Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕನ್ನಡ ಚಿತ್ರಗಳ ಚೈತ್ರಕಾಲ' ವಿಶೇಷ ಕಾರ್ಯಕ್ರಮಕ್ಕೆ ನೀವೂ ಬನ್ನಿ
ಇತ್ತೀಚೆಗೆ ಕನ್ನಡ ಚಿತ್ರರಂಗಕ್ಕೆ ಹೊಸ ಪರ್ವ ಕಾಲ ಬಂದಂತಾಗಿದ್ದು, ಹೊಸಬರ ಸಿನಿಮಾಗಳು ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆಯುತ್ತಿವೆ. ರಾಮ್ ರೆಡ್ಡಿ ಅವರ 'ತಿಥಿ' ಸಿನಿಮಾ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ನಂತರ ಇದೀಗ 'ಯು-ಟರ್ನ್', 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಮತ್ತು 'ಕರ್ವ' ಸಿನಿಮಾಗಳು ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆ ಎಬ್ಬಿಸಿವೆ.
ಇದೀಗ ಈ ಬಗ್ಗೆ ಕನ್ನಡ ಚಲನಚಿತ್ರ ಅಕಾಡೆಮಿಯು ಜೂನ್ 13, ಸೋಮವಾರದಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರು ಕುಮಾರ ಪಾರ್ಕ್ ರಸ್ತೆಯಲ್ಲಿರುವ ಗಾಂಧಿ ಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ "ಕನ್ನಡ ಚಿತ್ರದ ಚೈತ್ರಕಾಲ - ಸಿನಿಮಾವಲೋಕನ" ಎಂಬ ವಿಶೇಷ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಿದೆ.[KFCCಯಿಂದ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ]
ಈ ಕಾರ್ಯಕ್ರಮಕ್ಕೆ ಕನ್ನಡದ ಖ್ಯಾತ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರು ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್. ಆರ್. ವಿಶುಕುಮಾರ್, ಉದಯವಾಣಿಯ ಪುರವಣಿ ಸಂಪಾದಕ ಹಾಗೂ ಚಿತ್ರ ಸಾಹಿತಿ ಜೋಗಿ.
ಚಲನಚಿತ್ರ ನಿರ್ದೇಶಕ ಹಾಗೂ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್, ಬಿ-ಟಿವಿ ಸಾಂಸ್ಕೃತಿಕ ವಿಭಾಗದ ಸದಾಶಿವ ಶೆಣೈ, ಪ್ರಜಾವಾಣಿ ಮುಖ್ಯ ಉಪ ಸಂಪಾದಕ ಚ.ಹ. ರಘುನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ.ರಾ. ಗೋವಿಂದು ಮುಂತಾದವರು ಪಾಲ್ಗೊಳ್ಳಲಿದ್ದಾರೆ.[ಸಿನಿಮಾ ತಿಥಿ ಮಾಡ್ಬೇಡಿ ಸ್ವಾಮಿ, ತಿಥಿಯಂಥ ಸಿನಿಮಾ ಮಾಡಿ]
ಈ ಕಾರ್ಯಕ್ರಮದಲ್ಲಿ ಯುವ ನಿರ್ದೇಶಕರುಗಳಾದ 'ತಿಥಿ' ಚಿತ್ರದ ನಿರ್ದೇಶಕ ರಾಮ್ ರೆಡ್ಡಿ, 'ಯು- ಟರ್ನ್' ನಿರ್ದೇಶಕ ಪವನ್ ಕುಮಾರ್, 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಚಿತ್ರದ ನಿರ್ದೇಶಕ ಹೇಮಂತ್ ರಾವ್, 'ಕರ್ವ' ಚಿತ್ರದ ನಿರ್ದೇಶಕ ನವನೀತ ಹಾಗೂ 'ಲಾಸ್ಟ್ ಬಸ್' ಚಿತ್ರದ ನಿರ್ದೇಶಕ ಅರವಿಂದ ಮುಂತಾದವರು ಭಾಗವಹಿಸಲಿದ್ದಾರೆ.['ಗೋಧಿ ಬಣ್ಣ' ವಿಮರ್ಶೆ: ಅಪ್ಪ-ಮಗನ ಅ'ಸಾಧಾರಣ' ಭಾವ-ಬಂಧ]