Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣುವರ್ಧನ್ ರವರ 'ನಾಗರಹಾವು' ಚಿತ್ರಕ್ಕೆ ತಮಿಳುನಾಡಿನಲ್ಲಿ ಬ್ರೇಕ್
ಕಾವೇರಿ ನದಿ ನೀರು ವಿವಾದದ ಹಿನ್ನಲೆ, ಡಾ.ವಿಷ್ಣುವರ್ಧನ್ ಅವರ ನಾಗರಹಾವು 'ಚಿತ್ರಕ್ಕೆ' ತಮಿಳು ನಾಡಿನಲ್ಲಿ ಬ್ರೇಕ್ ಬಿದ್ದಿದೆ. ನಾಗರಹಾವಿನ ತಮಿಳು ಅವತರಣಿಕೆಯ 'ಶಿವನಾಗಂ' ಚಿತ್ರ ತಮಿಳುನಾಡಿನಲ್ಲಿ ರದ್ದಾಗಿದೆ.
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 201ನೇ ಚಿತ್ರ 'ನಾಗರಹಾವು' ರಾಜ್ಯಾದ್ಯಂತ ಇಂದು ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ದೊರಕಿದೆ. ಆದ್ರೆ, ತಮಿಳುನಾಡಿನಲ್ಲಿ ತೆರೆಕಾಣಬೇಕಿದ್ದ 'ಶಿವನಾಗಂ' ಚಿತ್ರದ ಪ್ರದರ್ಶನ ರದ್ದಾಗಿದೆ. ಕಾರಣ 'ಕಾವೇರಿ ವಿವಾದ'.!
'ನಾಗರಹಾವು' ಚಿತ್ರ ತಮಿಳಿನಲ್ಲಿ 'ಶಿವನಾಗಂ' ಹೆಸರಿನಲ್ಲಿ ಡಬ್ ಆಗಿದ್ದು, ಇಂದು ತಮಿಳುನಾಡಿನಾದ್ಯಂತ 180 ಟಾಕೀಸ್ ನಲ್ಲಿ ಚಿತ್ರ ಪ್ರದರ್ಶನವಾಗಬೇಕಿತ್ತು. ಆದ್ರೆ, ಉಭಯ ರಾಜ್ಯಗಳ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಯದ ಹಿನ್ನಲೆ, ಕೆಲವು ತಮಿಳು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿರುವುದರಿಂದ ತಮಿಳುನಾಡಿನಲ್ಲಿ 'ಶಿವನಾಗಂ' ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲಾಗಿದೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ.
ಕಳೆದ ವಾರದಿಂದ ತಮಿಳುನಾಡಿನಲ್ಲಿ 'ನಾಗರಹಾವು' ಚಿತ್ರ ಪ್ರದರ್ಶನ ನಿಷೇಧಿಸಬೇಕೆಂದು ತಮಿಳು ಸಂಘಟನೆಗಳು ಒತ್ತಡ ಹೇರಿದ್ದವು. ಈ ಎಲ್ಲಾ ಬೆಳವಣಿಗೆಗಳನ್ನ ಗಮನಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ರವರು ಅಲ್ಲಿನ ವಿತರಕರ ಜೊತೆ ಮಾತಾನಾಡಿದ್ದರು. ಪರಿಣಾಮ, ತಮಿಳುನಾಡಿನ ವಿತರಕರು ಸಿನಿಮಾವನ್ನ ರಿಲೀಸ್ ಮಾಡುವ ಭರವಸೆ ನೀಡಿದ್ದರು. ಆದರಂತೆ, ಇಂದು ಚೆನ್ನೈನ ಅಶೋಕ್ ನಗರದಲ್ಲಿರುವ ಉದಯ್ ಚಿತ್ರಮಂದಿರದಲ್ಲಿ 'ಶಿವನಾಗಂ' ಸಿನಿಮಾ ಪ್ರದರ್ಶನವಾಗ್ಬೇಕಿತ್ತು. ಇದನ್ನು ತಿಳಿದ ಕೂಡಲೆ ತಮಿಳು ಸಂಘಟನೆಗಳು ಚಿತ್ರಮಂದಿರ ಎದುರು ಧರಣಿ ನಡೆಸಿದವು. ಹೀಗಾಗಿ, 'ಶಿವನಾಗಂ' ಚಿತ್ರದ ಪ್ರದರ್ಶನಕ್ಕೆ ಸದ್ಯ ಚೆನ್ನೈ ನಗರದಲ್ಲಿ ಬ್ರೇಕ್ ಬಿದ್ದಿದೆ.['ನಾಗರಹಾವು' ರಿಲೀಸ್: ಅಭಿಮಾನಿಗಳಿಂದ ಭರ್ಜರಿ ಸ್ವಾಗತ ]
'ಶಿವನಾಗಂ' ಚಿತ್ರವನ್ನ ತೆಲುಗಿನ ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ಆಕ್ಷನ್ ಕಟ್ ಹೇಳಿದ್ದು, ಡಾ.ವಿಷ್ಣುವರ್ಧನ್, ರಮ್ಯಾ, ದರ್ಶನ್ ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಕನ್ನಡದಲ್ಲಿ 'ನಾಗರಹಾವು' ಆಗಿ ತೆರೆಕಂಡಿರುವ ಈ ಸಿನಿಮಾ ತೆಲುಗಿನಲ್ಲಿ 'ನಾಗಭರಣಂ' ಹಾಗೂ ತಮಿಳಿನಲ್ಲಿ 'ಶಿವನಾಗಂ' ಎಂಬ ಶೀರ್ಷಿಕೆ ಅಡಿ ರೆಡಿಯಾಗಿತ್ತು.