Don't Miss!
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿತರಕರಿಗೆ 'ರನ್ನ' ನಿರ್ಮಾಪಕ ಚಂದ್ರಶೇಖರ್ ಗುನ್ನ
ಸೆಟ್ಟೇರಿದಾಗಿನಿಂದಲೂ ಒಂದಲ್ಲಾ ಒಂದು ವಿವಾದದಿಂದ 'ರನ್ನ' ಚಿತ್ರ ಸದ್ದು-ಸುದ್ದಿ ಮಾಡುತ್ತಿದೆ. ಈಗ 'ರನ್ನ' ಸಿನಿಮಾ ರಿಲೀಸ್ ಆಗಿ ನಾಲ್ಕು ದಿನಗಳು ಕಳೆದಿವೆ. ಈಗಲೂ 'ರನ್ನ' ಹೊಸ ವಿವಾದದಿಂದ ಸೌಂಡ್ ಮಾಡ್ತಿದೆ.
ವಿತರಣೆ ಹಣವನ್ನ ನೀಡದ ಕಾರಣಕ್ಕೆ 'ರನ್ನ' ಚಿತ್ರ ನಿರ್ಮಾಪಕ ಚಂದ್ರಶೇಖರ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿದ್ದಾರೆ. ವಿತರಣಾ ಹಕ್ಕು ಪಡೆದಿದ್ದ ಗೋಕುಲ್ ಫಿಲ್ಮ್ಸ್ ಮಾಲೀಕ ಬಲರಾಮ್ ವಿರುದ್ಧ ನಿರ್ಮಾಪಕ ಚಂದ್ರಶೇಖರ್ ದೂರು ನೀಡಿದ್ದಾರೆ. [ಚಿತ್ರ ವಿಮರ್ಶೆ; ಕಳೆಗುಂದಿಲ್ಲ ಸುದೀಪ್ 'ರನ್ನ'ನ ರಂಗು]
ವಾಣಿಜ್ಯ ಮಂಡಳಿ ಅಧ್ಯಕ್ಷ ಥಾಮಸ್ ಡಿಸೋಜ ಮತ್ತು ಕಾರ್ಯದರ್ಶಿ ಬಾಮಾ ಹರೀಶ್ ನೇತೃತ್ವದಲ್ಲಿ ಸಭೆ ನಡೆದಿದ್ದು, ನಿರ್ಮಾಪಕರಿಗೆ ಹಣ ನೀಡುವಂತೆ ವಿತರಕ ಬಲರಾಮ್ ಅವರಿಗೆ ಸೂಚನೆ ನೀಡಲಾಗಿದೆ. ['ರನ್ನ'ನ ಅಬ್ಬರಕ್ಕೆ ಬಾಕ್ಸ್ ಆಫೀಸ್ ಚಿಂದಿ ಚಿತ್ರಾನ್ನ!]
ಮೂರು ದಿನಗಳಲ್ಲಿ ಕಿಚ್ಚ ಸುದೀಪ್-ರಚಿತಾ ರಾಮ್ ಅಭಿನಯದ 'ರನ್ನ' ಸುಮಾರು 10 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು ಅನ್ನುವ ಸುದ್ದಿ ಗಾಂಧಿನಗರದಿಂದ ಹೊರಬಂದಿತ್ತು.