Don't Miss!
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ಸಂಗೊಳ್ಳಿ ರಾಯಣ್ಣ' ಬಗ್ಗೆ ಬಾಯ್ಬಿಟ್ಟ ಸುದೀಪ್
'ಸಂಗೊಳ್ಳಿ ರಾಯಣ್ಣ' ಚಿತ್ರ ನೋಡಿದ ನಂತರ ಕಿರುತೆರೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಕಿಚ್ಚ ಸುದೀಪ್, ತಮ್ಮ ಮಾತಿನಲ್ಲಿ 'ಸಂಗೊಳ್ಳಿ ರಾಯಣ್ಣ' ಚಿತ್ರದ ಬಗ್ಗೆ ಬಹಳಷ್ಟು ಹೊಳಿಕೆಯನ್ನು ನೀಡಿದರು. "ದರ್ಶನ್ ಒಬ್ಬ ಮಹಾ ಅದ್ಭುತ ನಟ. ಈ ಚಿತ್ರದಲ್ಲಿ ದರ್ಶನ್ ಪ್ರತಿಭೆಯು ಎಲ್ಲಾ ರೀತಿಯಲ್ಲೂ ಅನಾವರಣವಾಗಿದೆ. ಚಿತ್ರದಲ್ಲಿ ಕುದುರಿ ಸವಾರಿ ಮಾಡಿರುವ ದರ್ಶನ್ ಯುದ್ಧ ಸನ್ನಿವೇಶಗಳಲ್ಲಿ ರೋಮಾಂಚನಗೊಳಿಸುತ್ತಾರೆ.
ಮುಂದುವರಿದ ಸುದೀಪ್, "ಈ ಚಿತ್ರದಲ್ಲಿ ಅತ್ಯದ್ಭುತವಾಗಿ ನಟಿಸಿದ ದರ್ಶನ್ ಅವರಿಗೆ ಹ್ಯಾಟ್ಸ್ ಆಫ್" ಎಂದು ಬೆನ್ನುತಟ್ಟಿದ್ದಾರೆ. ಇದೇ ರೀತಿ ಇನ್ನೊಬ್ಬ ನಟ ದುನಿಯಾ ವಿಜಯ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. "ಈ ಚಿತ್ರದಲ್ಲಿ ದರ್ಶನ್ ಎಲ್ಲರೂ ಮೆಚ್ಚುವಂತೆ ನಟಿಸಿದ್ದಾರೆ. ತಮ್ಮ ವಿಶಿಷ್ಟ ಶೈಲಿಯಿಂದ ಹೆಸರು ಮಾಡಿರುವ ನಿರ್ದೇಶಕ ನಾಗಣ್ಣ, ಈ ಚಿತ್ರವನ್ನು ತುಂಬಾ ಚೆನ್ನಾಗಿ ನಿರ್ದೇಶಿಸಿದ್ದಾರೆ.
ನಿರ್ದೇಶಕ ನಾಗಣ್ಣ ಅವರ ಮೇಕಿಂಗ್ ಹಾಗೂ ಬದ್ಧತೆಯ ಬಗ್ಗೆಯೂ ಕಿಚ್ಚ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಸಾಕಷ್ಟು ಚಿತ್ರಗಳನ್ನು ಒಪ್ಪಿ ಮಾಡಬಹುದಾಗಿದ್ದ ನಾಗಣ್ಣ, ಈ ಚಿತ್ರಕ್ಕಾಗಿ ಬೇರೆ ಯಾವುದೇ ಪ್ರಾಜೆಕ್ಟ್ಗಳನ್ನು ಒಪ್ಪಿಕೊಂಡಿಲ್ಲ. ಈ ಚಿತ್ರದಲ್ಲಿ ಒಬ್ಬ ನಿರ್ದೇಶಕನಾಗಿ ಅವರು ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ನಿಜಕ್ಕೂ ಒಂದು ದೊಡ್ಡ ಸವಾಲಿನ ಕೆಲಸವನ್ನು ಅವರು ಸಮರ್ಥವಾಗಿ ನಿಭಾಯಿಸಿದ್ದಾರೆ. ಖಂಡಿತಾ ಈ ಚಿತ್ರ ಸೂಪರ್ ಹಿಟ್ ದಾಖಲಿಸಲಿದೆ" ಎಂದಿದ್ದಾರೆ ಸುದೀಪ್. ಮುಂದಿನ ಪುಟ ನೋಡಿ...