Don't Miss!
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Finance ತನ್ನ ಯುಪಿಐ ಬಳಕೆದಾರರನ್ನು ನಾಲ್ಕು ಬ್ಯಾಂಕ್ಗಳಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಿದ Paytm
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೇ 19ರಂದು ಬೆಳ್ಳಿತೆರೆಯಲ್ಲಿ ಚಿತ್ತಾರಗೊಳ್ಳಲಿದೆ 'ನೂರೊಂದು ನೆನಪು'
'ಆ ದಿನಗಳು' ಖ್ಯಾತಿಯ ನಟ ಚೇತನ್ ಬಹುದಿನಗಳ ನಂತರ ಅಭಿನಯಿಸಿರುವ ಚಿತ್ರ 'ನೂರೊಂದು ನೆನಪು'. ಫಸ್ಟ್ ಲುಕ್ ಪೋಸ್ಟರ್ ಹಾಗೂ ಟ್ರೈಲರ್ ನಿಂದ ಕುತೂಹಲ ಮೂಡಿಸಿರುವ ಈ ಚಿತ್ರ ಕೊನೆಗೂ ತೆರೆಮೇಲೆ ಬರುವುದಕ್ಕೆ ರೆಡಿಯಾಗಿದೆ. ಮೇ 19 ರಂದು ರಾಜ್ಯಾದ್ಯಂತ 'ನೂರೊಂದು ನೆನಪು' ತೆರೆಕಾಣಲಿದೆ.
ಅಂದ್ಹಾಗೆ, 'ನೂರೊಂದು ನೆನಪು' ಮರಾಠಿಯ 'ದುನಿಯಾ ದಾರಿ' ಕಾದಂಬರಿ ಆಧಾರಿತ ಚಿತ್ರ. ಖ್ಯಾತ ಬರಹಗಾರ ಸುಹಾಸ್ ಶಿರ್ವ್ಕಾರ್ ಬರೆದಿರುವ ಮರಾಠಿ ಕಥೆಯನ್ನ ತಮ್ಮ ನೆಟಿವಿಟಿಗೆ ತಕ್ಕಂತೆ ಬದಲಿಸಿ ಸಿನಿಮಾ ಮಾಡಲಾಗಿದೆ. ಈ ಚಿತ್ರ ಸಂಪೂಣವಾಗಿ ರೆಟ್ರೋ ಸ್ಟೈಲ್ ನಲ್ಲಿ ಮೂಡಿ ಬಂದಿರುವುದು ವಿಶೇಷ. 80 ರ ದಶಕದ ಕಥಾಹಂದರವನ್ನ ಈ ಚಿತ್ರ ಹೊಂದಿದ್ದು, ಚಿತ್ರದ ಬಹುತೇಕ ಚಿತ್ರೀಕರಣವನ್ನ ಬೆಳಗಾವಿಯಲ್ಲಿ ಶೂಟ್ ಮಾಡಲಾಗಿದೆ.[ಟ್ರೈಲರ್: ನೆನಪುಗಳನ್ನ ಹೊತ್ತು ಬರುತ್ತಿದೆ 'ನೂರೊಂದು ನೆನಪು']
'ನೂರೊಂದು ನೆನಪು' ಚಿತ್ರದಲ್ಲಿ 'ಆ ದಿನಗಳು' ಖ್ಯಾತಿಯ ಚೇತನ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಚೇತನ್ ಗೆ ಜೋಡಿಯಾಗಿ ನಟಿ ಮೇಘನಾ ರಾಜ್ ಸಾಥ್ ಕೊಟ್ಟಿದ್ದಾರೆ. ಇಷ್ಟು ದಿನ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ನಟ ಚೇತನ್, 'ನೂರೊಂದು ನೆನಪು' ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ.['ನೂರೊಂದು ನೆನಪು'ಗಳಲ್ಲಿ ಚೇತನ್-ಮೇಘನಾ ರಾಜ್]
'ಫ್ಲೈ' ಚಿತ್ರದ ಮೂಲಕ ನಾಯಕ ನಟನಾಗಿ ಗುರುತಿಸಿಕೊಂಡಿರುವ ಡಿಂಗ್ರಿ ನಾಗರಾಜ್ ಅವರ ಮಗ ರಾಜ್ ವರ್ಧನ್, 'ನೂರೊಂದು ನೆನಪು' ಚಿತ್ರದ ಮತ್ತೊಬ್ಬ ನಾಯಕ. ಚಿತ್ರದಲ್ಲಿ ರಾಜ್ ವರ್ಧನ್ ಗೆ ಸುಶ್ಮಿತಾ ಜೋಶಿ ಅರ್ಚನಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಅಂದ್ಹಾಗೆ, ಈ ಚಿತ್ರಕ್ಕೆ ಕುಮಾರೇಶ್ ಎಂಬುವರು ಆಕ್ಟನ್ ಕಟ್ ಹೇಳುತ್ತಿದ್ದು, ಇದು ಇವರಿಗೆ ಚೊಚ್ಚಲ ಚಿತ್ರ. ಬೆಳಗಾವಿ ಮೂಲದ ಸೂರಜ್ ದೇಸಾಯಿ, ಮನೀಶ್ ದೇಸಾಯಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಗಗನ್ ಬದೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ.