Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನನ್ Life ಅಲ್ಲಿ' ಚಿತ್ರ ಸೆನ್ಸಾರ್ ನಲ್ಲಿ ಫಸ್ಟ್ ಕ್ಲಾಸ್
ಸಾಮಾಜಿಕ ಸಂಪರ್ಕ ತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಸದ್ದು ಮಾಡುತ್ತಿರುವ ಚಿತ್ರ 'ನನ್ Life ಅಲ್ಲಿ'. ಹೊಸ ಪ್ರತಿಭೆಗಳ ಹೊಸ ಪ್ರಯತ್ನವಿದು. ಗುರುವಾರ (ಆ.8) ಈ ಚಿತ್ರ ಸೆನ್ಸಾರ್ ಮುಗಿಸಿಕೊಂಡು ಫಸ್ಟ್ ಕ್ಲಾಸ್ ನಲ್ಲಿ ಪಾಸಾಗಿದೆ.
ಹೊಸಬರ ಹೊಸ ಪ್ರಯತ್ನಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಅಧಿಕಾರಿ ಕೆ.ನಾಗರಾಜ್ ಅವರು ಬೆನ್ನುತಟ್ಟಿದ್ದಾರೆ. ತಾನು ವರ್ಷಕ್ಕೆ ಸೆನ್ಸಾರ್ ಗೆ ಬರುವ ಸರಿಸುಮಾರು 120 ಚಿತ್ರಗಳನ್ನು ವೀಕ್ಷಿಸುತ್ತೇನೆ. ಆದರೆ ಈ ರೀತಿಯ ವಿಭಿನ್ನ ಪ್ರಯತ್ನವನ್ನು ನಾನು ನೋಡಿಲ್ಲ. ಚಿತ್ರ ಪ್ರೇಕ್ಷಕರ ಮನಸ್ಸನ್ನು ಗೆಲ್ಲುತ್ತದೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ನನ್ನ ಮನಸ್ಸನಂತೂ ಗೆದ್ದಿದೆ ಎಂದಿದ್ದಾಗಿ ಚಿತ್ರತಂಡ ತಿಳಿಸಿದೆ.
ಸೆನ್ಸಾರ್ ನಲ್ಲಿ ಪಾಸಾಗಿರುವ ಚಿತ್ರವನ್ನು ಆಗಸ್ಟ್ 30 ಅಥವಾ ಸೆಪ್ಟೆಂಬರ್ 6ರಂದು ಬಿಡುಗಡೆ ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇನ್ನು ಚಿತ್ರದ ಟ್ರೇಲರ್ ಗೆ ಯೂಟ್ಯೂಬ್ ನಲ್ಲಿ ಇದುವರೆಗೂ 178,293 ಕ್ಲಿಕ್ಸ್ ಸಿಕ್ಕಿವೆ. ನಿಜಕ್ಕೂ ಇದೊಂದು ದಾಖಲೆ ಎನ್ನಬಹುದು.
ಈ ಹಿಂದೆ ಪೊಲೀಸ್ ಕ್ವಾರ್ಟಸ್ ಹಾಗೂ ನಮ್ ಏರಿಯಾಲ್ ಒಂದಿನಾ ಚಿತ್ರಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಅನೀಶ್ ತೇಜಸ್ವರ್ ಮೂರನೇ ಚಿತ್ರವಿದು. ತಮ್ಮ ಮೂರನೇ ಇನ್ನಿಂಗ್ಸ್ ನಲ್ಲಿ ಖಂಡಿತ ಗೆಲ್ಲುತ್ತೇನೆ ಎಂಬ ಭರವಸೆಯಲ್ಲಿದ್ದಾರೆ ಅನೀಶ್. ಚಿತ್ರದ ನಾಯಕಿ ಕ್ಯೂಟ್ ಬೆಡಗಿ ಸಿಂಧು ಲೋಕನಾಥ್.
ರಾಮ್ ದೀಪ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ. ಹೊಸತನಕ್ಕೆ, ವಿಭಿನ್ನತೆಗೆ ಹಾತೊರೆಯುತ್ತಿರು ಪ್ರೇಕ್ಷಕರನ್ನು ತಮ್ಮ ಚಿತ್ರ ಖಂಡಿತ ನಿರಾಶೆಪಡಿಸಲ್ಲ ಎಂಬ ಭರವಸೆಯಲ್ಲಿ ಚಿತ್ರತಂಡವಿದೆ. ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಚಿತ್ರವನ್ನು ನಿರ್ಮಿಸಲಾಗಿದೆ.
ಚಿತ್ರವು ತಾಂತ್ರಿಕವಾಗಿಯೂ ಪ್ರೌಢವಾಗಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ, ಮನೋಹರ್ ಜೋಶಿ ಅವರ ಛಾಯಾಗ್ರಹಣ, ಸಂತೋಷ್ ರಾಧಾಕೃಷ್ಣ ಅವರ ಸಂಕಲನ, ಮನೋಜ್ ಗಲಗಲಿ ಸಂಭಾಷಣೆ ಹಾಗೂ ಲೋಕೇಶ್ ಅವರ ಸಹಾಯಕ ನಿರ್ದೇಶನ ಕಮ್ ಚಿತ್ರಕಥೆ ಚಿತ್ರಕ್ಕಿದೆ. ನಿವೇದಿತಾ, ವೆಂಕಟೇಶ್ ಬಾಬು, ಅನಿಲ್ ಯುವರಾಜ್ ಮತ್ತು ಜೈಪಾಲ್ ಚಿತ್ರದ ನಿರ್ಮಾಪಕರು.
ಡೈಮಂಡ್ ಸ್ಟಾರ್ ಶ್ರೀನಗರ ಕಿಟ್ಟಿ ಹಾಗೂ ರಮೇಶ್ ಅರವಿಂದ್ ಅವರು ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ತಮ್ಮ ಚಿತ್ರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತವಾಗುತ್ತಿರುವ ಪ್ರತಿಕ್ರಿಯೆಗೆ ಚಿತ್ರತಂಡ ಸಖತ್ ಖುಷಿಯಾಗಿದ್ದು ಚಿತ್ರದ ಬಗ್ಗೆ ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. (ಒನ್ಇಂಡಿಯಾ ಕನ್ನಡ)