Don't Miss!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯ ರಾಘವೇಂದ್ರ-ಐಶ್ವರ್ಯಾ 'ಚಲ್ಲಾಪಿಲ್ಲಿ' ಶುರು
ಇತ್ತೀಚಿಗೆ ನಟಿ ಐಶ್ವರ್ಯಾ ನಾಗ್ ಅವರು ಸಾಲುಸಾಲು ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚೇತನ್ ಚಂದ್ರ ನಟನೆ ಹಾಗೂ ರವಿತೇಜ ನಿರ್ದೇಶನದ ಸದ್ಯದಲ್ಲೇ ಮುಹೂರ್ತ ನಡೆಯಲಿರುವ 'ಬಿಸ್ಕೆಟ್' ಚಿತ್ರದ ನಾಯಕಿಯಾಗಿ ಆಯ್ಕೆಯಾಗಿರುವ ಈ ಐಶ್ವರ್ಯಾ ನಾಗ್ 'ಲೂಸುಗಳು' ಎಂಬ ಮತ್ತೊಂದು ಚಿತ್ರಕ್ಕೂ ನಾಯಕಿ. ಇಷ್ಟೇ ಅಲ್ಲ, ಇನ್ನೂ ನಾಲ್ಕೈದು ಚಿತ್ರಗಳು ಐಶ್ವರ್ಯಾ ಕೈನಲ್ಲಿವೆ. ಇನ್ನು ವಿಜಯ ರಾಘವೇಂದ್ರ ನಾಯಕತ್ವದ 'ಸ್ನೇಹಿತರು' ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ.
ಕನ್ನಡದಲ್ಲಿ ಮೊದಲ ಬಾರಿಗೆ ಚಿತ್ರವೊಂದನ್ನು ನಿರ್ದೇಶಿಸುತ್ತಿರುವ ಸಾಯಿ ಕೃಷ್ಣ, ವಿಜಯರಾಘವೇಂದ್ರ ಹಾಗೂ ಐಶ್ವರ್ಯಾ ನಾಗ್ ಜೋಡಿಯನ್ನು ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ಬಹಳಷ್ಟು ರಂಗಭೂಮಿ ಕಲಾವಿದರು ಕೂಡ ಅಭಿನಯಿಸುತ್ತಿದ್ದಾರೆ. ಶೋಭರಾಜ್, ನವೀನ್ ಪಟೇಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್, ಸುಂದರ್ ರೈ, ಮಂದಾರ ಹಾಗೂ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿರವುದು ವಿಶೇಷ.
ಚಲ್ಲಾಪಿಲ್ಲಿ ಚಿತ್ರಕ್ಕೆ ಪಿ ಎಲ್ ರವಿ ಛಾಯಾಗ್ರಾಹಕರಾಗಿದ್ದು ಮಿಷ್ಠ ಸಂಗೀತ ಸಂಯೋಜಿಸಲಿದ್ದಾರೆ. ಈ ಚಿತ್ರಕ್ಕೆ ಕೌರವ ವೆಂಕಟೇಶ್ ಸಾಹಸವಿದ್ದು ಹರ್ಷ, ರಾಜೇಶ್ ಮತ್ತು ಮಾಲೂರು ಶ್ರೀನಿವಾಸ್ ನೃತ್ಯ ನಿರ್ದೇಶನವಿದೆ. ಬಾಬುಖಾನ್ ಕಲಾನಿರ್ದೇಶನ ಹಾಗೂ ಸುಹಾಸ್ ಸಹನಿರ್ದೇಶನ 'ಚಲ್ಲಾಪಿಲ್ಲಿ' ಚಿತ್ರಕ್ಕಿದೆ. ಬೆಂಗಳೂರು, ಮಂಗಳೂರು ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರಕ್ಕೆ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ. (ಒನ್ ಇಂಡಿಯಾ ಕನ್ನಡ)