Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ್ ಶ್ರಾವಣಿ ಸುಬ್ರಹ್ಮಣ್ಯ ತೆಲುಗಿಗೆ ರೀಮೇಕ್
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಅಮೂಲ್ಯ ಜೋಡಿಯ 'ಶ್ರಾವಣಿ ಸುಬ್ರಹ್ಮಣ್ಯ' ಚಿತ್ರಕ್ಕೆ ಎಲ್ಲೆಡೆಯಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ಈಗಾಗಲೆ ರಾಜ್ಯದಾದ್ಯಂತ 15 ದಿನಗಳನ್ನೂ ಪೂರೈಸಿದೆ. ಈ ನಡುವೆ ತೆಲುಗು ರೀಮೇಕ್ ಗೆ ಆಫರ್ ಕೂಡ ಬಂದಿದೆ.
ಮೂಲ ಚಿತ್ರವನ್ನು ನಿರ್ದೇಶಿರುವ ಮಂಜು ಸ್ವರಾಜ್ ಅವರೇ ತೆಲುಗು ಚಿತ್ರಕ್ಕೂ ಆಕ್ಷನ್ ಕಟ್ ಹೇಳಲಿರುವುದು ವಿಶೇಷ. ಈ ಮೂಲಕ ಮಂಜು ಸ್ವರಾಜ್ ತೆಲುಗು ಚಿತ್ರರಂಗಕ್ಕೆ ಅಡಿಯಿಡುತ್ತಿದ್ದಾರೆ. ತೆಲುಗು ಶ್ರಾವಣಿ ಸುಬ್ರಹ್ಮಣ್ಯ ಚಿತ್ರದ ರೀಮೇಕ್ ರೈಟ್ಸ್ ಶ್ರೀಧರ್ ಲಗಡಿಪಟಿ ಪಡೆದಿದ್ದಾರೆ. [ಶ್ರಾವಣಿ ಸುಬ್ರಹ್ಮಣ್ಯ ಚಿತ್ರವಿಮರ್ಶೆ]
ಈ ಚಿತ್ರಕ್ಕೆ ವಿ ಹರಿಕೃಷ್ಣ ಅವರ ಸಂಗೀತವಿದ್ದು ಹಾಡುಗಳಿಗೂ ಗಣೇಶ್ ಅಭಿಮಾನಿಗಳು ಮನಸೋತಿದ್ದಾರೆ. ಈ ಹಿಂದೆ ತೆಲುಗಿನಲ್ಲಿ ಶ್ರಾವಣಿ ಸುಬ್ರಹ್ಮಣ್ಯ ಎಂಬ ಹೆಸರಿನ ಚಿತ್ರ ಬಿಡುಗಡೆಯಾಗಿತ್ತು. ಈಗ ಚಿತ್ರಕ್ಕೆ ಇನ್ನೇನು ಹೆಸರಿಡುತ್ತಾರೋ ನೋಡಬೇಕು.
ಶ್ರಾವಣಿ ಸುಬ್ರಹ್ಮಣ್ಯ ಚಿತ್ರ ಸಾದಾಸೀದಾ ಲವ್ ಸ್ಟೋರಿಯಾದರೂ ಡಿಫರೆಂಟ್ ಆಗಿ ಹೇಳುವ ಪ್ರಯತ್ನ ಮಾಡಲಾಗಿದೆ. ಬಹುಶಃ ಇದೇ ತೆಲುಗು ಚಿತ್ರೋದ್ಯಮವನ್ನು ಸೆಳೆದಿರಬೇಕು. ತೆಲುಗು ಶ್ರಾವಣಿ ಸುಬ್ರಹ್ಮಣ್ಯ ಚಿತ್ರದ ಉಳಿದ ವಿವರಳಿಗೆ ನಿರೀಕ್ಷಿಸಲಾಗಿದೆ. (ಏಜೆನ್ಸೀಸ್)