Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕ ಸುಂದರ್.ಪಿ.ಗೌಡ ಅಮಾಯಕ ಎಂದ ನಟ ದುನಿಯಾ ವಿಜಯ್.!
ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ನಡೆದ 'ಮಾಸ್ತಿ ಗುಡಿ' ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ನಡೆದ ದುರಂತ ಪ್ರಕರಣದಲ್ಲಿ ನಿರ್ಮಾಪಕ ಸುಂದರ್.ಪಿ.ಗೌಡ ರವರ ತಪ್ಪೇನೂ ಇಲ್ಲ ಅಂತ ನಟ ದುನಿಯಾ ವಿಜಯ್ ಹೇಳಿದ್ದಾರೆ. [ಕಡೆಗೂ ಪೊಲೀಸರ ಮುಂದೆ ಶರಣಾದ ನಾಗಶೇಖರ್, ರವಿವರ್ಮ.!]
ಮಾಗಡಿ ಪೊಲೀಸ್ ಠಾಣೆಯಲ್ಲಿ 'ಮಾಸ್ತಿ ಗುಡಿ' ನಿರ್ದೇಶಕ ನಾಗಶೇಖರ್ ಮತ್ತು ಸಾಹಸ ನಿರ್ದೇಶಕ ರವಿವರ್ಮ ಸರೆಂಡರ್ ಆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದುನಿಯಾ ವಿಜಯ್, ''ನಿರ್ಮಾಪಕ ಸುಂದರ್.ಪಿ.ಗೌಡ ಅಮಾಯಕ'' ಎಂದರು.
ಮಾಧ್ಯಮಗಳ ಮುಂದೆ ದುನಿಯಾ ವಿಜಯ್ ಹೇಳಿದ್ದೇನು.?
''ನಿರ್ಲಕ್ಷ್ಯದಲ್ಲಿ ಈ ದುರ್ಘಟನೆ ನಡೆದಿದೆ. ಸುಂದರ್ ಎ-1 ಆರೋಪಿ ಅಲ್ಲ. ಅವರನ್ನ ಎ-1 ಆರೋಪಿ ಮಾಡಿರುವುದು ಸರಿ ಅಲ್ಲ'' ಅಂತ ಮಾಧ್ಯಮಗಳ ಜೊತೆ ಮಾತನಾಡುವಾಗ ನಟ ದುನಿಯಾ ವಿಜಯ್ ಹೇಳಿದರು. ['ಮಾಸ್ತಿ ಗುಡಿ' ತನಿಖೆ: ದುನಿಯಾ ವಿಜಯ್ ವಿರುದ್ಧ ಸ್ಫೋಟಕ ಮಾಹಿತಿ ಬಯಲು.!]
ಸುಂದರ್.ಪಿ.ಗೌಡ ದುಡ್ಡು ಹಾಕಿದ್ದಾರೆ ಅಷ್ಟೇ.!
''ಸುಂದರ್ ದುಡ್ಡು ತಂದು ಹಾಕಿದ್ದಾರೆ. ಅಷ್ಟು ಬಿಟ್ಟರೆ, ಅವರು ಈ ಘಟನೆಯಲ್ಲಿ ಅಮಾಯಕ'' - ದುನಿಯಾ ವಿಜಯ್ ['ಮಾಸ್ತಿ ಗುಡಿ' ಖಳನಟರ ದುರಂತ ಸಾವು: ದುರ್ಘಟನೆಯ ಸಂಪೂರ್ಣ ವಿವರ]
ಶರಣಾಗಿ ಎಂದು ಹೇಳಿದೆ.!
''ಇಂದು ಬೆಳಗ್ಗೆ ನನ್ನ ಮನೆಗೆ ನಾಗಶೇಖರ್ ಹಾಗೂ ರವಿವರ್ಮ ಬಂದಿದ್ದರು. ಅವರು ಬಂದ ಕೂಡಲೆ, ಸರೆಂಡರ್ ಆಗಿ ಅಂತ ಹೇಳಿದೆ. ನನ್ನ ಕೆಲಸ ನಾನು ಮಾಡಿದ್ದೇನೆ'' - ದುನಿಯಾ ವಿಜಯ್ [ಅನಿಲ್, ಉದಯ್ ಕೊನೆಯ ಮಾತಲ್ಲಿ ಸಾವಿನ ಮುನ್ಸೂಚನೆಯ ಸುಳಿವು.!]
ಮ್ಯಾನೇಜರ್ ಭರತ್ ಎಲ್ಲಿದ್ದರೂ, ಬರಬೇಕು.!
''ಮ್ಯಾನೇಜರ್ ಭರತ್ ಎಲ್ಲಿದ್ದರೂ, ಬಂದು ಸರೆಂಡರ್ ಆಗಬೇಕು. ಕಾನೂನು ಕಣ್ಣಿನಿಂದ ತಪ್ಪಿಸಿಕೊಂಡರೆ ಭಾರಿ ಅನಾಹುತ ಎದುರಿಸಬೇಕಾಗುತ್ತೆ'' - ದುನಿಯಾ ವಿಜಯ್.
ಎದುರಿಸಲು ಸಿದ್ಧ
''ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ನನ್ನನ್ನೂ ವಿಚಾರಣೆ ಮಾಡಲಿ. ಎಲ್ಲದಕ್ಕೂ ನಾನು ರೆಡಿ ಇದ್ದೀನಿ. ಫೇಸ್ ಮಾಡುತ್ತೇನೆ'' - ದುನಿಯಾ ವಿಜಯ್