Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಠಾರಿವೀರ ವಾರಾಂತ್ಯದ ಗಳಿಕೆ; ನೋಡಿ ಆನಂದಿಸಿ
ಸದ್ಯಕ್ಕೆ ವಿವಾದಾತ್ಮಕ ಚಿತ್ರವೆಂಬ ಹಣೆಪಟ್ಟಿ ಹೊತ್ತಿರುವ ಕಠಾರಿವೀರ ಸುರಸುಂದರಾಂಗಿ ಪ್ರೇಕ್ಷಕರಿಂದ ಗಳಿಸಿರುವ ಮಿಶ್ರ ಪ್ರತಿಕ್ರಿಯೆ ನಡುವೆಯೂ ಉತ್ತಮ ಬಾಕ್ಸ್ ಆಫೀಸ್ ಗಳಿಕೆ ದಾಖಲಿಸಿದೆ. ಮೊದಲ ವಾರದಲ್ಲಿ ಸುಮಾರು 5.7 ಕೋಟಿ ರು. ಗಳಿಸಿ ಎಲ್ಲರ ಹುಬ್ಬೇರಿಸಿದೆ. ಕಳೆದ ವಾರ, ಮೇ 10ಕ್ಕೆ ಬಿಡುಗಡೆಯಾಗಿರುವ ಕಠಾರಿವೀರ '3ಡಿ' ಚಿತ್ರಕ್ಕೆ ಇಲ್ಲಿಯವರೆಗಿನ ಪ್ರೇಕ್ಷಕರ ಪ್ರತಿಕ್ರಿಯೆ ಉತ್ತಮವಾಗಿದೆ.
12 ಕೋಟಿ ರು ವೆಚ್ಚದಲ್ಲಿ ಈ ಚಿತ್ರವನ್ನು ನಿರ್ಮಿಸಿರುವವರು ಈ ಮೊದಲು ರಕ್ತಕಣ್ಣೀರು ನಿರ್ಮಿಸಿದ್ದ ನಿರ್ಮಾಪಕರ ಸಂಘದ ಅಧ್ಯಕ್ಷರೂ ಆಗಿರುವ ಮುನಿರತ್ನ. ಬರೋಬ್ಬರಿ 12 ಕೋಟಿ ರು ಖರ್ಚು ಮಾಡಿ ಸಿನಿಮಾ ಮಾಡಿದ ಅವರು ಸಹಜವಾಗಿಯೇ ಲಾಭದ ನಿರೀಕ್ಷೆಯಲ್ಲಿದ್ದಾರೆ. ಇದೇ ರೀತಿ ಗಳಿಕೆಯಿದ್ದರೆ ಎರಡನೇ ವಾರಾಂತ್ಯದ ಹೊತ್ತಿಗೆ ಹಾಕಿದ ಬಂಡವಾಳ ವಾಪಸ್ ಆಗಿ ಮುನಿರತ್ನ ಮುಖದಲ್ಲಿ ಮಂದಹಾಸ ಖಾತ್ರಿ.
ಬಿಡುಗಡೆಗೆ ಸಿದ್ಧವಾದಾಗಿನಿಂದಲೂ ಒಂದಲ್ಲ ಒಂದು ವಿವಾದಕ್ಕೆ ಅಂಟಿಕೊಂಡೇ ಇರುವ ಈ ಚಿತ್ರ ಬಿಡುಗಡೆಯ ನಂತರವಂತೂ ಇನ್ನೂ ವಿವಾದಕ್ಕೆ ತುತ್ತಾಗಿದೆ. ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿ ಚಿತ್ರದಲ್ಲಿನ ಹಲವು ದೃಶ್ಯಗಳಿಗೆ ಕತ್ತರಿ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆಗೂ ಸಿಲುಕಿರುವ ಕಠಾರಿವೀರದ ಮುಂದಿನ ಪ್ರಯಾಣ ಹೇಗೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. (ಒನ್ ಇಂಡಿಯಾ ಕನ್ನಡ)