Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೆಂಡಸಂಪಿಗೆ' ನಾಯಕನ ಹೊಸ ಚಿತ್ರಕ್ಕೆ ಡೈರೆಕ್ಟರ್ ಯಾರು ಗೊತ್ತಾ?
'ಕೆಂಡಸಂಪಿಗೆ' ಚಿತ್ರದ ನಂತರ ನಾಯಕ ನಟ ವಿಕ್ಕಿ ಎಲ್ಲೂ ಕಾಣ್ತನೇ ಇಲ್ವಲ್ಲ ಅಂತ ಯೋಚನೆ ಮಾಡ್ತಿದ್ದವರಿಗೆ ಇಲ್ಲೊಂದು ಗುಡ್ ನ್ಯೂಸ್ ಸಿಕ್ಕಿದೆ.
ಹೌದು, 'ಕೆಂಡಸಂಪಿಗೆ' ನಾಯಕ ವಿಕ್ಕಿ ಸದ್ದಿಲ್ಲದೆ ಹೊಸ ಪ್ರಾಜೆಕ್ಟ್ ವೊಂದನ್ನ ಶುರು ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಮಾತುಕತೆ ಕೂಡ ಮುಗಿಸಿದ್ದು, ಕನ್ನಡದ ಯಶಸ್ವಿ ನಿರ್ದೇಶಕನ ಸಿನಿಮಾವನ್ನ ಒಪ್ಪಿಕೊಂಡಿದ್ದಾರಂತೆ.['ಕೆಂಡಸಂಪಿಗೆ' ವಿಮರ್ಶೆ - ಸೂರಿಯ ಹೊಸ 'ದುನಿಯಾ']
ವಿಕ್ಕಿ ಅಭಿನಯಿಸಲಿರುವ ಹೊಸ ಸಿನಿಮಾವನ್ನ ನಿರ್ದೇಶನ ಮಾಡಲಿರುವುದು 'ಅಲೆಮಾರಿ' ಖ್ಯಾತಿಯ ನಿರ್ದೇಶಕ ಸಂತು. ಸದ್ಯ, 'ಡವ್' ಚಿತ್ರದ ನಂತರ ಬೇರೆ ಪ್ರಾಜೆಕ್ಟ್ ಗಳಲ್ಲಿ ತೊಡಗಿಸಿಕೊಂಡಿರುವ ಸಂತು, ರೋರಿಂಗ್ ಸ್ಟಾರ್ ಶ್ರೀಮುರುಳಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗಿತ್ತು. ಆದ್ರೆ, ಅದು ಇನ್ನು ಮಾತುಕತೆಯ ಹಂತದಲ್ಲಿದ್ದು, ಈ ಮಧ್ಯೆ 'ಕೆಂಡಸಂಪಿಗೆ' ನಾಯಕ ವಿಕ್ಕಿ ಜೊತೆ ಸಿನಿಮಾ ಶುರು ಮಾಡುವ ತಯಾರಿ ನಡೆಸಿದ್ದಾರಂತೆ.[ದುನಿಯಾ ಸೂರಿ 'ಕೆಂಡಸಂಪಿಗೆ'ಗೆ ಸಿಕ್ತಾ ವಿಮರ್ಶಕರ ಜೈಕಾರ?]
ದುನಿಯಾ ಸೂರಿ ನಿರ್ದೇಶನ ಮಾಡಿದ್ದ 'ಕೆಂಡಸಂಪಿಗೆ', ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡಿದ್ದಲ್ಲದೆ, ಶತದಿನ ಪೂರೈಸಿತ್ತು. ಅದಾದ ನಂತರ ಚಿತ್ರದ ನಟಿ ಮಾನ್ವಿತ ಹರೀಶ್ ದೊಡ್ಡ ಸ್ಟಾರ್ ಸಿನಿಮಾಗಳಲ್ಲಿ ಬ್ಯುಸಿಯಾದ್ರು. ಆದ್ರೆ, ವಿಕ್ಕಿ ಯಾಕೋ ಸೈಲಾಂಟ್ ಆಗಿದ್ರು. ಇದೀಗ, ಒಂದು ವಿರಾಮದ ನಂತರ ನಟ ವಿಕ್ಕಿ ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಬ್ಯುಸಿಯಾಗುತ್ತಿದ್ದಾರೆ.
'ಅಲೆಮಾರಿ' ಸಂತು ಹಾಗೂ ಕೆಂಡಸಂಪಿಗೆ ನಟ ವಿಕ್ಕಿ ಕಾಂಬಿನೇಷನ್ ನ ಚಿತ್ರದ ಕಥೆ ಏನು? ಟೈಟಲ್ ಏನೂ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಸದ್ಯ, ಮಾತುಕತೆ ಮುಗಿಸಿರುವ ಚಿತ್ರತಂಡ ಆದಷ್ಟೂ ಬೇಗ ಅಧೀಕೃತವಾಗಿ ಘೋಷಣೆ ಮಾಡಲಿದೆ.