Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಿರ್ದೇಶಕ ಕೆಎಸ್ಎಲ್ ಸ್ವಾಮಿ ಆರೋಗ್ಯ ಸ್ಥಿರ
ಕನ್ನಡ ಚಿತ್ರರಂಗದ ಹಿರಿಯ ಚೇತನ ಕೆಎಸ್ಎಲ್ ಸ್ವಾಮಿ(ರವಿ) ಅವರ ಆರೋಗ್ಯದಲ್ಲಿ ಏರು ಪೇರು ಕಂಡುಬಂದಿದೆ. ಶ್ವಾಸಕೋಶದ ಸೋಂಕು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಯಶವಂತಪುರ ಸಮೀಪದ ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆ.ಎಸ್.ಎಲ್ ಸ್ವಾಮಿ ಅವರ ಆರೋಗ್ಯ ಕಳೆದ ಒಂದು ವಾರದಿಂದ ಕೈಕೊಟ್ಟಿತ್ತು. ರವಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.[ಕೆಎಸ್ ಎಲ್ ಸ್ವಾಮಿ ಧಾರಾವಾಹಿ ಶ್ರೀ ಶಂಕರ ದಿಗ್ವಿಜಯ]
ಗಾಂಧಿನಗರ, ಭಾಗ್ಯಜ್ಯೋತಿ, ಮಲಯ ಮಾರುತ ಸೇರಿದಂತೆ 35 ಕ್ಕೂ ಅಧಿಕ ಚಿತ್ರಗಳನ್ನು ರವಿ ನಿರ್ದೇಶನ ಮಾಡಿದ್ದಾರೆ. ರವಿ ನಿರ್ದೇಶನದ ಜಂಬೂ ಸವಾರಿ ಮಕ್ಕಳ ಸಿನಿಮಾಕ್ಕೆ ಸ್ವರ್ಣ ಕಮಲ ಪ್ರಶಸ್ತಿ ಸಿಕ್ಕದೆ. ಪುಟ್ಟಣ್ಣ ಕಣಗಾಲ್ ಜೊತೆಯೂ ಅವರು ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಸ್ವಾಮಿ ಕಥೆಗಾರ, ನಟ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ.
ಕಿರುತೆರೆಯಲ್ಲೂ ಕಾಣಿಸಿಕೊಂಡಿದ್ದ ಸ್ವಾಮಿ ಅವರ ನಟನೆಗೆ ಮಾರು ಹೋಗದವರಿಲ್ಲ. ಮೇರು ನಿರ್ದೇಶಕ ಜಿ.ವಿ.ಅಯ್ಯರ್ ಮತ್ತು ಎಂ.ಆರ್.ವಿಠಲ್ ಅವರ ಬಳಿ ಕೆಲಸ ಕಲಿತಿದ್ದ ಸ್ವಾಮಿ 1966ರಲ್ಲಿ 'ತೂಗುದೀಪ' ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು.