Don't Miss!
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬದುಕಿನ ಹೊಸ ಅಧ್ಯಾಯ ಆರಂಭಿಸಿದ ಕವಿರಾಜ್
ಕನ್ನಡ ಚಿತ್ರರಂಗದ ಜನಪ್ರಿಯ ಗೀತಸಾಹಿನಿ ಕವಿರಾಜ್ ಅವರ ಮದುವೆ ಮೇ.11ರಂದು ಕುಪ್ಪಳಿಯಲ್ಲಿ ಸರಳ, ಸುಂದರವಾಗಿ ನೆರವೇರಿದ್ದು ಗೊತ್ತೇ ಇದೆ. ಕನ್ನಡ ಚಿತ್ರರಂಗದ ಹಲವು ತಾರೆಗಳು ಮದುವೆ ಸಮಾರಂಭಕ್ಕೆ ಆಗಮಿಸಿ ನೂತನ ದಂಪತಿಗಳನ್ನು ಹರಸಿದರು.
ಬಯೋ
ಟೆಕ್ನಾಲಜಿ
ಕ್ಷೇತ್ರದಲ್ಲಿರುವ
ರಾಜೇಶ್ವರಿ
ಅವರನ್ನು
ಕವಿರಾಜ್
ವರಿಸಿದ್ದಾರೆ.
ಇದು
ಲವ್
ಮ್ಯಾರೇಜಾ
ಎಂದು
ಕವಿರಾಜ್
ಅವರನ್ನು
ಕೇಳಿದ್ದಕ್ಕೆ
ಅವರು
ಲವ್
ಕಮ್
ಅರೇಂಜ್ಡ್
ಮ್ಯಾರೇಜ್
ಎಂದಿದ್ದರು.
ತಮ್ಮ
ಮದುವೆ
ಬಳಿಕ
ಪ್ರತಿಕ್ರಿಯಿಸಿರುವ
ಕವಿರಾಜ್
ಅವರು
ಒಂದು
ಸಣ್ಣ
ಸಂದೇಶ
ರವಾನಿಸಿದ್ದಾರೆ.
[ಚಿತ್ರಗೀತೆಗಳ
ಮಹಾರಾಜ
ಕವಿರಾಜ್
ಸಂದರ್ಶನ]
"ಬದುಕಿನ ಹೊಸ ಅಧ್ಯಾಯದ ಆರಂಭ. ಮೇ 11 ರಂದು ರಾಷ್ಟ್ರಕವಿ ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯ ವಿಧಾನದಲ್ಲಿ ಅವರ ಜನ್ಮಸ್ಥಳ ಕುಪ್ಪಳ್ಳಿಯಲ್ಲಿ ಗೆಳತಿ ರಾಜೇಶ್ವರಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದೇನೆ. ಶುಭ ಹಾರೈಸಿದ ಹಿತೈಷಿಗಳಿಗೆಲ್ಲ ಹೃತ್ಪೂರ್ವಕ ಧನ್ಯವಾದ."
ಪ್ರೇಮ್ ನಿರ್ದೇಶನದ 'ಕರಿಯ' (2003) ಚಿತ್ರದ "ನನ್ನಲಿ ನಾನಿಲ್ಲ, ಮನದಲಿ ಏನಿಲ್ಲ.." ಎಂಬ ಗೀತೆಯ ಮೂಲಕ ಚಿತ್ರರಂಗಕ್ಕೆ ಅಡಿಯಿಟ್ಟ ಕವಿರಾಜ್ ಅನತಿಕಾಲದಲ್ಲೇ ಖ್ಯಾತಿಯ ಉತ್ತುಂಗಕ್ಕೆ ತಲುಪಿದರು. ಅವರ ಲೇಖನಿಯಿಂದ ಪದೇಪದೇ ಗುನುಗುವಂತಹ ಹಲವಾರು ಗೀತೆಗಳು ಹೊರಹೊಮ್ಮಿವೆ.
ಕಣಕಣದೇ ಶಾರದೆ (ಆಪ್ತಮಿತ್ರ), ಜಿನುಜಿನುಗೋ ಜೇನಾ ಹನಿ (ಕಂಠಿ), ಸೂರ್ಯ ತಂಪು ಸೂಸು, ಗಾಳಿ ಮೆಲ್ಲ ಬೀಸು (ಸಿದ್ದು), ಗಗನವೆ ಬಾಗಿ (ಸಂಜು ವೆಡ್ಸ್ ಗೀತ), ನೀ ಓಡಿ ಬಂದಾಗ (ಶಿವ), ಪತ್ರ ಬರೆಯಲಾ ಚಿತ್ರ ಬಿಡಿಸಲಾ...(ಅರಮನೆ), ಮೊದಮೊದಲು ಭುವಿಗಿಳಿದಾ ಮಳೆ ಹನಿಯು...(ಯಶವಂತ್) ಮುಂತಾದವು. (ಒನ್ಇಂಡಿಯಾ ಕನ್ನಡ)