಬ್ಬರಿಗೆ ಸ್ನೇಹಿತರೇ ಲೈಂಗಿಕ ಕಿರುಕುಳ ನೀಡಿದ್ದಾರೆ.
ಯುವ ನಟಿಯ ಕೈಯನ್ನು ಎಳೆದ ಇಬ್ಬರು ಪುಂಡರು ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಆ ನಟಿ ರಾಜಗೋಪಾಲನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇಲ್ಲಿದೆ. ಓದಿರಿ....
ಅಷ್ಟಕ್ಕೂ ನಡೆದದ್ದೇನು.?
ಚಿತ್ರನಟಿಯೊಬ್ಬರ ಮೇಲೆ ಸಚಿನ್ ಮತ್ತು ಪ್ರವೀಣ್ ಎಂಬುವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ರಸ್ತೆಯಲ್ಲಿ ನಟಿಯ ಕೈಯನ್ನು ಹಿಡಿದು, ಎಳೆದಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಲು ಮುಂದಾಗಿದ್ದರಂತೆ.
ಘಟನೆ ನಡೆದದ್ದು ಏಲ್ಲಿ..?
ಬೆಂಗಳೂರಿನ ಹೆಗ್ಗನಹಳ್ಳಿ ಬಳಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ಶೂಟಿಂಗ್ ಮುಗಿಸಿಕೊಂಡು ಬರುತಿದ್ದ ಯುವ ನಟಿಗೆ ಕಿಡಿಗೇಡಿಗಳು ಕಿರುಕುಳ ನೀಡಿದ್ದಾರೆ.
ದುಡ್ಡಿನ ವಿಚಾರಕ್ಕೆ ಇಷ್ಟೆಲ್ಲ.!
ಚಿತ್ರನಟಿಗೆ ಸಚಿನ್ ಮತ್ತು ಪ್ರವೀಣ್ ಸ್ನೇಹಿತರು. ಕಳೆದ 3 ವರ್ಷಗಳಿಂದ ಇವರೆಲ್ಲ ಸ್ನೇಹಿತರಾಗಿದ್ದು, ದುಡ್ಡಿನ ವಿಚಾರಕ್ಕೆ ಕಿತ್ತಾಟ ಶುರುವಾಗಿದೆ ಎಂದು ತಿಳಿದು ಬಂದಿದೆ.
ಚಿತ್ರ ನಟಿ ಏನಂತಾರೆ..?
ಪ್ರಕರಣದ ಬಗ್ಗೆ ಸುದ್ದಿವಾಹಿನಿಗಳಿಗೆ ಹೇಳಿಕೆ ನೀಡಿರುವ ಚಿತ್ರನಟಿ, ''2 ವರ್ಷಗಳಿಂದ ಸಚಿನ್ ಮತ್ತು ಪ್ರವೀಣ್ ತೊಂದರೆ ಕೊಡುತ್ತಿದ್ದರು. ಇಬ್ಬರು ಸಹ ಫೋನ್ ಮಾಡಿ ಹಿಂಸೆ ನೀಡುತ್ತಿದ್ದರು. ಇಷ್ಟು ದಿನ ಸುಮ್ಮನಿದ್ದೆ. ಆದ್ರೆ, ನಿನ್ನೆ ನನ್ನ ಮೇಲೆ ಹಲ್ಲೆ ಮಾಡುವುದಕ್ಕೆ ಮುಂದಾಗಿದ್ದ ಕಾರಣ ಪೊಲೀಸ್ ಠಾಣೆಗೆ ದೂರು ನೀಡಿದೆ'' ಎಂದು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಮುಂದಾಗಿದ್ದೆ
''ಈ ಘಟನೆಯಿಂದ ನಾನು ತುಂಬ ನೊಂದಿದ್ದೇನೆ. ಈ ಘಟನೆಯ ಬಳಿಕ ನಿನ್ನೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದೆ. ಅದ್ರೇ ಕುಟುಂಬ ಮತ್ತು ಸ್ನೇಹಿತರು ಧೈರ್ಯ ತುಂಬಿದರು'' ಎನ್ನುತ್ತಾರೆ ಆ ನಟಿ.
ತನಿಖೆ ನಡೆಯುತ್ತಿದೆ
ಈಗಾಗಲೇ ಪ್ರಕರಣವನ್ನ ದಾಖಲು ಮಾಡಿಕೊಂಡಿರುವ ರಾಜಗೋಪಾಲನಗರ ಠಾಣೆಯ ಪೊಲೀಸರು ಎಫ್.ಐ.ಆರ್ ಹಾಕಿದ್ದಾರೆ. ಮುಂದೆ ಆರೋಪಿಗಳನ್ನ ಕರೆಸಿ ವಿಚಾರಣೆ ನಡೆಸುತ್ತಾರಂತೆ.