Don't Miss!
- News ಬಿವೈ ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದೇನು?
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಗೆ ಆಕ್ಷ ಕಟ್ ಹೇಳಲಿದ್ದಾರೆ ಲಿಂಗಾ ಡೈರೆಕ್ಟರ್
ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದಂತಹ ಛಾಪು ಮೂಡಿಸಿರುವ ನಿರ್ದೇಶಕ ಕೆ.ಎಸ್.ರವಿಕುಮಾರ್. ತಮ್ಮ ಇಪ್ಪತ್ತೈದು ವರ್ಷಗಳ ವೃತ್ತಿ ಬದುಕಿನಲ್ಲಿ ಅವರು ಹಲವಾರು ಹಿಟ್ ಚಿತ್ರಗಳನ್ನು ಕೊಟ್ಟಿದ್ದಾರೆ. ಕಾಮಿಡಿ, ಡ್ರಾಮಾ, ಆಕ್ಷನ್ ಚಿತ್ರಗಳಿಗೆ ಹೆಸರಾದವರು ರವಿ.
ಅವರ ನಿರ್ದೇಶನದಲ್ಲಿ ಮೂಡಿಬಂದ 'ದಶಾವತಾರಂ' (2008) ಚಿತ್ರ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಗಳಿಸಿದ ಚಿತ್ರಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗಿನ ಅವರ 'ಲಿಂಗಾ' ಚಿತ್ರವೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೀಗ ಅವರು ಕಿಚ್ಚ ಸುದೀಪ್ ಗೆ ಆಕ್ಷನ್ ಕಟ್ ಹೇಳಲು ಮುಂದಾಗಿದ್ದಾರೆ. [ಎಲ್ಲರ ಬಾಯಿಗೆ ಗೋದ್ರೇಜ್ ಬೀಗ ಹಾಕಿದ ದರ್ಶನ್, ಸುದೀಪ್]
ಸದ್ಯಕ್ಕೆ ಸುದೀಪ್ ಅವರು 'ರನ್ನ' ಚಿತ್ರದಲ್ಲಿ ಬಿಜಿಯಾಗಿದ್ದಾರೆ. ಜೊತೆಜೊತೆಗೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಸೇರಿದಂತೆ ಹಲವಾರು ಪ್ರಾಜೆಕ್ಟ್ ಗಳಲ್ಲಿ ತೊಡಗಿಕೊಂಡಿದ್ದಾರೆ. ತಮಿಳು ನಟ ವಿಜಯ್ ಜೊತೆಗಿನ ಚಿತ್ರದಲ್ಲೂ ಪ್ರಮುಖ ಪಾತ್ರ ಪೋಷಿಸುತ್ತಿದ್ದಾರೆ. ರವಿಕುಮಾರ್ ನಿರ್ದೇಶನದ ಚಿತ್ರ ಎಂದರೆ ಸುದೀಪ್ ಅಭಿಮಾನಿಗಳಿಗೆ ಸಂಭ್ರಮದ ಸಂಗತಿ.