Don't Miss!
- Finance ಬಯೋಕಾನ್ ರಾಜಕೀಯ ದೇಣಿಗೆ ನೀಡಿಲ್ಲ ಎಂದ ಕಿರಣ್ ಮಜುಂದಾರ್ ಶಾ: ಹಾಗಿದ್ರೆ 6 ಕೋಟಿ ರೂ. ಯಾರದ್ದು?
- News ಕನ್ನಡ ನಾಮಫಲಕ: ಬಲವಂತದ ಕ್ರಮ ಬೇಡ ಎಂದ ಕೋರ್ಟ್
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Automobiles Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಿರ್ಮಾಪಕ ಎ ಆರ್ ರಾಜುಗೆ ಹೃದಯಾಘಾತ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ವಿತರಕ ಎ ಆರ್ ರಾಜು ಎಂದೇ ಖ್ಯಾತರಾಗಿರುವ ಅಲ್ಲೂರಿ ರೆಡ್ಡಪ್ಪ ರಾಜು ಅವರಿಗೆ ತೀವ್ರ ಹೃದಯಾಘಾತವಾಗಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಐದು ದಶಕಗಳ ಕಾಲ ಚಿತ್ರ ವಿತರಕರಾಗಿ, ನಿರ್ಮಾಪರಾಗಿ ರಾಜು ಅವರು ಚಿತ್ರರಂಗದಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ ಆಗಿರುವ ರಾಜು ಅವರು ಇದುವರೆಗೂ 35ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಮೊದಲ ಕಲರ್ ಚಿತ್ರ 'ಸಹೋದರ ಸವಾಲ್' ನಿರ್ಮಿಸಿದ್ದೂ ಇದೇ ರಾಜು ಅವರು. ಆ ಚಿತ್ರದಲ್ಲಿ ರಜನಿಕಾಂತ್ ಅವರಿಗೆ ವಿಷ್ಣು ತಮ್ಮನಾಗಿ ಅಭಿನಯಿಸಿರುವುದು ಎಲ್ಲರಿಗೂ ಗೊತ್ತೇ ಇದೆ.
ಸದಾ ಕನ್ನಡ ಚಿತ್ರರಂಗ ಒಗ್ಗಟಾಗಿರಬೇಕೆಂದು ಬಯಸುತ್ತಿದ್ದ ರಾಜು ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಫಿಲ್ಮಿಬೀಟ್ ಆಶಿಸುತ್ತದೆ. ವಿಜಯ್ ವಿಕ್ರಮ್, ಬೆಳ್ಳಿನಾಗ, ಭದ್ರಕಾಳಿ, ಸತಿ ಸಕ್ಕುಬಾಯಿ, ಸ್ನೇಹಿತರ ಸವಾಲ್, ಸಹೋದರರ ಸವಾಲ್, ಸಾಹಸ ಸಿಂಹ ಹೀಗೆ ಅವರು ನಿರ್ಮಿಸಿದ ಚಿತ್ರಗಳ ಪಟ್ಟಿ ಸಾಕಷ್ಟಿದೆ. (ಫಿಲ್ಮಿಬೀಟ್ ಕನ್ನಡ)