Don't Miss!
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಗೀತ ನಿರ್ದೇಶಕ ಗುರುಕಿರಣ್ಗೆ ಕೆಂಪೇಗೌಡ ಪ್ರಶಸ್ತಿ
ಚಿತ್ರರಂಗಕ್ಕೆ ಹಲವಾರು ಖ್ಯಾತನಾಮರನ್ನು ಕೊಟ್ಟಿರುವ ತುಳುನಾಡಿನ ಓರ್ವ ಪ್ರಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ 2017 ನೇ ಸಾಲಿನ ಅತ್ಯಂತ ಪ್ರತಿಷ್ಠಿತ 'ಕೆಂಪೇಗೌಡ ಪ್ರಶಸ್ತಿ' ಪ್ರದಾನ ಮಾಡಲಾಯಿತು. ಈ ಮೂಲಕ ಅವರ ಪ್ರತಿಭೆಗೆ ಹೊಸದೊಂದು ಮನ್ನಣೆ ಸಿಕ್ಕಂತಾಗಿದೆ. ಈಗಾಗಲೇ ಮೂರು ಬಾರಿ ಫಿಲಂಫೇರ್ ಪ್ರಶಸ್ತಿಗೆ ಭಾಜನರಾಗಿ ರಾಜ್ಯ ಪ್ರಶಸ್ತಿಯನ್ನೂ ಗಳಿಸಿದ್ದಾರೆ. ಈಗ ಕೆಂಪೇಗೌಡ ಪ್ರಶಸ್ತಿ ಸಂದಿರುವುದು ಆ ಸಾಲಿಗೆ ಮತ್ತೊಂದು ಸೇರ್ಪಡೆ.
ಅತ್ಯಂತ ಯಶಸ್ವಿ ಸಂಗೀತ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ಗುರುಕಿರಣ್ ರವರು ಹಲವಾರು ಟಿವಿ ರಿಯಾಲಿಟಿ ಶೋಗಳಲ್ಲೂ ತೀರ್ಪುಗಾರರಾಗಿದ್ದರು. ಒಂದು ಹಂತದಲ್ಲಿ ನಟನಾ ಕ್ಷೇತ್ರದಲ್ಲೂ ಮಿಂಚಿರುವ ಗುರುಕಿರಣ್ ತುಳುನಾಡಿನಿಂದಲೇ ಬೆಳೆದು ಬಂದಿರುವ ಪ್ರತಿಭೆ. ಇವರು ಈಗ ಪ್ರತ್ಯೇಕ ಸಂಗೀತ ತಂಡವೊಂದನ್ನು ಹೊಂದಿದ್ದು, ಅದಕ್ಕೆ ರಾಜ್ಯವ್ಯಾಪಿಯಾಗಿ ಭಾರೀ ಬೇಡಿಕೆಯಿದೆ. ಗುರುಕಿರಣ್ ರವರ ಸಂಗೀತ ಬ್ಯಾಂಡ್ ಗೆ ಒಪ್ಪಿಕೊಳ್ಳಲು ಸಾಧ್ಯವಿಲ್ಲದಷ್ಟು ಅವಕಾಶಗಳು ಬರುತ್ತಿರುವುದು ಇವರಿಗಿರುವ ಬೇಡಿಕೆ, ಅಭಿಮಾನಿ ವರ್ಗಕ್ಕೆ ಒಂದು ಉತ್ತಮ ಸಾಕ್ಷಿ.
ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವಾರು ಭಾಷೆಗಳ ಸಿನಿಮಾಗಳಿಗೆ ಸಂಗೀತ ನಿರ್ದೇಶನ ನೀಡಿರುವ ಇವರು ಇನ್ನೂ ಕುಡ್ಲದ ಹುಡುಗನಾಗಿ ಸರಳತೆಯನ್ನು ಮೈಗೂಡಿಸಿಕೊಂಡಿದ್ದಾರೆ. ಮಂಗಳೂರಿಗೆ ಬಂದಾಗ ತನ್ನ ಹಳೆಯ ಗೆಳೆಯರನ್ನು ಭೇಟಿಯಾಗದೆ ಹೋಗುವುದೇ ಇಲ್ಲ. ಸಮಯ ಸಿಕ್ಕಾಗಲೆಲ್ಲ ಅವರೊಂದಿಗೆ ದೂರವಾಣಿ ಸಂಪರ್ಕದಲ್ಲೂ ಇರುವ ಇವರು ತುಳುನಾಡಿನ ಬಗ್ಗೆ ಅಪಾರ ಒಲವು, ಅಭಿಮಾನ, ಪ್ರೀತಿ ಹೊಂದಿರುವ ಕಲಾವಿದರು.
ಕೆಂಪೇಗೌಡ ಪ್ರಶಸ್ತಿಯಿಂದ ಅಲಂಕೃತವಾಗಿರುವ ಅವರಿಗೆ ನಾವೆಲ್ಲರೂ ಶುಭ ಕೋರುವುದರೊಂದಿಗೆ ಸಿನಿಮಾ ರಂಗದಲ್ಲಿ ಇನ್ನಷ್ಟು ಸಾಧನೆ ಮಾಡಲಿ. ರಾಷ್ಟ್ರಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳು ಗುರು ಕಿರಣ್ ರವರಿಗೆ ಲಭಿಸಲಿ ಎಂದು ಹಾರೈಸೋಣ.