Don't Miss!
- News ಅಚ್ಚೇದಿನಗಳಲ್ಲ-ದೌರ್ಭಾಗ್ಯದ ದಿನಗಳು: ಕಾಂಗ್ರೆಸ್ ಜಾಹೀರಾತು
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೇ ತಿಂಗಳಲ್ಲೇ ಮೆಲ್ಲಗೆ ಬರುತ್ತಿದ್ದಾರೆ ಮಿಸ್ ಮಲ್ಲಿಗೆ
ಕಳೆದ ವರ್ಷದಿಂದ ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಚಿತ್ರ 'ಮಿಸ್ ಮಲ್ಲಿಗೆ'. ಇದೀಗ ನಿಮ್ಮ ನೆಚ್ಚಿನ ಚಿತ್ರಮಂದಿರಕ್ಕೆ ಮೆಲ್ಲಗೆ ಅಡಿಯಿಡಲು ಸಿದ್ಧವಾಗಿದ್ದಾರೆ. ಇದಕ್ಕೂ ಮುನ್ನ ಚಿತ್ರಕ್ಕೆ ಮೈಸೂರು ಮಲ್ಲಿಗೆ ಎಂದು ಹೆಸರಿಡಲಾಗಿತ್ತು. ಆದರೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ 'ಮಿಸ್ ಮಲ್ಲಿಗೆ'ಯಾಗಿ ಬದಲಾಯಿತು.
ಸಮಾಜದಲ್ಲಿ ಹೆಣ್ಣಿನ ಶೋಷಣೆ ಹಾಗೂ ಒಂಟಿ ಹೆಣ್ಣಿನ ಮೇಲೆ ನಿತ್ಯ ನಡೆಯುತ್ತಿರುವ ದಬ್ಬಾಳಿಕೆ ದೌರ್ಜನ್ಯದಂತಹ ಗಹನವಾದ ವಾಸ್ತವಾಂಶ ಹೊಂದಿರುವ ಕಥಾವಸ್ತುವನ್ನು ಚಿತ್ರ ಒಳಗೊಂಡಿದೆ. ಚಾಮುಂಡೇಶ್ವರಿ ಮೂವೀಸ್ ಮತ್ತು ವಿಸ್ಮಯ ವಿಶುಯಲ್ಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ 'ಮಿಸ್ ಮಲ್ಲಿಗೆ'ಚಿತ್ರದ ಪ್ರಥಮ ಪ್ರತಿ ಸಿದ್ದವಾಗಿದ್ದು ಮೇ ತಿಂಗಳ ಕೊನೆಯ ವಾರದಲ್ಲಿ ಚಿತ್ರವು ಬಿಡುಗಡೆಯಾಗಲಿದೆ. ['ಮಿಸ್ ಮಲ್ಲಿಗೆ'ಯಾಗಿ ಬದಲಾದ ಮೈಸೂರು ಮಲ್ಲಿಗೆ]
ತಮ್ಮ ಚಿತ್ರದಲ್ಲಿ ಯಾವುದೇ ಅಶ್ಲೀಲತೆ ಇಲ್ಲ. ಸಮಾಜಕ್ಕೆ ಕೆಟ್ಟ ಸಂದೇಶವೂ ಇಲ್ಲ. ಮಹಿಳೆಯರ ಮೇಲಿನ ಶೋಷಣೆಯನ್ನು ಚಿತ್ರದಲ್ಲಿ ತೋರಿಸಲು ಪ್ರಯತ್ನಿಸಿದ್ದೇವೆ. ಈ ಚಿತ್ರದಲ್ಲಿ ಮಹಿಳೆಯರಿಗೆ ಆತ್ಮವಿಶ್ವಾಸ ತುಂಬುದ ಕೆಲಸ ಮಾಡಿದ್ದೇವೆ ಎನ್ನುತ್ತಾರೆ ಆಸ್ಕರ್ ಕೃಷ್ಣ.
ಆಸ್ಕರ್ ಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಎಸ್.ನಾಗು ಸಂಗೀತ, ಸೂರ್ಯಕಾಂತ್ ಛಾಯಗ್ರಹಣ, ರಘು,ಮನು ನೃತ್ಯ ನಿರ್ದೇಶನ, ಕೃಷ್ಣ ಮತ್ತು ಕುಮಾರ್ ಸಾಹಿತ್ಯ, ಹರೀಶ್ ಸಂಕಲನ ಇರುತ್ತದೆ. ರಂಜನ್ ಶೆಟ್ಟಿ, ರೂಪಾ ನಟರಾಜ್, ಶ್ರೀಶ್ವೇತಾ, ವಿಕ್ರಂ, ದಶಾವತಾರ ಚಂದ್ರು, ವಿಕ್ಟರಿ ವಾಸು, ಮಾಸ್ಟರ್ ರಾಕಿನ್ ಇನ್ನು ಮುಂತಾದವರು ತಾರಬಳಗದಲ್ಲಿ ಇದ್ದಾರೆ. (ಒನ್ಇಂಡಿಯಾ ಕನ್ನಡ)