Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಗಸ್ಟ್ ನಲ್ಲಿ 'ಜಾಗ್ವಾರ್' ಅಬ್ಬರ ಶುರುವಾಗುತ್ತೆ ಕಣ್ರೀ
ನಿಖಿಲ್ ಕುಮಾರ್ ಅಭಿನಯದ 'ಜಾಗ್ವಾರ್' ಸಿನಿಮಾದ ಶೂಟಿಂಗ್ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಭರದಿಂದ ಸಾಗುತ್ತಿದ್ದು, ಇನ್ನೇನು ಕೊನೆಯ ಹಂತದಲ್ಲಿದೆ. ಈಗಾಗಲೇ ಎರಡನೇ ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ, ಚಿತ್ರದ ಅರ್ಧ ಭಾಗ ಮುಗಿಸಿರುವ ಖುಷಿಯಲ್ಲಿದೆ.
ಇನ್ನೇನು ಚಿತ್ರದ ಹಾಡುಗಳು ಮತ್ತು ಕೆಲವು ಸಾಹಸ ದೃಶ್ಯಗಳ ಚಿತ್ರೀಕರಣ ಬಾಕಿ ಉಳಿದಿದೆ. ಸದ್ಯಕ್ಕೆ ಮೈಸೂರಿನ ಬೇರೆ ಬೇರೆ ಲೊಕೇಶನ್ ಗಳಲ್ಲಿ ಚಿತ್ರೀಕರಣ ನಡೆಸುತ್ತಿರುವ ಚಿತ್ರತಂಡ ಆಗಸ್ಟ್ ತಿಂಗಳಿನಲ್ಲಿ ಚಿತ್ರೀಕರಣ ಮುಗಿಸುವ ಯೋಜನೆ ಹಾಕಿಕೊಂಡಿದೆ.[ಎಕ್ಸ್ ಕ್ಲೂಸಿವ್ ಚಿತ್ರಗಳು ; ನಿಖಿಲ್ ಕುಮಾರಸ್ವಾಮಿ ಯಾರಿಗೂ ಕಮ್ಮಿ ಇಲ್ಲ!]
ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲದಲ್ಲಿ ತಯಾರಾಗುತ್ತಿರುವ 'ಜಾಗ್ವಾರ್' ಸಿನಿಮಾದಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಅವರ ತಂದೆಯ ಪಾತ್ರದಲ್ಲಿ ತೆಲುಗಿನ ಖ್ಯಾತ ನಟ ಜಗಪತಿ ಬಾಬು ಅವರು ಕಾಣಿಸಿಕೊಳ್ಳುತ್ತಿದ್ದಾರೆ.[ಫೆ.12 ಕ್ಕೆ ಕೊನೆಯಾಗಬೇಕಿದ್ದ 'ಜಾಗ್ವಾರ್' ಶೂಟಿಂಗ್ ಮುಂದೂಡಿದ್ದೇಕೆ?]
ಎಸ್.ಎಸ್ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಅವರು ಬರೆದಿರುವ ಕಥೆಯನ್ನು ನಿರ್ದೇಶಕ ಮಹದೇವ್ ಅವರು ತೆರೆ ಮೇಲೆ ತರುತ್ತಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಎಸ್.ಎಸ್ ತಮನ್ ಅವರು ಚಿತ್ರದ ಹಾಡುಗಳಿಗೆ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.[ನಿಖಿಲ್ 'ಜಾಗ್ವಾರ್'ಗೆ ನಾಯಕಿ ಯಾರು ಗೊತ್ತಾಯ್ತಾ?]
ಕೇರಳದ ಮಲ್ಲುಕುಟ್ಟಿ ನಟಿ ಕಮ್ ಮಾಡೆಲ್ ದೀಪ್ತಿ ಸತಿ ಅವರು 'ಜಾಗ್ವಾರ್' ಸಿನಿಮಾದಲ್ಲಿ ನಿಖಿಲ್ ಕುಮಾರ್ ಅವರ ಜೊತೆ ಡ್ಯುಯೆಟ್ ಹಾಡಲಿದ್ದಾರೆ. ಇನ್ನುಳಿದಂತೆ ನಟ ಆದಿತ್ಯ ಮೆನನ್, ನಟ ಸಂಪತ್ ಕುಮಾರ್ ಮುಂತಾದವರು ಪ್ರಮುಖ ಪಾತ್ರ ವಹಿಸಲಿದ್ದಾರೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ ತಿಂಗಳಿನಲ್ಲಿ ಶೂಟಿಂಗ್ ಮುಕ್ತಾಯಗೊಳಿಸಿ ಆದಷ್ಟು ಬೇಗನೇ ಸಿನಿಮಾ ರಿಲೀಸ್ ಮಾಡುವ ಉತ್ಸಾಹದಲ್ಲಿದೆ ಚಿತ್ರತಂಡ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಖುದ್ದು ಮಗನ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.