Don't Miss!
- News ಮಗಳ ಹತ್ಯೆ ಬಗ್ಗೆ ತಂದೆ ನಿರಂಜನ್ ಹಿರೇಮಠ ಪ್ರತಿಕ್ರಿಯೆ: ಒಂದು ಟ್ವೀಟ್ಗೆ ಸಿಎಂ ಜವಾಬ್ದಾರಿ ಮುಗಿಯಿತೇ?: ಮಾಜಿ ಸಿಎಂ
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Finance ತನ್ನ ಯುಪಿಐ ಬಳಕೆದಾರರನ್ನು ನಾಲ್ಕು ಬ್ಯಾಂಕ್ಗಳಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಿದ Paytm
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಮ್ಯಾ-ಶಿವಣ್ಣ ಚಿತ್ರಕ್ಕೆ ಬಂಡವಾಳ ಹಾಕಿದವರು ಈಗ ಹೀರೋ.!
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಆರ್ಯನ್' ಸಿನಿಮಾ ಗೊತ್ತಲ್ವಾ? ಡಿ.ರಾಜೇಂದ್ರ ಬಾಬು ನಿರ್ದೇಶನದ ಕೊನೆಯ ಚಿತ್ರ 'ಆರ್ಯನ್'ಗೆ ಬಂಡವಾಳ ಹಾಕಿದ್ದ ನಿರ್ಮಾಪಕ ನರ್ಗೀಸ್ ಬಾಬು ಪುತ್ರ ಕಮರ್ ಈಗ ಸ್ಯಾಂಡಲ್ ವುಡ್ ನ ಬ್ರ್ಯಾಂಡ್ ನ್ಯೂ ಹೀರೋ.
ಹಾಗ್ನೋಡಿದ್ರೆ, ಇಷ್ಟೊತ್ತಿಗಾಗಲೇ ಕಮರ್ ಹೀರೋ ಆಗಿ ಕನ್ನಡ ಸಿನಿ ಪ್ರಿಯರಿಗೆ ಪರಿಚಿತರಾಗಿರಬೇಕಿತ್ತು. ಅನಿವಾರ್ಯ ಕಾರಣಗಳಿಂದ ಅವರ ಚಿತ್ರ ಪೋಸ್ಟ್ ಪೋನ್ ಆಗುತ್ತಲೇ ಇತ್ತು.
ನೋಡೋಕೆ ಸ್ಮಾರ್ಟ್ ಅಂಡ್ ಹ್ಯಾಂಡ್ಸಮ್ ಆಗಿರುವ ಕಮರ್ ಗೆ ಇದೀಗ ಅದೃಷ್ಟ ಒಲಿದು ಬಂದಿದೆ. ತಂದೆ ನರ್ಗೀಸ್ ಬಾಬು ಜೊತೆ 'ಆರ್ಯನ್' ಚಿತ್ರದ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಮರ್ ಈಗ ಹೀರೋ ಆಗುವುದು ಕನ್ಫರ್ಮ್ ಅಗಿದೆ. ['ಆರ್ಯನ್' ವಿಮರ್ಶೆ: ಅಭಿಮಾನಿಗಳ ಆಸೆಗೆ ತಣ್ಣೀರು]
ಕಮರ್ ಹೀರೋ ಆಗಿ ನಟಿಸುವ ಚಿತ್ರಕ್ಕೆ ತಂದೆ ನರ್ಗೀಸ್ ಬಾಬು ಬಂಡವಾಳ ಹಾಕಲಿದ್ದಾರೆ. ಎ.ಎಂ.ಕೊಟ್ರೇಶ್ ಅನ್ನುವ ಹೊಸ ಪ್ರತಿಭೆ ನಿರ್ದೇಶನ ಮಾಡಲಿದ್ದಾರೆ. ರವಿ ಶ್ರೀವತ್ಸ ಸಂಭಾಷಣೆ ಬರೆಯಲಿದ್ದಾರೆ. ಜೆಸ್ಸಿ ಗಿಫ್ಟ್ ಸ್ವರ ಸಂಯೋಜನೆ ಮಾಡಲಿದ್ದಾರೆ.
ಇದೇ ತಿಂಗಳು ಚಿತ್ರದ ಮುಹೂರ್ತ ನೆರವೇರಲಿದ್ದು, ಹೈದರಾಬಾದ್ ಮತ್ತು ಗೋವಾದಲ್ಲಿ ಶೂಟಿಂಗ್ ನಡೆಯಲಿದೆ. ಅಂದ್ಹಾಗೆ, ಚಿತ್ರಕ್ಕಿನ್ನೂ ಟೈಟಲ್ ಫಿಕ್ಸ್ ಆಗಿಲ್ಲ.