Don't Miss!
- News ಸಿದ್ದರಾಮಯ್ಯರು ಸಿಎಂ ಆದಾಗ ವಿಜೃಂಭಿಸುವ ದೇಶದ್ರೋಹಿಗಳು: ಶೋಭಾ ಕರಂದ್ಲಾಜೆ ಹೇಳಿದ್ದೇನು?
- Finance Zero Shadow Day: ಬೆಂಗಳೂರಿನಲ್ಲಿ ಇಂದು ಪ್ರಕೃತಿಯ ಅಚ್ಚರಿ
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಣ್ಣಲ್ಲಿ ಮಣ್ಣಾದ 'ಮಾಸ್ತಿ ಗುಡಿ' ನಟ ರಾಘವ ಉದಯ್
ನವೆಂಬರ್ 7 ರಂದು (ಸೋಮವಾರ) 'ಮಾಸ್ತಿ ಗುಡಿ' ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ಪಾಲ್ಗೊಂಡು, ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಮುಳುಗಿ, ದುರಂತ ಸಾವಿಗೀಡಾದ ಪ್ರತಿಭಾವಂತ ಕಲಾವಿದ ರಾಘವ ಉದಯ್ ರವರ ಅಂತ್ಯ ಸಂಸ್ಕಾರ ಇಂದು ಬೆಳಗ್ಗೆ 11.45 ರ ಸುಮಾರಿಗೆ ಬೆಂಗಳೂರಿನ ಬನಶಂಕರಿ ರುದ್ರಭೂಮಿಯಲ್ಲಿ ನೆರವೇರಿತು.
ಕುಟುಂಬಸ್ಥರ ರೋಧನ, ಶೋಕತಪ್ತ ಜನಸ್ತೋಮದ ಮಧ್ಯೆ ಹಿಂದು ಸಂಪ್ರದಾಯದಂತೆ ನಟ ರಾಘವ ಉದಯ್ ಅಂತ್ಯಕ್ರಿಯೆ ನಡೆಯಿತು. [ನಿನ್ನೆ ಉದಯ್ ಶವ, ಇಂದು ಅನಿಲ್ ಶವ ಪತ್ತೆ]
ನೆಚ್ಚಿನ ಅಜ್ಜನ ಸಮಾಧಿಯಲ್ಲೇ ರಾಘವ ಉದಯ್ ಮಣ್ಣಲ್ಲಿ ಮಣ್ಣಾದರು. [ನಿಮಗೆಲ್ಲಾ ಗೊತ್ತಿಲ್ಲದ 'ಮಾಸ್ತಿ ಗುಡಿ' ವಿಲನ್ ಉದಯ್ ಅಸಲಿ ಕಹಾನಿ]
ನೀರುಪಾಲಾಗಿದ್ದ ನಟ ರಾಘವ ಉದಯ್ ರವರ ಮೃತದೇಹ ನಿನ್ನೆ (ಬುಧವಾರ) ಮಧ್ಯಾಹ್ನ ಪತ್ತೆ ಆಗಿತ್ತು. ತಿಪ್ಪಗೊಂಡನಹಳ್ಳಿ ಕೆರೆ ದಡದಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ, ನಿವಾಸಕ್ಕೆ ಉದಯ್ ರವರ ಮೃತದೇಹ ರವಾನೆ ಆಯ್ತು. ['ಮಾಸ್ತಿ ಗುಡಿ' ದುರಂತ ಸಂಭವಿಸಲು ಪ್ರಮುಖ ಕಾರಣ ಇದೇ.!]
ಉದಯ್ ರವರ ಅಂತಿಮ ದರ್ಶನ ಪಡೆಯಲು ಜನಸಾಗರವೇ ಹರಿದುಬಂದಿತ್ತು. ನಟ ಶಿವರಾಜ್ ಕುಮಾರ್, ನಟ ಪುನೀತ್ ರಾಜ್ ಕುಮಾರ್, ದರ್ಶನ್, ರವಿಶಂಕರ್ ಸೇರಿದಂತೆ ಚಿತ್ರರಂಗದ ಅನೇಕರು, ರಾಜಕಾರಣಿಗಳು ರಾಘವ ಉದಯ್ ರವರಿಗೆ ಅಂತಿಮ ನಮನ ಸಲ್ಲಿಸಿದರು. ['ಮಾಸ್ತಿ ಗುಡಿ' ಖಳನಟರ ದುರಂತ ಸಾವು: ದುರ್ಘಟನೆಯ ಸಂಪೂರ್ಣ ವಿವರ]
ಮೆರವಣಿಗೆ ಮೂಲಕ ರಾಘವ ಉದಯ್ ರವರ ಪಾರ್ಥೀವ ಶರೀರ ಬನಶಂಕರಿಯ ನಿವಾಸದಿಂದ ರುದ್ರಭೂಮಿ ತಲುಪಿತು. ಹಿಂದು ಸಂಪ್ರದಾಯದಂತೆ ಪಾರ್ಥೀವ ಶರೀರಕ್ಕೆ ಪೂಜೆ ಪುನಸ್ಕಾರ ನೆರವೇರಿಸಿದ ಬಳಿಕ ಅಂತ್ಯ ಕ್ರಿಯೆ ನಡೆಯಿತು. [ಅನಿಲ್, ಉದಯ್ ಕೊನೆಯ ಮಾತಲ್ಲಿ ಸಾವಿನ ಮುನ್ಸೂಚನೆಯ ಸುಳಿವು.!]