Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಭಾರತ-ಪಾಕ್' ಗಡಿಭಾಗದಲ್ಲಿ ಕನ್ನಡ ಚಿತ್ರದ ಶೂಟಿಂಗ್
ಕೇವಲ ಪ್ರಿ-ಪ್ರೊಡಕ್ಷನ್ ಮೇಕಿಂಗ್ ಮೂಲಕವೇ ಕನ್ನಡ ಚಿತ್ರರಂಗದಲ್ಲಿ ಹೊಸ ಭರವಸೆ ಮೂಡಿಸಿರುವ 'ಪಿರಂಗಿಪುರ' ಈಗ ಮತ್ತೊಂದು ವಿಷಯಕ್ಕೆ ವಿಶೇಷವೆನಿಸಿಕೊಂಡಿದೆ. ಹೌದು, ಭಾರತ ಮತ್ತು ಪಾಕ್ ಗಡಿಭಾಗದಲ್ಲಿ 'ಪಿರಂಗಿಪುರ' ಚಿತ್ರೀಕರಣ ಮಾಡಲು ಸಜ್ಜಾಗಿದೆ.
ಅಂದ್ಹಾಗೆ, ಇದೊಂದು ಜರ್ನಿ ಸಿನಿಮಾ ಆಗಿರುವುದರಿಂದ ಬೆಂಗಳೂರಿನಿಂದ ರಾಜಸ್ಥಾನದವರೆಗೂ ಕಥೆ ಸಾಗಲಿದೆಯಂತೆ. ರಾಜಸ್ಥಾನದಲ್ಲಿ ಚಿತ್ರಕ್ಕಾಗಿ ಭರ್ಜರಿ ಸೆಟ್ ನಿರ್ಮಾಣ ಮಾಡಲಿದ್ದು, ಈ ಜಾಗ ಪಾಕಿಸ್ತಾನದಿಂದ 40 ಕಿಲೋ ಮೀಟರ್ ದೂರದಲ್ಲಿದೆಯಂತೆ.['ಬಾಹುಬಲಿ'ಯಂತೆ ಮೇಕಿಂಗ್ ಮಾಡುತ್ತಿದೆ ಕನ್ನಡದ ಈ ಚಿತ್ರ!]
'ಪಿರಂಗಿಪುರ' ಒಂದು ಕಾಲ್ಪನಿಕ ಊರಾಗಿದ್ದು, ಇದಕ್ಕಾಗಿ ರಾಜಸ್ಥಾನದಲ್ಲಿ ಒಂದು ಗ್ರಾಮವನ್ನೇ ಮರು ಸೃಷ್ಟಿಸುವ ಯೋಚನೆ ಚಿತ್ರತಂಡಕ್ಕಿದೆ. ತಮಿಳಿನ ಖ್ಯಾತ ಕಲಾ ನಿರ್ದೇಶ ಬಾಲಚಂದರ್ ಅವರಿಗೆ ಪಿರಂಗಿಪುರ' ಸೃಷ್ಟಿಸುವ ಜವಾಬ್ದಾರಿಯನ್ನು ನೀಡಲಾಗಿದ್ದು, ಈಗಾಗಲೇ ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ.[ಚಿತ್ರದಲ್ಲಿರುವವರು ಯಾರು ಅಂತ ಬೇಗನೇ ಹೇಳಿ...]
ಜನಾರ್ದನ್ ಈ ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದು, ಕನ್ನಡ ಮತ್ತು ತಮಿಳಿನಲ್ಲಿ ಚಿತ್ರೀಕರಣ ಮಾಡಲಿದ್ದಾರಂತೆ. ಇದಕ್ಕಾಗಿ ಸುಮಾರು 2 ವರ್ಷಗಳ ಕಾಲ ತಯಾರಿ ಮಾಡಿಕೊಳ್ಳಲಾಗಿದೆಯಂತೆ. ಶ್ಯಾಮ್ ಎಲ್. ರಾಜ್ ಸಂಗೀತ ನೀಡಿದರೆ, ಅದ್ವೈತ ಗುರುಮೂರ್ತಿ ಛಾಯಾಗ್ರಹಣವಿದೆ. ದಿನೇಶ್ ಸುಬ್ಬರಾಯನ್ ಸಾಹಸ ಚಿತ್ರಕ್ಕಿದೆ.
ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ 'ಪಿರಂಗಿಪುರ'ದಲ್ಲಿ ನಾಯಕನಾಗಿದ್ದು, ವಿಭಿನ್ನ ಪಾತ್ರಗಳಲ್ಲಿ ಮಿಂಚಲಿದ್ದಾರೆ. ಯುವಕನಿಂದ ಮುದುಕನವರೆಗೆ ಮೂರು ಬಗೆಯ ಗೆಟಪ್ಗಳಲ್ಲಿ ವಿಜಯ್ ಬಣ್ಣ ಹಚ್ಚಲಿದ್ದಾರಂತೆ. ಇದು ರಾಜಾರಾಮ್ ಎಂಬ ವ್ಯಕ್ತಿಯ ಬದುಕಿನ ಏರಿಳಿತಗಳನ್ನು ಮನೋ ಸೈದ್ಧಾಂತಿಕ ರೀತಿಯಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಲಾಗುತ್ತಿದೆಯಂತೆ.