Don't Miss!
- News Rain: ಬರದಿಂದ ತತ್ತರಿಸಿದ ಮಲೆನಾಡು: ಕೊಪ್ಪ ಮೇರುತಿ ಶಿಖರದಲ್ಲಿ ವರುಣನಿಗೆ ಹೋಮ-ಹವನ
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಾಸ್ತಿ ಗುಡಿ' ತಂಡದ ಮೇಲೆ ಹೇರಿದ್ದ ನಿರ್ಬಂಧ ವಾಪಸ್ ಪಡೆದ ಕೆ.ಎಫ್.ಸಿ.ಸಿ
ನವೆಂಬರ್ 7, 2016 ರಂದು ರೋಚಕ ಸಾಹಸ ದೃಶ್ಯವನ್ನು ಚಿತ್ರೀಕರಿಸಲು ಹೋಗಿ, ಅನಿಲ್ ಮತ್ತು ಉದಯ್ ಎಂಬ ಉದಯೋನ್ಮುಖ ಖಳನಟರು ದುರಂತ ಸಾವಿಗೀಡಾದ ದುರ್ಘಟನೆಗೆ ಸಂಬಂಧಪಟ್ಟಂತೆ, 'ಮಾಸ್ತಿ ಗುಡಿ' ಚಿತ್ರತಂಡದ ಮೇಲೆ ಹೇರಿದ್ದ ನಿರ್ಬಂಧವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವಾಪಸ್ ಪಡೆದಿದೆ.
ಈ ಕುರಿತು ನಿನ್ನೆ (ಡಿಸೆಂಬರ್ 30) ಪತ್ರಿಕಾಗೋಷ್ಠಿ ನಡೆಸಿದ ಕೆ.ಎಫ್.ಸಿ.ಸಿ ಅಧ್ಯಕ್ಷ ಸಾ.ರಾ.ಗೋವಿಂದು ''ಮೃತ ನಟರಾದ ಅನಿಲ್ ಮತ್ತು ಉದಯ್ ಕುಟುಂಬಕ್ಕೆ ಪರಿಹಾರ ನೀಡುವುದು ಸೇರಿದಂತೆ ಕೆಲ ಷರತ್ತುಗಳಿಗೆ 'ಮಾಸ್ತಿ ಗುಡಿ' ಚಿತ್ರತಂಡ ಒಪ್ಪಿಗೆ ನೀಡಿದೆ. ಹೀಗಾಗಿ ನಿರ್ದೇಶಕ ನಾಗಶೇಖರ್, ನಟ ದುನಿಯಾ ವಿಜಯ್ ಹಾಗೂ ಸಾಹಸ ನಿರ್ದೇಶಕ ರವಿವರ್ಮ ಅವರ ಮೇಲೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ'' ಎಂದರು.[ದುನಿಯಾ ವಿಜಯ್, ನಾಗಶೇಖರ್, ರವಿವರ್ಮಗೆ ತಾತ್ಕಾಲಿಕ ನಿಷೇಧ]
''ಇದು ಆಕಸ್ಮಿಕವಾಗಿ ನಡೆದ ಘಟನೆ. ಇದಕ್ಕಾಗಿ ಎಲ್ಲರ ಕ್ಷಮೆ ಕೋರುತ್ತೇವೆ'' ಎಂದು ನಟ ದುನಿಯಾ ವಿಜಯ್, ಸಾಹಸ ನಿರ್ದೇಶಕ ರವಿವರ್ಮ, ನಿರ್ದೇಶಕ ನಾಗಶೇಖರ್ ಹೇಳಿದರು.
ಅಲ್ಲಿಗೆ, ಇನ್ಮುಂದೆ ತಮ್ಮ ತಮ್ಮ ಕೆಲಸಗಳಲ್ಲಿ ದುನಿಯಾ ವಿಜಯ್, ನಾಗಶೇಖರ್ ಮತ್ತು ರವಿವರ್ಮ ಭಾಗಿಯಾಗಬಹುದು. ಸದ್ಯ ದುನಿಯಾ ವಿಜಯ್ ಕೈಯಲ್ಲಿ 'ಕನಕ' ಸಿನಿಮಾ ಇದೆ.['ಮಾಸ್ತಿ ಗುಡಿ' ದುರಂತ ಸಂಭವಿಸಲು ಪ್ರಮುಖ ಕಾರಣ ಇದೇ.!]
'ಮಾಸ್ತಿ ಗುಡಿ' ದುರಂತ ಪ್ರಕರಣಗಳು ಮುಂದಿನ ದಿನಗಳಲ್ಲಿ ಮರುಕಳಿಸಬಾರದು ಎಂಬ ಕಾರಣಕ್ಕೆ ನಿರ್ದೇಶಕ ನಾಗಶೇಖರ್, ನಟ ದುನಿಯಾ ವಿಜಯ್, ಸಾಹಸ ನಿರ್ದೇಶಕ ರವಿವರ್ಮ ಮೇಲೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತಾತ್ಕಾಲಿಕ ನಿಷೇಧ ಹೇರಿತ್ತು.